Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕುರ್‌ಆನ್ ಓದಿನಿಂದ ಶಾಂತಿಯ ಅನುಭವ : ...

ಕುರ್‌ಆನ್ ಓದಿನಿಂದ ಶಾಂತಿಯ ಅನುಭವ : ಲಿಂಡ್ಸೆ ಲೋಹನ್

ವಾರ್ತಾಭಾರತಿವಾರ್ತಾಭಾರತಿ6 Feb 2017 3:06 PM IST
share
ಕುರ್‌ಆನ್ ಓದಿನಿಂದ ಶಾಂತಿಯ ಅನುಭವ :  ಲಿಂಡ್ಸೆ ಲೋಹನ್

ಜಿದ್ದಾ,ಫೆ.6 :ಅರಬಿಕ್ ಟಿವಿ ಶೋ ಸಿವಾರ್ ಶೋಯೆಬ್ ನಲ್ಲಿ ಭಾಗವಹಿಸಿದ ಹಾಲಿವುಡ್ ನಟಿ ಲಿಂಡ್ಸೆ ಲೋಹನ್ ಇಸ್ಲಾಮ್ ಜತೆಗಿನ ತನ್ನ ಸಂಬಂಧವನ್ನು ಬಹಿರಂಗಪಡಿಸಿದ್ದು ಕುರ್ ಆನ್ ಓದಿ ತನಗೆ ಶಾಂತಿಯ ಅನುಭವವಾಗಿದೆ ಎಂದು ಹೇಳಿದ್ದಾರೆ.

ಲಿಂಡ್ಸೆ ಕುರ್ ಆನ್ ಪ್ರತಿಯೊಂದನ್ನು ಕೈಯಲ್ಲಿ ಹಿಡಿದಿರುವ ಖ್ಯಾತ ಫೊಟೋ ಬಗ್ಗೆ ಕಾರ್ಯಕ್ರಮದ ಹೋಸ್ಟ್ ಶೋಯೆಬ್ ರಶೀದ್ ಅವರು ಪ್ರಶ್ನಿಸಿದಾಗ ಯಾವುದೇ ತಡವರಿಕೆಯಿಲ್ಲದೆ ಉತ್ತರಿಸಿದ ನಟಿ ಆ ಫೋಟೋ ತೆಗೆಯುವ ಸಮಯದಲ್ಲಿ ತಾನು ಹಲವಾರು ತಳಮಳಗಳನ್ನು ಹೊಂದಿದ್ದಾಗಿ ಹಾಗೂ ಆ ಸಮಯ ಪವಿತ್ರ ಕುರ್ ಆನ್ ನ ಪ್ರತಿಯೊಂದನ್ನು ಕೈಯಲ್ಲಿ ಹಿಡಿದಿರುವುದು ಸುರಕ್ಷತೆಯ ಅನುಭವ ನೀಡಿದೆ ಎಂದು ಹೇಳಿದ್ದಾರೆ.

"ಧಾರ್ಮಿಕ ಗ್ರಂಥವನ್ನುಹಿಡಿಯುವ ಉದ್ದೇಶ ನನಗಿಲ್ಲವಾಗಿತ್ತಾದರೂ ನಾನು ಅದನ್ನು ಹಾಗೆಯೇ ಕೈಯಲ್ಲಿ ಹಿಡಿದಿದ್ದೆ. ಆದರೆ, ಅಮೇರಿಕಾದ ಜನರಿಗೆ ಅದು ಇಷ್ಟವಾಗಿಲ್ಲ ಹಾಗೂ ಅದಕ್ಕಾಗಿ ಅವರು ಹಲವಾರು ಕೆಟ್ಟ ಪದಗಳನ್ನು ಉಪಯೋಗಿಸಿದರು’’ ಎಂದು ಲಿಂಡ್ಸೆ ಹೇಳಿದ್ದಾರೆ.

ತಾನು ಇಸ್ಲಾಮಿಕ್ ಧರ್ಮಾನುಸಾರ ಪ್ರಾರ್ಥನೆ ಸಲ್ಲಿಸಿದ್ದಾಗಿ ಹಾಗೂ ರಮಝಾನ್ ತಿಂಗಳಲ್ಲಿ ಉಪವಾಸ ಆಚರಿಸಿದ್ದಾಗಿ ಅವರು ಹೇಳಿಕೊಂಡಿದ್ದಾರೆ. ‘‘ಕುವೈತ್ ನಲ್ಲಿ ನನ್ನ ಗೆಳೆಯರೊಬ್ಬರ ಜತೆ ರಮಝಾನ್ ಉಪವಾಸವನ್ನು ಮೂರು ದಿನ ಆಚರಿಸಿದೆ ಅದು ಕಷ್ಟವಾದರೂ ನನಗೆ ಒಳ್ಳೆಯ ಅನುಭವವಾಯಿತು’’ ಎಂದಿದ್ದಾರೆ.

ತಾನೀಗಾಗಲೇ ಕುರ್ ಆನ್ ನ 15 ಪುಟಗಳನ್ನು ಇಂಗ್ಲಿಷ್ ನಲ್ಲಿ ಓದಿರುವುದಾಗಿ ಹಾಗೂ ಕೆಲವೊಂದು ಅಧ್ಯಾಯಗಳನ್ನು ಅರಬಿಕ್  ಭಾಷೆಯಲ್ಲಿ ಬರೆಯಲು ಅಭ್ಯಾಸ ಮಾಡುತ್ತಿರುವುದಾಗಿಯೂ ತಿಳಿಸಿದರಲ್ಲದೆ ಆ್ಯಪ್ ಒಂದರ ಮುಖಾಂತರ ತಾನು ಕುರ್‌ಆನ್ ಪಠನವನ್ನು ತನ್ನ ಮೊಬೈಲ್ ನಲ್ಲಿ ಕೇಳುತ್ತಿರುವುದಾಗಿಯೂ ಲಿಂಡ್ಸೆ ಹೇಳಿದ್ದಾರೆ.

ಕುರ್ ಆನ್ ಓದಿ ಹೇಗಾಯಿತು ಎಂಬ ಪ್ರಶ್ನೆಗೆ ಉತ್ತರಿಸಿದ ಲಿಂಡ್ಸೆ ‘‘ಶಾಂತಿಯ ಅನುಭವವಾಯಿತು’’ ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X