Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಮುದ್ರಕ್ಕೆ ಹರಿಯುವ ನದಿ ನೀರು...

ಸಮುದ್ರಕ್ಕೆ ಹರಿಯುವ ನದಿ ನೀರು ‘ತಡೆಹಿಡಿದು’ ಕುಡಿಯಲು-ಕೃಷಿ-ಕೈಗಾರಿಕೆಗಳಿಗೆ ಬಳಕೆ

ಪ್ರೊ.ಟಿ.ಜಿ.ಸೀತಾರಾಮ್‌ರಿಂದ ಸರಕಾರಕ್ಕೆ ಪ್ರಸ್ತಾವ

ವಾರ್ತಾಭಾರತಿವಾರ್ತಾಭಾರತಿ7 Feb 2017 8:17 PM IST
share
ಸಮುದ್ರಕ್ಕೆ ಹರಿಯುವ ನದಿ ನೀರು ‘ತಡೆಹಿಡಿದು’ ಕುಡಿಯಲು-ಕೃಷಿ-ಕೈಗಾರಿಕೆಗಳಿಗೆ ಬಳಕೆ

ಮಂಗಳೂರು, ಫೆ.7: ಸಮುದ್ರಕ್ಕೆ ಹರಿಯುವ ನದಿ ನೀರನ್ನು ಅಳಿವೆಬಾಗಿಲುಗಳ ಬಳಿ ಹೊಸತಂತ್ರಜ್ಞಾನದ ಮೂಲಕ ‘ತಡೆಹಿಡಿದು’ ಕುಡಿಯಲು ಮತ್ತು ಕೃಷಿಗೆ ಬಳಕೆ ಮಾಡುವ ಪ್ರಸ್ತಾವವೊಂದನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಲಾಗಿದೆ ಎಂದು ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್‌ನ ಎನರ್ಜಿ ಮತ್ತು ಮೆಕಾನಿಕಲ್ ಸೈನ್ಸಸ್‌ನ ಅಧ್ಯಕ್ಷ ಪ್ರೊ. ಟಿ.ಜಿ. ಸೀತಾರಾಮ ಹೇಳಿದರು.

ಡಾ. ಬಿ.ಆರ್.ಶೆಟ್ಟಿಯವರ ಬಿಆರ್‌ಎಸ್ ರಿಕ್ರಿಯೇಶನ್ ಪ್ರೈ.ಲಿ. ಇದರ ವತಿಯಿಂದ ಮಂಗಳವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ‘ಸಮುದ್ರಕ್ಕೆ ಹರಿಯುವ ನೆರೆನೀರನ್ನು ತಡೆಹಿಡಿದು ಹೇಗೆ ಬಳಸಬಹುದು?’ ಎಂಬುದರ ಬಗ್ಗೆ ನಡೆದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ದ.ಕ.ಜಿಲ್ಲೆಯಲ್ಲಿ ನೀರಿನ ಕೊರತೆಯಿಲ್ಲ. ಆದರೆ ಅದನ್ನು ಬಳಸಿಕೊಳ್ಳಬೇಕಾದ ತಂತ್ರಜ್ಞಾನದಲ್ಲಿ ಕೊರತೆಯಿದೆ. ಇದಕ್ಕೆ ಪರಿಹಾರ ಏನು? ಎಂಬುದರ ಬಗ್ಗೆ ಯೋಚಿಸದೆ ನೀರಿನ ಕೊರತೆಯಿದೆ ಎನ್ನುವುದು ಸರಿಯಲ್ಲ. ಮಂಗಳೂರಿನ 5 ಲಕ್ಷ ಜನರಿಗೆ ದಿನಕ್ಕೆ ಪ್ರತಿಯೊಬ್ಬರಿಗೆ 150 ಲೀ. ನೀರಿನಂತೆ ವರ್ಷಕ್ಕೆ 1 ಟಿಎಂಸಿ ನೀರು ಸಾಕು. ಈ ನೀರಿಗಾಗಿ ಅಲೆದಾಡುವ ಬದಲು ಸಮುದ್ರಕ್ಕೆ ಹರಿಯುವ ನದಿ ನೀರನ್ನು ತಡೆಹಿಡಿಯಬಹುದಾಗಿದೆ. ಅಂದರೆ ಅಳಿವೆಬಾಗಿಲು ಬಳಿ 14 ಕಿ.ಮೀ. ಉದ್ದದಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ ತಡೆಗೋಡೆ ನಿರ್ಮಿಸಿ ನೀರನ್ನು ತಡೆಹಿಡಿಯಬಹುದು. ಹೀಗೆ ತಡೆಹಿಡಿದ ನೀರಿನಲ್ಲಿ ಶೇ.10ನ್ನು ಕುಡಿಯಲು ಬಳಸಿದರೆ ಉಳಿದವುಗಳನ್ನು ಕೃಷಿ-ಕೈಗಾರಿಕೆಗಳಿಗೆ ಬಳಸಬಹುದು ಎಂದು ಪ್ರೊ.ಟಿ.ಜಿ.ಸೀತಾರಾಮ ವಿವರಿಸಿದರು.

