Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 5ನೇ ಪರ್ಯಾಯದಲ್ಲಿ 35ನೇ ಸುಧಾಮಂಗಲ!

5ನೇ ಪರ್ಯಾಯದಲ್ಲಿ 35ನೇ ಸುಧಾಮಂಗಲ!

ಪೇಜಾವರಶ್ರೀ ದಾಖಲೆ

ವಾರ್ತಾಭಾರತಿವಾರ್ತಾಭಾರತಿ6 Feb 2017 10:49 PM IST
share
5ನೇ ಪರ್ಯಾಯದಲ್ಲಿ 35ನೇ ಸುಧಾಮಂಗಲ!

ಉಡುಪಿ, ಫೆ.6: ಉಡುಪಿ ಅಷ್ಟಮಠಗಳ ಇತಿಹಾಸದಲ್ಲಿ ಐದನೇ ಬಾರಿಗೆ ದ್ವೈವಾರ್ಷಿಕ ಕೃಷ್ಣ ಪೂಜಾ ಪರ್ಯಾಯ ದೀಕ್ಷೆ ಸ್ವೀಕರಿಸಿ ಈಗಾಗಲೇ ದಾಖಲೆ ಬರೆದಿರುವ ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಶ್ರೀಪಾದರು ಸೋಮವಾರ ತಮ್ಮ 35ನೇ ಶ್ರೀಮನ್ನ್ಯಾಯ ಸುಧಾ ಮಂಗಲೋತ್ಸವವನ್ನು ಸಂಪನ್ನಗೊಳಿಸಿ ಮತ್ತೊಂದು ದಾಖಲೆ ನಿರ್ಮಿಸಿದರು.

  ಸೋಮವಾರ ಕೃಷ್ಣ ಮಠದ ರಾಜಾಂಗಣದಲ್ಲಿ ಹೂವಿನಿಂದ ಸಿಂಗಾರಗೊಂಡ ವೇದಿಕೆಯ ನಡುವೆ ರಜತಮಂಟಪ ಮಧ್ಯದಲ್ಲಿ ಸ್ವರ್ಣಪಲ್ಲಕ್ಕಿಯಲ್ಲಿ ಹೊತ್ತು ತಂದ ಶ್ರೀಮನ್ನ್ಯಾಯ ಸುಧಾಗ್ರಂಥ ಮತ್ತು ಶ್ರೀವೇದವ್ಯಾಸರ ಸಾಲಿಗ್ರಾಮ ಮತ್ತು ವಿಗ್ರಹವನ್ನು ಸ್ಥಾಪಿಸಿದ ಕಾರ್ಯಕ್ರಮ ನಡೆಯಿತು.

  ಬನ್ನಂಜೆ ರಾಘವೇಂದ್ರ ತೀರ್ಥರು, ಸೋದೆಮಠದ ಶ್ರೀವಿಶ್ವವಲ್ಲಭ ತೀರ್ಥರು, ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀರ್ಥರು, ಬೆಂಗಳೂರಿನ ವಿಶ್ವಭೂಷಣ ತೀರ್ಥರು, ಭಂಡಾರಕೇರಿ ಮಠದ ಶ್ರೀವಿದ್ಯೇಶ ತೀರ್ಥರು, ಕೃಷ್ಣಾ ಪುರ ಮಠದ ಶ್ರೀವಿದ್ಯಾಸಾಗರ ತೀರ್ಥರು, ಮಂತ್ರಾಲಯ ಮಠದ ಶ್ರೀ ಸುಬುಧೇಂದ್ರ ತೀರ್ಥರು, ಪೇಜಾವರ ಕಿರಿಯ ಶ್ರೀವಿಶ್ವಪ್ರಸನ್ನತೀರ್ಥರು ಉಪನ್ಯಾಸ ನೀಡಿ ಶ್ರೀಮಧ್ವಾಚಾರ್ಯರ ಅನುವ್ಯಾಖ್ಯಾನ ಗ್ರಂಥಕ್ಕೆ ಶ್ರೀ ಜಯತೀರ್ಥರು ನ್ಯಾಯಸುಧಾ ವ್ಯಾಖ್ಯಾನ ಬರೆದು ಭಗವಂತನ ಅಸ್ತಿತ್ವದ ವಿಚಾರಗಳಲ್ಲಿ ಭಕ್ತರಿಗೆ ಬರಬಹುದಾದ ಸಂದೇಹಗಳನ್ನು ಅತ್ಯಂತ ಸರಳವಾಗಿ ಪರಿಹರಿಸಿದ್ದಾರೆ ಎಂದರು.

