Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನಿಷೇಧ ಆದೇಶದ ತಡೆಯಾಜ್ಞೆಯ ತಕ್ಷಣದ...

ನಿಷೇಧ ಆದೇಶದ ತಡೆಯಾಜ್ಞೆಯ ತಕ್ಷಣದ ತೆರವಿಗೆ ಮೇಲ್ಮನವಿ ನ್ಯಾಯಾಲಯ ನಕಾರ

ವಾರ್ತಾಭಾರತಿವಾರ್ತಾಭಾರತಿ5 Feb 2017 7:56 PM IST
share
ನಿಷೇಧ ಆದೇಶದ ತಡೆಯಾಜ್ಞೆಯ ತಕ್ಷಣದ ತೆರವಿಗೆ ಮೇಲ್ಮನವಿ ನ್ಯಾಯಾಲಯ ನಕಾರ

ಲಾಸ್ ಏಂಜಲಿಸ್, ಫೆ. 5: ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ಮುಸ್ಲಿಮ್ ವಲಸೆ ನಿಷೇಧ ಆದೇಶವನ್ನು ತಕ್ಷಣ ಮರುಜಾರಿಗೆ ತರುವಂತೆ ಕಾನೂನು ಸಚಿವಾಲಯ ಮಾಡಿರುವ ಮನವಿಯನ್ನು ಅಮೆರಿಕದ ಫೆಡರಲ್ ಮೇಲ್ಮನವಿ ನ್ಯಾಯಾಲಯವೊಂದು ರವಿವಾರ ಬೆಳಗ್ಗೆ ತಿರಸ್ಕರಿಸಿದೆ.

 ಮುಸ್ಲಿಮ್ ಬಾಹುಳ್ಯದ ಏಳು ದೇಶಗಳ ನಿವಾಸಿಗಳು ಅಮೆರಿಕ ಪ್ರವೇಶಿಸುವುದನ್ನು ನಿಷೇಧಿಸುವ ಟ್ರಂಪ್ ಆದೇಶಕ್ಕೆ ಕೆಳ ಫೆಡರಲ್ ನ್ಯಾಯಾಲಯವೊಂದು ಇತ್ತೀಚೆಗೆ ತಡೆಯಾಜ್ಞೆ ನೀಡಿರುವುದನ್ನು ಸ್ಮರಿಸಬಹುದಾಗಿದೆ. ಈ ಆದೇಶವನ್ನು ಪ್ರಶ್ನಿಸಿ ಟ್ರಂಪ್ ಆಡಳಿತವು ಒಂಬತ್ತನೆ ಮೇಲ್ಮನವಿ ಸರ್ಕೀಟ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿತ್ತು.

ಸದ್ಯಕ್ಕೆ ಪ್ರಯಾಣ ನಿಷೇಧಕ್ಕೆ ನೀಡಿರುವ ತಡೆಯಾಜ್ಞೆ ಚಾಲ್ತಿಯಲ್ಲಿರುತ್ತದೆ.

ತಡೆಯಾಜ್ಞೆಯನ್ನು ತೆರವುಗೊಳಿಸಲು ಸಾಧ್ಯವಿಲ್ಲ ಎಂಬ ತಮ್ಮ ಆದೇಶಕ್ಕೆ ಫೀನಿಕ್ಸ್‌ನ ನ್ಯಾಯಾಧೀಶ ವಿಲಿಯಮ್ ಕ್ಯಾನ್ಬಿ ಜೂನಿಯರ್ ಮತ್ತು ಸಾನ್‌ಫ್ರಾನ್ಸಿಸ್ಕೊದ ನ್ಯಾಯಾಧೀಶೆ ಮಿಶೆಲ್ ಫ್ರೀಡ್‌ಲ್ಯಾಂಡ್ ಯಾವುದೇ ಕಾರಣ ನೀಡಿಲ್ಲ.

ಆದಾಗ್ಯೂ, ಸರಕಾರದ ಮೇಲ್ಮನವಿಗೆ ತಮ್ಮ ವಿರೋಧವನ್ನು ಸೂಚಿಸುವ ದಾಖಲೆಗಳನ್ನು ರವಿವಾರ ರಾತ್ರಿ 11.59ರ ಒಳಗೆ ಸಲ್ಲಿಸುವಂತೆ ನ್ಯಾಯಾಧೀಶರು ವಾಶಿಂಗ್ಟನ್ ಮತ್ತು ಮಿನಸೋಟ ರಾಜ್ಯಗಳಿಗೆ ಸೂಚಿಸಿದ್ದಾರೆ. ಈ ರಾಜ್ಯಗಳು ಟ್ರಂಪ್‌ರ ಮುಸ್ಲಿಮ್ ನಿಷೇಧ ಆದೇಶವನ್ನು ಪ್ರಶ್ನಿಸಿ ಮೊದಲಿಗೆ ಮೊಕದ್ದಮೆ ಹೂಡಿದ್ದವು.

