Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಉಳ್ಳಾಲ ನಿವಾಸಿಯನ್ನು ಬಂಧಮುಕ್ತಗೊಳಿಸಿದ...

ಉಳ್ಳಾಲ ನಿವಾಸಿಯನ್ನು ಬಂಧಮುಕ್ತಗೊಳಿಸಿದ ಸೋಶಿಯಲ್ ಫೋರಮ್

ಸೌದಿಅರೇಬಿಯ: ನಿಷೇಧಿತ ಔಷಧಿ ಸಾಗಾಟ ಪ್ರಕರಣ

ಎ.ಎಂ.ಆರಿಫ್ ಜೋಕಟ್ಟೆಎ.ಎಂ.ಆರಿಫ್ ಜೋಕಟ್ಟೆ9 Feb 2017 3:22 PM IST
share

ದಮಾಮ್, ಫೆ.9: ನಿಷೇಧಿತ ಔಷಧಿ ಹೊಂದಿದ್ದ ಪ್ರಕರಣದಲ್ಲಿ ದಮಾಮ್ ವಿಮಾನ ನಿಲ್ದಾಣದಲ್ಲಿ ಸೌದಿಅರೇಬಿಯ ಪೊಲೀಸರಿಂದ ಬಂಧಿಸಲ್ಪಟ್ಟು ಕಳೆದ ಮೂರು ತಿಂಗಳಿನಿಂದ ಜೈಲಿನಲ್ಲಿದ್ದ ಉಳ್ಳಾಲ ನಿವಾಸಿ ಫಯಾಝ್ ಇಂಡಿಯನ್ ಸೋಶಿಯಲ್ ಫೋರಮ್ ನ ನಿರಂತರ ಪರಿಶ್ರಮದ ಫಲವಾಗಿ ಬಿಡುಗಡೆಗೊಂಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಅನಿವಾಸಿ ಭಾರತೀಯರು ಸರಿಯಾದ ಮಾಹಿತಿಯ ಕೊರತೆಯಿಂದಾಗಿ ಈ ರೀತಿಯ ಪ್ರಕರಣಗಳಲ್ಲಿ ಸಿಲುಕುತ್ತಿದ್ದು ಸೌದಿಅರೇಬಿಯದ ಕಾನೂನು ಇಂತಹ ಪ್ರಕರಣಗಳಿಗೆ ಕಠಿಣ ಶಿಕ್ಷೆ ವಿಧಿಸುತ್ತದೆ. ಫಯಾಝ್ ಉಳ್ಳಾಲ ಅವರ ಪ್ರಕರಣದಲ್ಲಿ ಇಂಡಿಯನ್ ಸೋಶಿಯಲ್ ಫೋರಮ್ ಸದಸ್ಯರಾದ ನೌಶಾದ್ ಕಾಟಿಪಳ್ಳ, ಇಬ್ರಾಹೀಮ್ ಕೃಷ್ಣಾಪುರ ಅವರ ತಂಡವು  ಭಾರತೀಯ ರಾಯಭಾರಿ ಕಚೇರಿಯ ಸಹಕಾರದೊಂದಿಗೆ ಪ್ರಾಯೋಜಕ ಮತ್ತು ಜೈಲು ಅಧಿಕಾರಿಗಳನ್ನು ಸಂಪರ್ಕಿಸಿ ಪ್ರಕರಣವನ್ನು ಇತ್ಯರ್ಥಗೊಳಿಸುವಲ್ಲಿ ಯಶಸ್ವಿಯಾಗಿದೆ.

ಪ್ರಕರಣದ ವಿವರ: ಉದ್ಯೋಗ ನಿಮಿತ್ತ 3 ತಿಂಗಳ ಹಿಂದೆ ಸೌದಿ ಅರೇಬಿಯಕ್ಕೆ ತೆರಳಿದ್ದ ಉಳ್ಳಾಲದ ಇಬ್ರಾಹೀಮ್ ಎಂಬವರ ಪುತ್ರ ಫಯಾಝ್ ಉಳ್ಳಾಲ ರವರು ತನ್ನ ಚಿಕಿತ್ಸೆಗಾಗಿ ಕೆಲವೊಂದು ಔಷಧಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಹೊಂದಿದ್ದರು. ದಮಾಮ್ ಕಸ್ಟಮ್ಸ್ ಅಧಿಕಾರಿಗಳು ಇದನ್ನು ಪತ್ತೆಹಚ್ಚಿ ಸ್ಥಳೀಯ ಪೊಲೀಸರಿಗೆ ಒಪ್ಪಿಸಿದ್ದರು.

