Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಳ್ಯ, ಪುತ್ತೂರು, ಬೆಳ್ತಂಗಡಿ...

ಸುಳ್ಯ, ಪುತ್ತೂರು, ಬೆಳ್ತಂಗಡಿ ತಾಲೂಕನ್ನು ಬರಪೀಡಿತ ಪ್ರದೇಶವನ್ನಾಗಿ ಘೋಷಿಸಬೇಕು

ಮುಖ್ಯಮಂತ್ರಿಗೆ ಕೆಪಿಸಿಸಿ ಕಿಸಾನ್ ಘಟಕದ ಅಧ್ಯಕ್ಷ ಮನವಿ

ವಾರ್ತಾಭಾರತಿವಾರ್ತಾಭಾರತಿ8 Feb 2017 6:36 PM IST
share
ಸುಳ್ಯ, ಪುತ್ತೂರು, ಬೆಳ್ತಂಗಡಿ ತಾಲೂಕನ್ನು ಬರಪೀಡಿತ ಪ್ರದೇಶವನ್ನಾಗಿ ಘೋಷಿಸಬೇಕು

ಮಂಗಳೂರು, ಫೆ.8: ದ.ಕ.ಜಿಲ್ಲೆಯ ಸುಳ್ಯ, ಪುತ್ತೂರು, ಬೆಳ್ತಂಗಡಿ ತಾಲೂಕನ್ನು ಬರಪೀಡಿತ ಪ್ರದೇಶವನ್ನಾಗಿ ಘೋಷಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ ಮಾಡಲಾಗುವುದು ಎಂದು ಕೆಪಿಸಿಸಿ ಕಿಸಾನ್ ಘಟಕದ ಅಧ್ಯಕ್ಷ ಸಚಿನ್ ಮಿಗಾ ತಿಳಿಸಿದರು.

ಬುಧವಾರ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಏರ್ಪಡಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಮಂಗಳೂರು ಮತ್ತು ಬಂಟ್ವಾಳವನ್ನು ಮಾತ್ರ ಬರಪೀಡಿತ ತಾಲೂಕು ಎಂದು ಘೋಷಿಸಲಾಗಿದೆ. ಇದು ನಗರ ಪ್ರದೇಶವಾಗಿದ್ದು, ರೈತರು ಕಡಿಮೆಯಿದ್ದಾರೆ. ರೈತರು ಅಧಿಕ ಸಂಖ್ಯೆಯಲ್ಲಿರುವ ಸುಳ್ಯ, ಪುತ್ತೂರು, ಬೆಳ್ತಂಗಡಿಯನ್ನು ಕೂಡಾ ಬರಪೀಡಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದರು.

ರಾಜ್ಯದಲ್ಲಿ ಬರದ ಛಾಯೆ ಹಾಗೂ ನೋಟು ಅಮಾನತಿನ ಸಮಸ್ಯೆಯಿದೆ. ಹಾಗಾಗಿ ಯಾವುದೇ ಬ್ಯಾಂಕ್‌ಗಳು ರೈತರಿಂದ ಬಲವಂತವಾಗಿ ಸಾಲ ವಸೂಲಾತಿ ಮಾಡಬಾರದು. ಒಂದು ವೇಳೆ ಈ ರೀತಿ ಮಾಡಿದಲ್ಲಿ ಬ್ಯಾಂಕ್ ಮೇನೆಜರ್ ಹಾಗೂ ವ್ಯವಸ್ಥಾಪಕ ನಿರ್ದೇಶಕರ ವಿರುದ್ಧ ದೂರು ನೀಡಲಾಗುವುದು ಎಂದು ಎಚ್ಚರಿಸಿದ ಅವರು, ಅಡಿಕೆ ಬೆಳೆಗಾರರ ಸಾಲ ಮನ್ನಾ ಮಾಡುವ ಬಗ್ಗೆ ಗೋರಕ್ ಸಿಂಗ್ ವರದಿಯನ್ನು ಜಾರಿಗೊಳಿಸಲು ಸುಪ್ರೀಂಕೋರ್ಟ್‌ನಲ್ಲಿ ದಾವೆ ಹೂಡಲಾಗಿದೆ. ಅದರ ತೀರ್ಪು ಫೆ.20ರಂದು ಹೊರಬರಲಿದೆ. ತೀರ್ಪು ಘೋಷಣೆಯಾಗುವವರೆಗೂ ಯಾವುದೇ ಬ್ಯಾಂಕ್ ಬಾಕಿ ವಸೂಲಿ ಮಾಡಬಾರು ಎಂದು ಒತ್ತಾಯಿಸಿದರು.

