Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಫೆಲೆಸ್ತೀನಿಯರ ಜಮೀನು ಕದಿಯುತ್ತಿರುವ...

ಫೆಲೆಸ್ತೀನಿಯರ ಜಮೀನು ಕದಿಯುತ್ತಿರುವ ಇಸ್ರೇಲ್: ಅರಬ್ ಲೀಗ್

ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಮನೆಗಳನ್ನು ಮಾನ್ಯಮಾಡುವ ಕಾನೂನಿಗೆ ಇಸ್ರೇಲ್ ಅನುಮೋದನೆ

ವಾರ್ತಾಭಾರತಿವಾರ್ತಾಭಾರತಿ7 Feb 2017 9:27 PM IST
share
ಫೆಲೆಸ್ತೀನಿಯರ ಜಮೀನು ಕದಿಯುತ್ತಿರುವ ಇಸ್ರೇಲ್: ಅರಬ್ ಲೀಗ್

ಕೈರೋ, ಫೆ. 7: ಇಸ್ರೇಲ್ ಫೆಲೆಸ್ತೀನೀಯರ ಜಾಗವನ್ನು ಕದಿಯುತ್ತಿದೆ ಎಂದು ಅರಬ್ ಲೀಗ್ ಮಂಗಳವಾರ ಆರೋಪಿಸಿದೆ. ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಯಹೂದಿಯರ ಡಝನ್‌ಗಟ್ಟಳೆ ಕಾಲನಿಗಳನ್ನು ಕಾನೂನುಬದ್ಧಗೊಳಿಸುವ ಮಸೂದೆಯನ್ನು ಇಸ್ರೇಲ್ ಸಂಸತ್ತು ಅಂಗೀಕರಿಸಿದ ಬಳಿಕ ಲೀಗ್ ಈ ಪ್ರತಿಕ್ರಿಯೆ ನೀಡಿದೆ.

‘‘ಫೆಲೆಸ್ತೀನೀಯರ ಆಸ್ತಿಯನ್ನು ಕಬಳಿಸುವುದಕ್ಕಾಗಿ ಈ ಕಾನೂನನ್ನು ಮಾಡಲಾಗಿದೆ’’ ಎಂದು ಕೈರೋದಲ್ಲಿ ನೆಲೆ ಹೊಂದಿರುವ ಅರಬ್ ಲೀಗ್‌ನ ಮುಖ್ಯಸ್ಥ ಅಹ್ಮದ್ ಅಬುಲ್ ೇಟ್ ಹೇಳಿದರು.

ಖಾಸಗಿ ಆಸ್ತಿಯೆಂದು ಗೊತ್ತಿಲ್ಲದೆ ಅಥವಾ ಸರಕಾರ ಅನುಮತಿ ನೀಡಿರುವ ಕಾರಣಕ್ಕಾಗಿ ಫೆಲೆಸ್ತೀನೀಯರ ಖಾಸಗಿ ಜಮೀನುಗಳಲ್ಲಿ ಇಸ್ರೇಲಿಯರು ಮನೆಗಳನ್ನು ಕಟ್ಟಿದ್ದರೆ, ಆ ಜಮೀನುಗಳನ್ನು ಕಾನೂನುಬದ್ಧವಾಗಿ ವಶಪಡಿಸಿಕೊಳ್ಳಲು ಇಸ್ರೇಲ್‌ಗೆ ಈ ಕಾನೂನು ಅವಕಾಶ ಮಾಡಿಕೊಡುತ್ತದೆ.

ಇಂಥ ಪ್ರಕರಣಗಳಲ್ಲಿ ಜಮೀನುಗಳ ಫೆಲೆಸ್ತೀನ್ ಮಾಲೀಕರಿಗೆ ಆರ್ಥಿಕ ಪರಿಹಾರ ನೀಡಲಾಗುವುದು ಅಥವಾ ಬೇರೆ ಜಮೀನು ನೀಡಲಾಗುವುದು.
ಈ ಕಾನೂನು, ಸ್ವತಂತ್ರ ಫೆಲೆಸ್ತೀನ್ ದೇಶದ ಸ್ಥಾಪನೆ ಮತ್ತು ಎರಡು ದೇಶ ಪರಿಹಾರದ ಸಾಧ್ಯತೆಯನ್ನು ನಾಶಪಡಿಸುವ ಉದ್ದೇಶದ ಇಸ್ರೇಲ್ ನೀತಿಗಳ ಮುಂದುವರಿದ ಭಾಗವಾಗಿದೆ ಎಂದು ಅಬುಲ್ ೇಟ್ ಅಭಿಪ್ರಾಯಪಟ್ಟರು.

ಜೋರ್ಡಾನ್ ಖಂಡನೆ: ಇಸ್ರೇಲ್‌ನೊಂದಿಗೆ ರಾಜತಾಂತ್ರಿಕ ಸಂಬಂಧ ಹೊಂದಿರುವ ಕೆಲವೇ ಕೆಲವು ಅರಬ್ ದೇಶಗಳ ಪೈಕಿ ಒಂದಾಗಿರುವ ಜೋರ್ಡಾನ್ ಕೂಡ ಇಸ್ರೇಲ್‌ನ ಈ ಕಾನೂನನ್ನು ಖಂಡಿಸಿದೆ. ‘‘ಇದು ಪ್ರಚೋದನಕಾರಿ ಕಾನೂನಾಗಿದ್ದು, ಎರಡು-ದೇಶ ಪರಿಹಾರದ ಯಾವುದೇ ಭರವಸೆಯನ್ನು ಹೊಸಕಿಹಾಕುವ ಉದ್ದೇಶ ಹೊಂದಿದೆ’’ ಎಂದಿದೆ.

ಟರ್ಕಿ ಖಂಡನೆ

ಫೆಲೆಸ್ತೀನ್‌ನ ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಇಸ್ರೇಲಿಗರು ಅಕ್ರಮವಾಗಿ ಕಟ್ಟಿರುವ ಮನೆಗಳನ್ನು ಕಾನೂನುಬದ್ಧಗೊಳಿಸಲು ಇಸ್ರೇಲ್ ಸಂಸತ್ತು ಅಂಗೀಕರಿಸಿದ ಮಸೂದೆಯನ್ನು ಟರ್ಕಿ ಖಂಡಿಸಿದೆ.

‘‘ಫೆಲೆಸ್ತೀನೀಯರ ಖಾಸಗಿ ಜಮೀನಿನಲ್ಲಿ ನಿರ್ಮಿಸಲಾಗಿರುವ 4,000ಕ್ಕೂ ಅಧಿಕ ಮನೆಗಳನ್ನು ಕಾನೂನುಬದ್ಧಗೊಳಿಸುವ ಇಸ್ರೇಲ್ ಸಂಸತ್ತಿನ ನಿರ್ಣಯವನ್ನು ನಾವು ಬಲವಾಗಿ ಖಂಡಿಸುತ್ತೇವೆ’’ ಎಂದು ಟರ್ಕಿಯ ವಿದೇಶ ಸಚಿವಾಲಯ ಹೇಳಿಕೆಯೊಂದರಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X