ಇದು ಅಕ್ರಮ ದ್ರವ್ಯ ಸಾಗಾಟವಾಗಿ ಪರಿಗಣಿಸಲಾಗುತ್ತದೆ. ಇಂತಹ ಪ್ರಕರಣಗಳಿಗೆ ಸಾಮಾನ್ಯವಾಗಿ  ಜಾಮೀನು ಅಥವಾ ಬಿಡುಗಡೆಯ ಸಾಧ್ಯತೆ ತೀರಾ ವಿರಳ. ಈ ಬಗ್ಗೆ ಮಂಗಳೂರು ಸಂಸದ ನಳಿನ್ ಕುಮಾರ್, ವಿದೇಶಾಂಗ ಸಚಿವೆ ಸುಶ್ಮಾ ಸ್ವರಾಜ್ ಅವರಿಗೂ ಮನವಿ ಸಲ್ಲಿಸಲಾಗಿತ್ತು.

ಆದರೆ ಕಳೆದ ಮೂರು ತಿಂಗಳಿನಿಂದ ಪ್ರಕರಣಕ್ಕೆ ಸಂಬಂಧಿಸಿ ಯಾವುದೇ ಪ್ರಗತಿ ಕಾಣದಿರುವ ಹಿನ್ನೆಲೆಯಲ್ಲಿ ಸಂಬಂಧಿಕರು ಇಂಡಿಯನ್ ಸೋಶಿಯಲ್ ಫೋರಮ್ ನ್ನು ಸಂಪರ್ಕಿಸಿ ಪ್ರಕರಣದ ವಿವರವನ್ನು ಒದಗಿಸಿದ್ದರು.

ಪ್ರಕರಣವನ್ನು ದಮಾಮ್ ಭಾರತೀಯ ರಾಯಭಾರಿ ಕಚೇರಿಯಲ್ಲಿ ನೋಂದಾಯಿಸಿ, ಸಂತ್ರಸ್ತ ಫಯಾಝ್ ಉಳ್ಳಾಲರವರ ಪರವಾಗಿ ವಕಾಲತು ವಹಿಸಿಕೊಂಡು ಸೌದಿ ಪ್ರಾಯೋಜಕ ಹಾಗೂ ಜೈಲಧಿಕಾರಿಯನ್ನು ಸಂಪರ್ಕಿಸಿ ಪ್ರಕರಣದ ಇತ್ಯರ್ಥಕ್ಕೆ ಸಂಬಂಧಿಸಿದ ಅಗತ್ಯ ದಾಖಲೆ ಪತ್ರಗಳನ್ನು ಒದಗಿಸಿದ ಫಲವಾಗಿ ಫೆಬ್ರವರಿ 6 ರಂದು ಬಿಡುಗಡೆಗೊಳ್ಳುವಂತಾಯಿತು.

ನಿಷೇಧಿತ ಮೆಡಿಸಿನ್ ಗೆ ಸಂಬಂಧಿಸಿದಂತೆ ಅನಿವಾಸಿ ಭಾರತೀಯರಿಗೆ ಅಗತ್ಯ ಮಾಹಿತಿ ಮತ್ತು ಜಾಗೃತಿ ಮೂಡಿಸುವ ಸಲುವಾಗಿ ಭಾರತೀಯ ರಾಯಭಾರಿ ಕಚೇರಿಯೊಂದಿಗೆ ಸಹಭಾಗಿತ್ವದಲ್ಲಿ ಕೈಪಿಡಿಯೊಂದನ್ನು ಹೊರತರಲು ಇಂಡಿಯನ್ ಸೋಶಿಯಲ್ ಫೋರಮ್ ಯೋಜನೆ ಹಾಕಿಕೊಂಡಿದೆ. ಸರಿಯಾದ ದಾಖಲೆ ಪತ್ರಗಳಿಲ್ಲದಿರುವ ಔಷಧಿ ಮತ್ತು ಸೌದಿಅರೇಬಿಯದಲ್ಲಿ ನಿಷೇಧವಿರುವ ಔಷಧಿಗಳನ್ನು ಜೊತೆಯಲ್ಲಿ ಒಯ್ಯದಿರುವಂತೆ ಇಂಡಿಯನ್ ಸೋಶಿಯಲ್ ಫೋರಮ್ ಮನವಿ ಮಾಡಿಕೊಂಡಿದೆ.

share
ಎ.ಎಂ.ಆರಿಫ್ ಜೋಕಟ್ಟೆ
ಎ.ಎಂ.ಆರಿಫ್ ಜೋಕಟ್ಟೆ
Next Story
X