ಕೇಂದ್ರ ಸರಕಾರ ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ಶೇ. 50ರಷ್ಟು ರೈತರ ಸಾಲ ಮನ್ನಾ ಮಾಡಿದಲ್ಲಿ ರಾಜ್ಯ ಸರಕಾರ ಸಹಕಾರಿ ಬ್ಯಾಂಕ್‌ಗಳಿಂದ ಶೇ. 50ರಷ್ಟು ರೈತರ ಸಾಲ ಮನ್ನಾ ಮಾಡುತ್ತದೆ ಎಂದು ತಿಳಿಸಿದ್ದರೂ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಂಡಿಲ್ಲ. ಕೇಂದ್ರ ರೈತ ಪರ ಬಜೆಟ್ ಮಂಡಿಸಲಾಗಿದೆ ಎಂದು ಹೇಳುತ್ತಿದ್ದು, ರೈತರ ಸಾಲ ಮನ್ನಾ ಮಾತ್ರ ಮಾಡುತ್ತಿಲ್ಲ. ಎನ್‌ಪಿಎ ಖಾತೆಯಲ್ಲಿ ರೈತರು 12 ತಿಂಗಳ ಪೈಕಿ 3 ತಿಂಗಳು ಸಾಲ ಬಾಕಿ ಮಾಡಿದಾಗ 12 ತಿಂಗಳ ಸಾಲವನ್ನು ಒಮ್ಮೆಲೆ ಕಟ್ಟಲು ಬ್ಯಾಂಕ್‌ಗಳು ನೋಟಿಸ್ ಕಳುಹಿಸಿವೆ. 3 ತಿಂಗಳ ಸಾಲ ಕಟ್ಟಲಾಗದ ರೈತರು 12 ತಿಂಗಳ ಸಾಲ ಒಮ್ಮೆಲೆ ಕಟ್ಟಲು ಹೇಗೆ ಸಾಧ್ಯ? ಇದು ಅವೈಜ್ಞಾನಿಕವಾಗಿದ್ದು, ಇದನ್ನು ಬದಲಾವಣೆ ಮಾಡಬೇಕು ಎಂದು ಸಚಿನ್ ಮಿಗಾ ಒತ್ತಾಯಿಸಿದರು.

ಪರಿಸರ ನಾಶದ ಹಿನ್ನೆಲೆಯಲ್ಲಿ ಉದ್ಯಮಿಗಳಿಗೆ ಯುಪಿಎ ಸರಕಾರ 200 ಕೋ.ರೂ. ದಂಡ ಹೇರಿತ್ತು. ಅದನ್ನು ಪ್ರಧಾನಿ ಮೋದಿ ಹಿಂಪಡೆದಿದ್ದಾರೆ. ಆರ್‌ಬಿಐ ಗವರ್ನರ್ ರಘುರಾಮ್‌ರ ಬದಲಿಗೆ ಕಾರ್ಯತಂತ್ರ ರೂಪಿಸಿ ಊರ್ಜಿತ್ ಪಟೇಲ್‌ರನ್ನು ನೇಮಿಸಿ ಅವ್ಯವಹಾರ ನಡೆಸಲು ಅವರನ್ನು ಕಪಿಮುಷ್ಠಿಯಲ್ಲಿರಿಸಿದೆ. ಪ್ರಧಾನ ಮಂತ್ರಿ ಸಲ್ ಭಿಮಾ ಯೋಜನೆ ಕೈಗೊಂಡು 15,000 ಕೋ.ರೂ. ಇದಕ್ಕೆ ಇರಿಸಲಾಗಿದ್ದು, ಇದರ ಬಗ್ಗೆ ಚರ್ಚೆಯಾಗುತ್ತಿದೆ ಎಂದು ಆರೋಪಿಸಿದರು.