ಅದೇ ವೇಳೆ, ತನ್ನ ನಿಲುವನ್ನು ಸಮರ್ಥಿಸುವ ಹೆಚ್ಚುವರಿ ದಾಖಲೆಗಳನ್ನು ರವಿವಾರ ಅಪರಾಹ್ನ 3 ಗಂಟೆಯ ಒಳಗೆ ಸಲ್ಲಿಸುವಂತೆ ನ್ಯಾಯಾಧೀಶರು ಕಾನೂನು ಇಲಾಖೆಗೆ ಸೂಚನೆ ನೀಡಿದ್ದಾರೆ.

ಇರಾನ್, ಇರಾಕ್, ಯಮನ್, ಸುಡಾನ್, ಸಿರಿಯ, ಲಿಬಿಯ ಮತ್ತು ಸೊಮಾಲಿಯ ದೇಶಗಳ ನಾಗರಿಕರಿಗೆ 90 ದಿನಗಳ ಕಾಲ ಅಮೆರಿಕ ಪ್ರವೇಶವನ್ನು ನಿಷೇಧಿಸಿ ಟ್ರಂಪ್ ಕಳೆದ ವಾರ ಸರಕಾರಿ ಆದೇಶ ಹೊರಡಿಸಿರುವುದನ್ನು ಸ್ಮರಿಸಬಹುದಾಗಿದೆ.


ತಡೆಯಾಜ್ಞೆಯಿಂದ ಸಾರ್ವಜನಿಕರ ಮೇಲೆ ದುಷ್ಪರಿಣಾಮ: ಮೇಲ್ಮನವಿ

ಡೊನಾಲ್ಡ್ ಟ್ರಂಪ್‌ರ ಮುಸ್ಲಿಮ್ ನಿಷೇಧ ಆದೇಶಕ್ಕೆ ವಾಶಿಂಗ್ಟನ್‌ನ ಫೆಡರಲ್ ನ್ಯಾಯಾಧೀಶ ಜೇಮ್ಸ್ ರೋಬರ್ಟ್ ನೀಡಿರುವ ತಡೆಯಾಜ್ಞೆ ಸಾರ್ವಜನಿಕರ ಮೇಲೆ ತಕ್ಷಣದ ದುಷ್ಪರಿಣಾಮ ಬೀರುತ್ತದೆ ಎಂಬುದಾಗಿ ಸರಕಾರ ತನ್ನ ಮೇಲ್ಮನವಿಯಲ್ಲಿ ಹೇಳಿದೆ.

ಅದೇ ವೇಳೆ, ಈ ಆದೇಶವು ಸರಕಾರಿ ಆದೇಶವೊಂದರ ಜಾರಿಗೆ ಅಡಚಣೆ ಉಂಟುಮಾಡಿದೆ ಹಾಗೂ ವಿದೇಶೀಯರನ್ನು ಒಳಗೆ ಬಿಡುವ ಮೂಲಕ ಎದುರಾಗುವ ಅಪಾಯದ ಪ್ರಮಾಣದ ಬಗ್ಗೆ ಅಧ್ಯಕ್ಷರು ತೆಗೆದುಕೊಂಡಿರುವ ಕ್ರಮಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದೂ ಅದು ಹೇಳಿದೆ.

ತನ್ನ ಆದೇಶಕ್ಕೆ ತಡೆಯಾಜ್ಞೆ ನೀಡಿರುವ ನ್ಯಾಯಾಧೀಶರನ್ನು ಟೀಕಿಸಿ ಟ್ರಂಪ್ ಶನಿವಾರ ಟ್ವೀಟ್ ಮಾಡಿರುವುದನ್ನು ಸ್ಮರಿಸಬಹುದಾಗಿದೆ. ‘ತಥಾಕಥಿತ’ ನ್ಯಾಯಾಧೀಶರು ನೀಡಿರುವ ತೀರ್ಪು ಹಾಸ್ಯಾಸ್ಪದ ಎಂಬುದಾಗಿ ಅವರು ಹೇಳಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X