Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕರ್ನಾಟಕ-ಕೇರಳದ ಪಕ್ಷ-ಸಂಘಟನೆಯಿಂದ...

ಕರ್ನಾಟಕ-ಕೇರಳದ ಪಕ್ಷ-ಸಂಘಟನೆಯಿಂದ ಏಕಕಾಲಕ್ಕೆ ಮುತ್ತಿಗೆ

ಮುಂದುವರಿದ ತಲಪಾಡಿ ಟೋಲ್ ವಿವಾದ

ವಾರ್ತಾಭಾರತಿವಾರ್ತಾಭಾರತಿ9 Feb 2017 5:47 PM IST
share
ಕರ್ನಾಟಕ-ಕೇರಳದ ಪಕ್ಷ-ಸಂಘಟನೆಯಿಂದ ಏಕಕಾಲಕ್ಕೆ ಮುತ್ತಿಗೆ

ಮಂಗಳೂರು, ಫೆ.9: ರಾಷ್ಟ್ರೀಯ ಹೆದ್ದಾರಿ 66ರ ಕಾಮಗಾರಿ ಪೂರ್ಣಗೊಳ್ಳುವ ಮುನ್ನವೇ ಗಡಿನಾಡಾದ ತಲಪಾಡಿಯಲ್ಲಿ ಆರಂಭಿಸಲಾದ ಟೋಲ್ ಗೇಟ್ ವಿವಾದ ಮುಂದುವರಿದಿದೆ. ಕರ್ನಾಟಕ ಮತ್ತು ಕೇರಳದ ವಿವಿಧ ಪಕ್ಷ-ಸಂಘಟನೆಯ ಮುಖಂಡರು, ಕಾರ್ಯಕರ್ತರು ಗುರುವಾರ ಟೋಲ್‌ಗೇಟ್ ಮುತ್ತಿಗೆ ಹಾಕುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರೆ, ಸಮಸ್ಯೆಗೆ ಪರಿಹಾರ ನೀಡಬೇಕಾದ ಹಿರಿಯ ಅಧಿಕಾರಿಗಳು, ಪ್ರಮುಖ ಜನಪ್ರತಿನಿಧಿಗಳು ಇತ್ತ ಸುಲಿಯದ ಕಾರಣ ಸಾರ್ವಜನಿಕರು ತೀವ್ರ ಅಸಮಾಧಾನ ಹೊಂದಿದ್ದಾರೆ.

ಟೋಲ್ ವಸೂಲಾತಿಯನ್ನು ವಿರೋಧಿಸಿ ಕರ್ನಾಟಕ ಮತ್ತು ಕೇರಳದ ಜನರು ಗುರುವಾರ ಸಂಘಟಿತ ಪ್ರತಿಭಟನೆ ನಡೆಸಿದರು. ಅತ್ತ ಕೇರಳದ ಆಕ್ರೋಶಿತರು ‘ಬಿಡೂಗ ಇಲ್ಲ... ಬಿಡೂಗ ಇಲ್ಲಾ’ ಎಂಬ ಘೋಷಣೆ ಮೊಳಗಿಸಿದರೆ ಇತ್ತ ಕರ್ನಾಟಕದ ಜನರು ‘ಬೇಕೇ ಬೇಕು... ನ್ಯಾಯ ಬೇಕು’ ಎನ್ನುವ ಘೋಷಣೆ ಕೂಗಿದರು. ಎರಡೂ ಕಡೆಯಿಂದ ಮುತ್ತಿಗೆ ಹಾಕಿದ ಜನರನ್ನು ತಡೆಯಲು ಕರ್ನಾಟಕ ಪೊಲೀಸರು ಹರಸಾಹಸಪಟ್ಟರು.