ಪ್ರಧಾನಿ ಮೋದಿಯ ನಡೆಯಿಂದ ರೈತರಿಗೆ, ಕಾರ್ಮಿಕರಿಗೆ, ಸಾಮಾನ್ಯ ಜನರಿಗೆ ತೊಂದರೆಗಳಾಗಿವೆ. ವಿದೇಶದಲ್ಲಿರುವ ಕಪ್ಪು ಹಣವನ್ನು ಸಂಪೂರ್ಣವಾಗಿ ತಂದು ದೇಶದ ಪ್ರತಿಯೊಬ್ಬ ನಾಗರಿಕನ ಖಾತೆಗೆ 15 ಲಕ್ಷ ರೂ. ಜಮಾ ಮಾಡುತ್ತೇನೆಂದು ಆಶ್ವಾಸನೆ ನೀಡಿದ್ದನ್ನು ಜನತೆ ನಂಬಿದ್ದರು. ಲೋಕಸಭೆ ಚುನಾವಣೆಯ ವೇಳೆ ಅದಾನಿ, ಅಂಬಾನಿ ಉದ್ಯಮಿಗಳಿಂದ ಹಣ ಪಡೆದು ಹೆಚ್ಚಿನ ಪ್ರಚಾರ ನೀಡಿದರು. ಈಗ ಉದ್ಯಮಿಗಳ ಹಣ ಹಿಂತಿರುಗಿಸುವಲ್ಲಿ ಇಕ್ಕಟ್ಟಿಗೆ ಸಿಲುಕಿ ಹುನ್ನಾರ ನಡೆಸಿದ್ದಾರೆ. ರಾಷ್ಟ್ರದ ಗಮನವನ್ನು ಬೇರೆಡೆ ಸೆಳೆದು ನಮ್ಮಲ್ಲಿಯೇ ಕಪ್ಪು ಹಣ ಇರುವುದಾಗಿ ತೋರಿಸಿ ಉದ್ಯಮಿಗಳ 1.14 ಲಕ್ಷ ಕೋ.ರೂ. ವನ್ನು ಮನ್ನಾ ಅಥವಾ ಬ್ಲ್ಯಾಕ್‌ಲಿಸ್ಟ್‌ಗೆ ಹಾಕಿದ್ದಾರೆ. ಜಿಯೋ ಸಿಮ್ ಮೂಲಕ ಯುವಕರು 24 ಗಂಟೆಗಳಲ್ಲಿ 18 ಗಂಟೆಗಳ ಕಾಲ ಅಂತರ್ಜಾಲದಲ್ಲೇ ತೊಡಗಿಕೊಳ್ಳುವಂತೆ ಮಾಡಿದ್ದಾರೆ. 1.14 ಲಕ್ಷ ಕೋ.ರೂ. ಮನ್ನಾ ಅಥವಾ ಬ್ಲ್ಯಾಕ್‌ಲಿಸ್ಟ್ ಹಾಕಿರುವ ಬಗ್ಗೆ ದೇಶದ ಜನರಿಗೆ ತಿಳಿದಿದ್ದರೆ ಬೀದಿಗಿಳಿದು ಹೋರಾಟ ಮಾಡುತ್ತಿದ್ದರು. ಪ್ರಧಾನಿ ಹಾಗೂ ಅಮಿತ್ ಶಾ ಪಕ್ಷದ ಮುಖಂಡರ ಕಪ್ಪು ಹಣವನ್ನು ವ್ಯವಸ್ಥಿತವಾಗಿ ರೂಪಾಂತರಗೊಳಿಸಿದ್ದಾರೆ ಎಂದು ಆರೋಪಿಸಿದರು.

 ದ.ಕ.ಜಿಲ್ಲಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಉಮಾನಾಥ ಶೆಟ್ಟಿ, ನವೀನ್ ಕುಮಾರ್ ರೈ, ಭರತೇಶ್ ಅಮಿನ್, ನೀರಜ್‌ಪಾಲ್, ನಿತ್ಯಾನಂದ ಶೆಟ್ಟಿ, ಸಂತೋಷ್ ಶೆಟ್ಟಿ, ಅಶೋಕ್ ಚೂಂತಾರು, ಆನಂದ ರಾವ್, ನಝೀರ್ ಬಜಾಲ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X