ಭವಿಷ್ಯದ ಹಿತದೃಷ್ಟಿಯಿಂದ 25 ಟಿಎಂಸಿ ನೀರು ಸಂಗ್ರಹ ಯೋಜನೆಗೆ ಸುಮಾರು 3,500 ಕೋ.ರೂ. ಬೇಕಾಗಬಹುದು. ನದಿ ಜೋಡಣೆ, ನದಿತಿರುವು ಇತ್ಯಾದಿ ದುಬಾರಿ ವೆಚ್ಚದ ಯೋಜನೆಗಳಾಗಿವೆ. ಈಗಾಗಲೆ ಜಗತ್ತಿನ ವಿವಿಧ ರಾಷ್ಟ್ರಗಳಲ್ಲಿ ಈ ಹೊಸ ಯೋಜನೆ ಯಶಸ್ವಿಯಾಗಿದೆ. ಭಾರತದಲ್ಲಿ 5 ಸಾವಿರ ಅಣೆಕಟ್ಟುಗಳಿವೆ. ಆ ಪೈಕಿ ಕರ್ನಾಟಕದಲ್ಲಿ 234 ಅಣೆಕಟ್ಟುಗಳಿವೆ. ಅಲ್ಲಲ್ಲಿ ಅಣೆಕಟ್ಟು ಕಟ್ಟುವುದಕ್ಕಿಂತ ನದಿನೀರನ್ನು ತಡೆಗಟ್ಟಿ ಸದ್ಬಳಕೆ ಮಾಡಬಹುದಾಗಿದೆ ಎಂದು ಸೀತಾರಾಮ ಹೇಳಿದರು.

ಕೇವಲ 4 ತಿಂಗಳಲ್ಲಿ ಗುರುಪುರ, ಕುಮಾರಧಾರ, ನೇತ್ರಾವತಿ ನದಿಯಿಂದ 120 ಟಿಎಂಸಿ ನೀರು ಸಮುದ್ರ ಪಾಲಾಗುತ್ತಿವೆ. ರಾಜ್ಯದ 6 ಕೋಟಿ ಜನರಿಗೆ 90 ಟಿಎಂಸಿ ನೀರಿನ ಅಗತ್ಯವಿದೆ. ಹಾಗಾಗಿ ನೇತ್ರಾವತಿ ನದಿಯ ನೀರನ್ನೇ ರಾಜ್ಯಕ್ಕೆ ಬಳಸಬಹುದಾಗಿದೆ. ಈ ಯೋಜನೆಯ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಲಾಗಿದೆ. ಯೋಜನೆ ಜಾರಿಗೊಳಿಸುವುದಿದ್ದರೂ ಇದಕ್ಕೆ ಸಂಬಂಧಿಸಿದ ಡಿಪಿಆರ್ ಅನ್ನು ಸರಕಾರವೇ ತಯಾರಿಸಬೇಕಾಗಿದೆ ಎಂದು ಹೇಳಿದರು.