ಕೆ.ಸಿ.ರೋಡ್‌ನಿಂದ ಮೆರವಣಿಗೆ ಹೊರಟ ಡೈಮಂಡ್ ವೆಲ್ಫೇರ್ ಅಸೋಸಿಯೇಶನ್, ಗಡಿನಾಡ ರಕ್ಷಣಾ ವೇದಿಕೆ ಹಾಗೂ ಎಸ್‌ಡಿಪಿಐ ಕಾರ್ಯಕರ್ತರು ಟೋಲ್‌ಗೇಟ್‌ಗೆ ಮುತ್ತಿಗೆ ಹಾಕಿದರೆ, ಅತ್ತ ಶಾಸಕ ಅಬ್ದುರ್ರಝಾಕ್ ನೇತೃತ್ವದ ಮುಸ್ಲಿಂ ಲೀಗ್ ಮತ್ತು ಕಾಂಗ್ರೆಸ್ ನೇತೃತ್ವದ ಐಕ್ಯ ಪ್ರಜಾಪ್ರಭುತ್ವ ರಂಗ ಮೆರವಣಿಗೆಯೊಂದಿಗೆ ಆಗಮಿಸಿ ಮುತ್ತಿಗೆ ಹಾಕಿದರು. ಈ ಮಧ್ಯೆ ಗಸ್ತಿನಲ್ಲಿದ್ದ ಕೇರಳ ಪೊಲೀಸರು ತೆರಳಿದ್ದರಿಂದ ಮುತ್ತಿಗೆ ಹಾಕಿದವರನ್ನು ತಡೆಯುವ ಹೊಣೆ ಕರ್ನಾಟಕ ಪೊಲೀಸರ ಪಾಲಿಗೆ ಬಂತು. ಉಳ್ಳಾಲ ಮತ್ತು ಕೊಣಾಜೆ ಪೊಲೀಸರು ಎರಡೂ ರಾಜ್ಯದ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಮುಂದಾದರು. ಈ ಸಂದರ್ಭ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ತಳ್ಳಾಟವೂ ನಡೆಯಿತು.

ಅಧಿಕಾರಿಯಿಂದ ಗೊಂದಲಮಯ ಹೇಳಿಕೆ: 
ಕೇರಳದ ಪ್ರತಿಭಟನಾಕಾರರು 1ಗಂಟೆ ಧರಣಿ ನಡೆಸಿ ಸ್ಥಳದಿಂದ ನಿರ್ಗಮಿಸಿದ್ದರೂ ಕರ್ನಾಟಕದ ಪ್ರತಿಭಟನಾಕಾರರು ಕನಿಷ್ಠ ಮೂರು ಗಂಟೆ ಸ್ಥಳದಲ್ಲಿದ್ದರಲ್ಲದೆ, ಟೋಲ್‌ಗೇಟ್‌ಗೆ ಸಂಬಂಧಪಟ್ಟ ಅಧಿಕಾರಿ ಬರಬೇಕು ಎಂದು ಪಟ್ಟುಹಿಡಿದು ರಸ್ತೆ ತಡೆ ನಡೆಸಿದರು.

ಕೊನೆಗೂ ಸ್ಥಳಕ್ಕೆ ಬಂದ ನವಯುಗ ಕಂಪೆನಿಯ ವ್ಯವಸ್ಥಾಪಕ ಭಾನುಪ್ರಕಾಶ್, ಅಧಿಕಾರಿಗಳ ಸಭೆ ಕರೆಯುವವರೆಗೆ ಸ್ಥಳೀಯ 5 ಕಿ.ಮೀ. ವ್ಯಾಪ್ತಿಯ ವಾಹನಿಗರಿಂದ ಸುಂಕ ವಸೂಲು ಮಾಡುವುದಿಲ್ಲ ಎಂದರು. ಇದರಿಂದ ಸಂತಸಗೊಂಡ ಪ್ರತಿಭಟನಾಕಾರರು ವಿಜಯೋತ್ಸವ ಆಚರಿಸಿ, ವಾಹನಿಗರಿಂದ ಸುಂಕ ಪಡೆಯದಂತೆ ತಡೆದರು.