ಪೇಜಾವರ ಶ್ರೀಗಳು ಅದನ್ನು ನಿರಂತರ ಪಾಠ, ಪ್ರವಚನಗಳ ಮೂಲಕ ನೂರಾರು ವಿದ್ವಾಂಸರನ್ನು ಸಮಾಜಕ್ಕೆ ಧಾರೆಯೆರೆದಿದ್ದಾರೆ. ಪೇಜಾವರ ಶ್ರೀಗಳು ಜ್ಞಾನಗಂಗೆಯನ್ನು ಹರಿಸುತ್ತಿರುವ ಭಗೀರಥ, ಅವರೊಬ್ಬ ಸುಧಾರಕರೂ ಆಗಿದ್ದಾರೆಂದು ಬಣ್ಣಿಸಿದರು.

ನಂತರ ಪರ್ಯಾಯ ಪೇಜಾವರ ಶ್ರೀಗಳು ಮಂಗಲ ವ್ಯಾಖ್ಯಾನ ಮಂಡಿಸಿ ದರು. ಬಳಿಕ ಶ್ರೀ ಮನ್ನ್ಯಾಯ ಸುಧಾಗ್ರಂಥಕ್ಕೆ ಮಹಾಮಂಗಲಾರತಿ ಬೆಳಗಿ ಈ ಬಾರಿ ಸುಧಾಧ್ಯಯನ ಮುಗಿಸಿದ 20ವಿದ್ಯಾರ್ಥಿಗಳನ್ನು ಸಂಮಾನಿಸಿದರು. ಇದೇ ವೇಳೆ ಮಂತ್ರಾಲಯ ಕ್ಷೇತ್ರದ ವತಿಯಿಂದ ಪೇಜಾವರ ಶ್ರೀಗಳಿಗೆ ಮುತ್ತು, ರತ್ನ ಹಾಗೂ ನಾಣ್ಯಗಳಿಂದ ಅಭಿಷೇಕ ಮಾಡಿ ಶ್ರೀಸುಬುಧೇಂದ್ರ ತೀರ್ಥರು ಗೌರವಿಸಿದರು.

  ಸುಧಾಧ್ಯಯನದಲ್ಲಿ ಹಿರಿಯ ಶ್ರೀಗಳಿಗೆ ಸಾಥ್ ನೀಡಿದ ಕಿರಿಯ ಶ್ರೀಗಳನ್ನೂ ಮಂತ್ರಾಲಯದ ವಿದ್ವಾನ್ ರಾಜಾ ಎಸ್ ಗಿರಿ ಆಚಾರ್ಯರು ಗೌರವಿಸಿದರು. ಪರ್ಯಾಯ ಮಠದ ವತಿಯಿಂದ ಎಲ್ಲ ಶ್ರೀಪಾದರುಗಳನ್ನು ದಿವಾನರಾದ ಎಂ ರಘುರಾಮಾಚಾರ್ಯ ಗೌರವಿಸಿದರು.

 ಶ್ರೀವಿಶ್ವಗುರುಪ್ರಿಯ ತೀರ್ಥರು, ವಿದ್ವಾಂಸ ಸಗ್ರಿರಾಘವೇಂದ್ರ ಉಪಾಧ್ಯಾಯ, ಹರಿದಾಸ ಉಪಾಧ್ಯಾಯ, ಆನಂದತೀರ್ಥ ನಾಗಸಂಪಿಗೆ, ಎ.ಹರಿದಾಸ ಭಟ್, ಡಿ.ಪ್ರಹ್ಲಾದಾಚಾರ್ಯ, ಸತ್ಯನಾರಾಯಣಾಚಾರ್ಯ ಹಾಗೂ ಕೃಷ್ಣ ಮಠದ ಆಸ್ಥಾನ ವಿದ್ವಾಂಸರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X