ಸಮುದ್ರಕ್ಕೆ ಹರಿಯುವ ನೆರೆನೀರನ್ನು ಬಳಕೆ ಮಾಡದಿದ್ದರೆ ಅದು ವ್ಯಯವಾಗಲಿದೆ. ಪ್ರವಾಹದ ನೀರನ್ನು ತಡೆಹಿಡಿದರೆ ಪರಿಸರಕ್ಕೆ ಹಾನಿಯಿಲ್ಲ, ನದಿಹರಿವಿಗೂ ತೊಂದರೆಯಿಲ್ಲ, ಮೀನುಗಾರಿಕೆಗೂ ಬಾಧಕವಿಲ್ಲ, ನದಿತಿರುವಿನ ಪ್ರಶ್ನೆಯೂ ಉದ್ಭವಿಸುವುದಿಲ್ಲ. ಜನರಿಗೆ, ಆಸ್ತಿಪಾಸ್ತಿಗೆ ಹಾನಿಯಿಲ್ಲ, ಪುನವರ್ಸತಿಯ ಪ್ರಶ್ನೆಯೂ ಉದ್ಭವಿಸುವುದಿಲ್ಲ, ನಗರ-ಹಳ್ಳಿಗಳಿಗೂ ಸಮಸ್ಯೆಯಿಲ್ಲ, ಕುಡಿಯುವ ನೀರು ಸಹಿತ ಕೃಷಿ-ಕೈಗಾರಿಕೆಗೆ ಯಥೇಚ್ಛ ನೀರು ಲಭಿಸಲಿದೆ, ಹೊಸ ಮೀನುಗಾರಿಕಾ ಬಂದರು ಸ್ಥಾಪನೆಗೆ ಅವಕಾಶ ಸಿಗಲಿದೆ, ಸೋಲಾರ್ ಪವರ್ ಯೋಜನೆ ಅನುಷ್ಠಾನಗೊಳಿಸಬಹುದು, ಜಲಕ್ರೀಡೆಗಳಿಗೂ ಅವಕಾಶ ನೀಡಬಹುದು, ಮರಳು ಸಂಗ್ರಹಗೊಂಡಲ್ಲಿ ಅದನ್ನೂ ಬಳಕೆ ಮಾಡಬಹುದು ಎಂದರು.

ಯೋಜನೆ ವಿರುದ್ಧ ಅಪಸ್ವರ

ಪ್ರೊ. ಟಿ.ಜಿ.ಸೀತಾರಾಮ ಪ್ರಾತ್ಯಕ್ಷಿತೆಯೊಂದಿಗೆ ಯೋಜನೆಯ ಬಗ್ಗೆ ಮಾಹಿತಿ ನೀಡಿದ ಬಳಿಕ ನಡೆದ ಪ್ರಶ್ನೋತ್ತರ ಸಂದರ್ಭ ಎನ್‌ಐಟಿಕೆ ನಿವೃತ್ತ ಪ್ರೊ. ಎಸ್. ಜಿ. ಮಯ್ಯ ಈ ಯೋಜನೆಯನ್ನೇ ಖಂಡಿಸಿದರು. ಇದೊಂದು ಅವೈಜ್ಞಾನಿಕ ಯೋಜನೆಯಾಗಿದೆ. ನೇತ್ರಾವತಿ ನದಿಯಲ್ಲಿ ಸಾಕಷ್ಟು ನೀರಿದೆ ಎಂದು ಯಾವ ಆಧಾರದಲ್ಲಿ ಹೇಳುತ್ತೀರಿ? ಅರ್ಥಹೀನ ಮಾತುಗಳ ಮೂಲಕ ಜಿಲ್ಲೆಯ ಜನರನ್ನು ಯಾಕೆ ಗೊಂದಲಕ್ಕೆ ಸಿಲುಕಿಸುತ್ತೀರಿ? ಎಂದು ಪ್ರಶ್ನಿಸಿ ತೀವ್ರ ತರಾಟೆಗೆ ತೆಗೆದುಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X