Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಹಣ ಶುದ್ಧೀಕರಣ ಅಭಿಯಾನ’ದಡಿ ಒಂದು ಕೋಟಿ...

‘ಹಣ ಶುದ್ಧೀಕರಣ ಅಭಿಯಾನ’ದಡಿ ಒಂದು ಕೋಟಿ ಖಾತೆಗಳ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ5 Feb 2017 11:48 PM IST
share

ಹೊಸದಿಲ್ಲಿ,ಫೆ.5: ನೋಟು ಅಮಾನ್ಯ ಕ್ರಮದ ಬಳಿಕ ಬ್ಯಾಂಕ್ ಖಾತೆಗಳಲ್ಲಿ ಜಮೆಯಾಗಿರುವ ಕಪ್ಪುಹಣವನ್ನು ಪತ್ತೆ ಹಚ್ಚುವ ಪ್ರಯತ್ನವಾಗಿ ಆದಾಯ ತೆರಿಗೆ (ಐಟಿ)ಇಲಾಖೆಯು ಒಂದು ಕೋಟಿ ಬ್ಯಾಂಕ್ ಖಾತೆಗಳನ್ನು ತನ್ನ ಬಳಿಯಿರುವ ದತ್ತಾಂಶಗಳೊಂದಿಗೆ ಹೋಲಿಕೆಯ ಬಳಿಕ 2016, ನ.10ರಿಂದ ಡಿ.30ರವರೆಗೆ ಐದು ಲಕ್ಷ ರೂ.ಮತ್ತು ಅಧಿಕ ವೌಲ್ಯದ ಹಳೆಯ ನೋಟುಗಳನ್ನು ಠೇವಣಿ ಮಾಡಿರುವ 18 ಲಕ್ಷ ಜನರಿಗೆ ಆದಾಯ ಮೂಲವನ್ನು ವಿವರಿಸುವಂತೆ ಸೂಚಿಸಿದೆ.

ಐಟಿ ದಾಖಲೆಗಳಂತೆ 2014-15ನೇ ತೆರಿಗೆ ವರ್ಷದಲ್ಲಿ 3.5 ಕೋ.ಜನರು ಆದಾಯ ತೆರಿಗೆ ರಿಟರ್ನ್‌ಗಳನ್ನು ಸಲ್ಲಿಸಿದ್ದಾರೆ. ಜೊತೆಗೆ ಏಳು ಲಕ್ಷಕ್ಕೂ ಅಧಿಕ ಕಂಪೆನಿಗಳು, 9.40 ಲ.ಹಿಂದೂ ಅವಿಭಕ್ತ ಕುಟುಂಬಗಳು ಮತ್ತು 9.18 ಲ.ಸಂಸ್ಥೆಗಳೂ ರಿಟರ್ನ್‌ಗಳನ್ನು ಸಲ್ಲಿಸಿವೆ. ಆರ್ಥಿಕ ಸೇರ್ಪಡೆ ಅಭಿಯಾನದ ಅಂಗವಾಗಿ 25 ಕೋ.ಗೂ ಅಧಿಕ ಶೂನ್ಯ ಶಿಲ್ಕಿನ ಜನಧನ್ ಖಾತೆಗಳನ್ನೂ ತೆರೆಯಲಾಗಿದೆ.
ಜ.31ರಿಂದ ಆರಂಭಗೊಂಡಿರುವ ‘ಹಣ ಶುದ್ಧೀಕರಣ ಅಭಿಯಾನ’ದಡಿ ಎಲ್ಲ ವರ್ಗಗಳ ಖಾತೆಗಳನ್ನು ಐಟಿ ಇಲಾಖೆಯು ಪರಿಶೀಲಿಸುತ್ತಿದ್ದು, ಶಂಕಾಸ್ಪದ ಠೇವಣಿಗಳಿಗಾಗಿ ಇನ್ನಷ್ಟು ಎಸ್‌ಎಂಎಸ್/ಮೇಲ್‌ಗಳನ್ನು ಕಳುಹಿಸಲಿದೆ.
ತೆರಿಗೆದಾತರಿಗೆ ಕಿರುಕುಳವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ನೋಟು ಅಮಾನ್ಯದ ಬಳಿಕ ಬ್ಯಾಂಕ್ ಠೇವಣಿಗಳ ಕುರಿತಂತೆ ಉತ್ತರಗಳು ತೃಪ್ತಿದಾಯಕವಾಗಿಲ್ಲದಿದ್ದರೆ ಸಹಾಯಕ ಆಯುಕ್ತರು ಮತ್ತು ಮೇಲಿನ ದರ್ಜೆಯ ಅಧಿಕಾರಿಗಳು ಮಾತ್ರ ನೋಟಿಸನ್ನು ಹೊರಡಿಸುವುದನ್ನು ಕಂದಾಯ ಇಲಾಖೆಯು ಕಡ್ಡಾಯಗೊಳಿಸಿದೆ.
ನೋಟು ಅಮಾನ್ಯದ ಬಳಿಕ ತಮ್ಮ ಖಾತೆಗಳಲ್ಲಿ ಮಾಡಿರುವ ಠೇವಣಿಗಳನ್ನು ಇ-ದೃಢೀಕರಿಸುವಂತೆ ಮತ್ತು ತೆರಿಗೆ ಇ-ಫೈಲಿಂಗ್ ಪೋರ್ಟಲ್‌ನಲ್ಲಿ ಯಾವುದೇ ಅಸಮಂಜಸತೆ ಕುರಿತು ವಿಚಾರಣೆಗೆ ಉತ್ತರಿಸುವಂತೆ ತೆರಿಗೆದಾತರಿಗೂ ಇಲಾಖೆಯು ಸೂಚಿಸಿದೆ. ಇಂತಹ ಠೇವಣಿಯು ಆಯವ್ಯಯ ಪತ್ರದಲ್ಲಿಯ ಕೈಯಲ್ಲಿದ್ದ ಶಿಲ್ಕು ಹಣವಾಗಿದ್ದರೆ ಯಾವುದೇ ಪ್ರಶ್ನೆಯನ್ನು ಕೇಳಲಾಗುವುದಿಲ್ಲ ಮತ್ತು ಪ್ರಕರಣವನ್ನು ಅಲ್ಲಿಗೇ ಮುಕ್ತಾಯಗೊಳಿಸಲಾಗುವುದು. ತೆರಿಗೆದಾತರಿಗೆ ಯಾವುದೇ ಕಿರುಕುಳವಾಗದಂತೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ನಾವು ತೆಗೆದು ಕೊಂಡಿದ್ದೇವೆ ಎಂದು ಇಲಾಖಾ ಮೂಲಗಳು ತಿಳಿಸಿದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X