Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರ ಸರಕಾರದಿಂದ ದೇಶದ ವೈವಿಧ್ಯಕ್ಕೆ...

ಕೇಂದ್ರ ಸರಕಾರದಿಂದ ದೇಶದ ವೈವಿಧ್ಯಕ್ಕೆ ಅಪಾಯ: ಆ್ಯಂಟನಿ

ವಾರ್ತಾಭಾರತಿವಾರ್ತಾಭಾರತಿ6 Feb 2017 11:50 PM IST
share

ತಿರುವನಂತಪುರಂ, ಫೆ.6: ಭಾರತದ ಶಕ್ತಿ ವೈವಿಧ್ಯದಲ್ಲಿ ಅಡಗಿದ್ದು, ಇದು ಪ್ರಸ್ತುತ ಕೇಂದ್ರದಲ್ಲಿ ಆಡಳಿತದಲ್ಲಿರುವ ಎನ್‌ಡಿಎ ಸರಕಾರದಿಂದ ಆಕ್ರಮಣಕ್ಕೆ ಒಳಗಾಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಎ.ಕೆ.ಆ್ಯಂಟನಿ ಹೇಳಿದ್ದಾರೆ.

ಕೇಂದ್ರ ಸರಕಾರ ಹಾಗೂ ಕೇರಳದಲ್ಲಿ ಅಧಿಕಾರದಲ್ಲಿರುವ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್ ಸರಕಾರದ ವಿರುದ್ಧ ಸರಣಿ ಪ್ರತಿಭಟನೆಯ ಅಭಿಯಾನದ ಪ್ರಯುಕ್ತ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಒಕ್ಕೂಟ ಹಮ್ಮಿಕೊಂಡಿರುವ ಸಮ್ಮೇಳನವನ್ನು ಉದ್ಘಾಟಿಸಿದ ಅವರು, ವೈವಿಧ್ಯತೆಯಲ್ಲಿ ಏಕತೆ ಎಂಬ ದೇಶದ ವೈಶಿಷ್ಟವನ್ನು ರಕ್ಷಿಸಿಕೊಳ್ಳಲು ಅಗ್ರ ಪ್ರಾಶಸ್ತ್ಯ ನೀಡಬೇಕಾಗಿದೆ ಎಂದರು.
ಬಿಜೆಪಿ ಮತ್ತು ಆರೆಸ್ಸೆಸ್ ಧರ್ಮದ ಹೆಸರಿನಲ್ಲಿ ಜನರನ್ನು ವಿಭಜಿಸಿ ಪರಸ್ಪರ ಎತ್ತಿಕಟ್ಟುತ್ತಿದ್ದಾರೆ. ವೈವಿಧ್ಯತೆಯಲ್ಲಿ ಏಕತೆ ಎಂಬ ದೇಶದ ಹೆಮ್ಮೆ ಮತ್ತು ವೈಶಿಷ್ಟತೆಯ ಮೇಲೆ ದಾಳಿ ನಡೆಸುವ ಪ್ರಯತ್ನ ನಡೆಯುತ್ತಿದೆ. ಇದನ್ನು ರಕ್ಷಿಸಬೇಕಿದೆ ಎಂದವರು ನುಡಿದರು.
ಉತ್ತರಪ್ರದೇಶ ಚುನಾವಣೆ ಬಳಿಕ ಕೇಂದ್ರ ಸರಕಾರ ತ್ರಿವಳಿ ತಲಾಖ್ ಪದ್ಧತಿಗೆ ನಿಷೇಧ ಹೇರುವ ಸಾಧ್ಯತೆಯಿದೆ ಎಂಬ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರ ಹೇಳಿಕೆಯನ್ನು ಟೀಕಿಸಿದ ಆ್ಯಂಟನಿ, ಚುನಾವಣೆ ಸಂದರ್ಭ ಬಿಜೆಪಿ ನಾಯಕರು ಕೋಮುವಾರು ಧ್ರುವೀಕರಣಕ್ಕೆ ಕಾರಣವಾಗುವ ಹೇಳಿಕೆಗಳನ್ನು ನೀಡುತ್ತಾರೆ ಎಂದರು.
ನೋಟು ಅಮಾನ್ಯ ನಿರ್ಧಾರವನ್ನು ಟೀಕಿಸಿದ ಅವರು, ಕೇಂದ್ರ ಸರಕಾರದ ‘ತುಘಲಕ್ ದರ್ಬಾರ್’ನಿಂದ ತೊಂದರೆಗೊಳಗಾದ ಜನರಿಗೆ ಪರಿಹಾರವನ್ನಾದರೂ ಸರಕಾರ ಕೊಡಬೇಕು ಎಂದು ಆಗ್ರಹಿಸಿದರು.

ರಾಜ್ಯದ ಎಲ್‌ಡಿಎಫ್ ಸರಕಾರದ ದುರಾಡಳಿತದ ಕಾರಣ ಆಡಳಿತಯಂತ್ರ ಸ್ಥಗಿತಗೊಂಡಿದೆ. ಸದಾ ಆತಂಕದ ಸ್ಥಿತಿ ಇರಬೇಕೆಂದು ಸಿಪಿಐ(ಎಂ) ಮತ್ತು ಬಿಜೆಪಿ ಬಯಸಿರುವುದು, ಸಿಪಿಐ(ಎಂ) ಹಾಗೂ ಆರೆಸ್ಸೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ನಿರಂತರವಾಗಿ ನಡೆಯುತ್ತಿರುವ ಘರ್ಷಣೆಗೆ ಕಾರಣ ಎಂದರು. ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರದ ಕೋಮುವಾದಿ ರಾಜಕೀಯ ಮತ್ತು ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್ ಸರಕಾರದ ದುರಾಡಳಿತದ ವಿರುದ್ಧ ಹೋರಾಡಬೇಕಿದೆ ಎಂದು ಆ್ಯಂಟನಿ ತಿಳಿಸಿದರು. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಒಂದೇ ರೆಕ್ಕೆಯ ಎರಡು ಹಕ್ಕಿಗಳು ಎಂದು ಬಣ್ಣಿಸಿದ ವಿಪಕ್ಷ ನಾಯಕ ರಮೇಶ್ ಚೆನ್ನಿತ್ತಿಲ, ಇಬ್ಬರು ನಾಯಕರೂ ಸರ್ವಾಧಿಕಾರಿ ಧೋರಣೆಯುಳ್ಳವರು ಎಂದು ಟೀಕಿಸಿದರು. ಯುಡಿಎಫ್ ಮುಖಂಡರಾದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಮುಖಂಡ ಪಾಣಕ್ಕಾಡ್ ಹೈದರಲಿ ತಂಙಳ್, ಕೆಪಿಸಿಸಿ ಅಧ್ಯಕ್ಷ ವಿ.ಎಂ.ಸುಧೀರನ್ ಮುಂತಾದವರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X