Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟು ಅಮಾನ್ಯ ಸಮಯ ಅತ್ಯಂತ...

ನೋಟು ಅಮಾನ್ಯ ಸಮಯ ಅತ್ಯಂತ ಸೂಕ್ತವಾಗಿತ್ತು: ಪ್ರಧಾನಿ

ವಾರ್ತಾಭಾರತಿವಾರ್ತಾಭಾರತಿ7 Feb 2017 11:51 PM IST
share

ಹೊಸದಿಲ್ಲಿ,ಫೆ.7: ನೋಟು ಅಮಾನ್ಯ ಕ್ರಮ ಕುರಿತು ಟೀಕೆಗಳಿಗೆ ಇಂದು ಲೋಕಸಭೆಯಲ್ಲಿ ಉತ್ತರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಆರ್ಥಿಕತೆ ಉತ್ತಮ ಸ್ಥಿತಿಯಲ್ಲಿದ್ದರಿಂದ ನೋಟು ಅಮಾನ್ಯ ನಿರ್ಧಾರದ ಸಮಯ ಅತ್ಯಂತ ಸೂಕ್ತವಾಗಿತ್ತು ಎಂದು ಹೇಳಿದರು. ಕಾಂಗ್ರೆಸ್ ಪಕ್ಷವನ್ನು ತೀವ್ರ ತರಾಟೆಗೆತ್ತಿಕೊಂಡ ಅವರು,ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಅದರ ಸಾಧನೆಗಳನ್ನು ಪ್ರಶ್ನಿಸಿದರು.
ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸುತ್ತಿದ್ದ ಪ್ರಧಾನಿ, ಸರ್ಜಿಕಲ್ ದಾಳಿಗಳು ಹಾಗೂ ನರೇಗಾ ಯೋಜನೆ, ಕೃಷಿ ಕ್ಷೇತ್ರ ಮತ್ತು ಪರಿಶಿಷ್ಟ ಜಾತಿಗಳ ಅಭ್ಯುದಯಕ್ಕೆ ಹಣ ಹಂಚಿಕೆ ಸೇರಿದಂತೆ ಪ್ರತಿಪಕ್ಷವು ಎತ್ತಿದ್ದ ವಿವಿಧ ವಿಷಯಗಳಿಗೆ ಒಂದೊಂದಾಗಿ ಉತ್ತರಿಸಿದರು.

ಪ್ರತಿಪಕ್ಷವು ವಂದನಾ ನಿರ್ಣಯಕ್ಕೆ 190 ತಿದ್ದುಪಡಿಗಳನ್ನು ಸೂಚಿಸಿತ್ತಾದರೂ ಅವೆಲ್ಲ ತಿರಸ್ಕೃತಗೊಂಡವು. ಬಳಿಕ ಕಾಂಗ್ರೆಸ್‌ನ ಸಭಾತ್ಯಾಗದ ನಡುವೆಯೇ ಸದನವು ವಂದನಾ ನಿರ್ಣಯವನ್ನು ಅಂಗೀಕರಿಸಿತು. ಮೋದಿ ಅವರು ಸದನವನ್ನುದ್ದೇಶಿಸಿ ಮಾಡಿದ 90 ನಿಮಿಷಗಳ ಭಾಷಣಕ್ಕೆ ಆಗಾಗ್ಗೆ ಕೆಲವು ಪ್ರತಿಪಕ್ಷ ಸದಸ್ಯರಿಂದ ವ್ಯತ್ಯಯವುಂಟಾಗುತ್ತಲೇ ಇತ್ತು.
ಏಕಕಾಲದಲ್ಲಿ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳನ್ನು ನಡೆಸುವುದಕ್ಕೆ ಒತ್ತು ನೀಡಿದ ಮೋದಿ, ರಾಜಕೀಯ ಮತಭೇದಗಳನ್ನು ಮರೆತು ಈ ಪ್ರಸ್ತಾವನೆಯನ್ನು ಪರಿಗಣಿಸುವಂತೆ ಎಲ್ಲ ಪಕ್ಷಗಳನ್ನು ಕೋರಿಕೊಂಡರು.
ನೋಟು ರದ್ದತಿ ಕುರಿತಂತೆ ನಿರಂತರವಾಗಿ ಟೀಕೆಗಳಿಗೆ ಗುರಿಯಾಗಿರುವ ಮೋದಿ, ಕಳೆದ ವರ್ಷದ ನ.8ರಂದು ಪ್ರಕಟಿಸಲಾಗಿದ್ದ ನೋಟು ಅಮಾನ್ಯ ನಿರ್ಧಾರದ ಸಮಯ ಅತ್ಯಂತ ಸೂಕ್ತವಾಗಿತ್ತು. ಆರ್ಥಿಕತೆಯು ಉತ್ತಮ ಸ್ಥಿತಿಯಲ್ಲಿದ್ದಾಗ ನೋಟು ಅಮಾನ್ಯ ನಿರ್ಧಾರವೇಕೆ ಎಂದು ಕೆಲವರು ಪ್ರಶ್ನಿಸಿದ್ದರು. ಆರ್ಥಿಕತೆ ದೃಢವಾಗಿದ್ದರಿಂದಲೇ ಅದು ನೋಟು ರದ್ದತಿಗೆ ಅತ್ಯುತ್ತಮ ಸಮಯವಾಗಿತ್ತು. ಆರ್ಥಿಕತೆಯು ದುರ್ಬಲವಾಗಿದ್ದರೆ ನಾವು ಅದನ್ನು ಯಶಸ್ವಿಯಾಗಿ ಮಾಡಲು ಆಗುತ್ತಿರಲಿಲ್ಲ ಎಂದರು.
ರೋಗಿಯನ್ನು ಶಸ್ತ್ರಚಿಕಿತ್ಸೆಗೊಳಪಡಿಸುವ ಮುನ್ನ ವೈದ್ಯರು ಎಲ್ಲ ವೈದ್ಯಕೀಯ ತಪಾಸಣೆಗಳನ್ನು ಕೈಗೊಂಡು ಅದು ತೃಪ್ತಿಕರವಾಗಿದ್ದರೆ ಮಾತ್ರ ಮುಂದಡಿಯಿಡುತ್ತಾರೆ. ತನ್ನ ಸರಕಾರವೂ ನೋಟು ರದ್ದತಿ ನಿರ್ಣಯ ಕೈಗೊಳ್ಳುವ ಮುನ್ನ ಎಲ್ಲ ಮಾನದಂಡಗಳನ್ನು ಪರಿಶೀಲಿಸಿತ್ತು ಎಂದ ಅವರು, ಕೆಲವು ವರ್ಗಗಳು ವಾದಿಸಿರುವಂತೆ ಈ ನಿರ್ಣಯವನ್ನು ಅವಸರ ದಲ್ಲಿ ಕೈಗೊಂಡಿರಲಿಲ್ಲ. ಮೋದಿ ಏನನ್ನಾದರೂ ಅವಸರದಲ್ಲಿ ಮಾಡುತ್ತಾರೆಂದು ಭಾವಿಸಬೇಡಿ. ಅದಕ್ಕಾಗಿ ನೀವು ಮೋದಿ ಯನ್ನು ಅಧ್ಯಯನ ಮಾಡುವುದು ಅಗತ್ಯವಾಗುತ್ತದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X