ಆದರೆ ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳಲ್ಲಿ ಪ್ರತಿಕ್ರಿಯಿಸಲು ನಿರಾಕರಿಸಿದ ಕಂಪೆನಿಯ ವ್ಯವಸ್ಥಾಪಕ ತಾನು ಹಾಗೇನು ಹೇಳಿಲ್ಲ ಎಂದರು. ಈ ವಿಷಯ ತಿಳಿದ ಪ್ರತಿಭಟನಾಕಾರರು ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರಲ್ಲದೆ ಪತ್ರಕರ್ತರ ಮುಂದೆ ತನ್ನ ಮಾತನ್ನು ಪುನರುಚ್ಛರಿಸುವಂತೆ ಮಾಡಿದರು.

ಮಂಗಳೂರು ತಾಪಂ ಸದಸ್ಯ ಅಬೂಬಕರ್ ಸಿದ್ದೀಕ್, ಡೈಮಂಡ್ ವೆಲ್ಫೇರ್ ಅಸೋಸಿಯೇಶನ್‌ನ ಅಧ್ಯಕ್ಷ ಸಂಶುದ್ದೀನ್ ಉಚ್ಚಿಲ್, ಎಸ್‌ಡಿಪಿಐ ಮುಖಂಡ ಹಾರಿಸ್ ಮಲಾರ್, ತಲಪಾಡಿ ಗ್ರಾಪಂ ಸದಸ್ಯ ವೈಭವ್ ಶೆಟ್ಟಿ, ಮಾಜಿ ಸದಸ್ಯ ಗಣೇಶ್ ಶೆಟ್ಟಿ, ಸಲಾಂ ಕೆ.ಸಿ.ರೋಡು, ಶಾಫಿ ಮೀನಾದಿ, ಇಸ್ಮಾಯೀಲ್, ಐಕ್ಯರಂಗದ ಪರವಾಗಿ ನಾಸಿರ್ ಮೊಗ್ರಾಲ್, ಸೈಫುಲ್ಲಾ ತಂಙಳ್, ಎಕೆಎಂ ಅಶ್ರಫ್, ಅಝೀಝ್, ಇಕ್ಬಾಲ್, ಕೇಶವ ಪ್ರಸಾದ್, ಶರೀಫ್ ಅರಿಬೈಲ್ ಉಪಸ್ಥಿತರಿದ್ದರು.

ಎಸಿಪಿಗಳಾದ ಉದಯ ನಾಯಕ್, ಶೃತಿ ಎನ್., ಅಶೋಕ್ ಪಿ., ಗೋಪಿಕೃಷ್ಣ ಸಹಿತ ಮತ್ತಿತರ ಹಿರಿಯ ಅಧಿಕಾರಿಗಳು ಬಂದೋಬಸ್ತ್ ನಡೆಸಿದರು.

ಕೇರಳದಲ್ಲಿ ಹೆದ್ದಾರಿ ಕಾಮಗಾರಿ ಆರಂಭಗೊಳ್ಳದಿದ್ದರೂ ತಲಪಾಡಿ ಗಡಿಯಲ್ಲಿ ಸುಂಕ ನೀಡಬೇಕಿದೆ. ಇದರಿಂದ ಮಂಜೇಶ್ವರ, ಕಾಸರಗೋಡು ಜನರಿಗೆ ತೊಂದರೆಯಾಗಲಿದೆ. ಹಾಗಾಗಿ ಈ ವಿಚಾರದಲ್ಲಿ ಗಡಿ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಕಾಸರಗೋಡು ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಹರ್ಷದ್ ವರ್ಕಾಡಿ ಹೇಳಿದ್ದಾರೆ.

ಜೂನ್ ಅಂತ್ಯದೊಳಗೆ ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳಬೇಕು. ಸ್ಥಳೀಯರಿಗೆ ಸಂಪೂರ್ಣ ಸುಂಕ ವಿನಾಯಿತಿ ನೀಡಬೇಕು. ಟೋಲ್‌ನಲ್ಲಿ ರೌಡಿಗಳು ಸುಂಕ ಸಂಗ್ರಹಿಸುತ್ತಿದ್ದು ಅವರನ್ನು ಬದಲಾಯಿಸಬೇಕು ಎಂದು ಗಡಿನಾಡ ರಕ್ಷಣಾ ವೇದಿಕೆಯ ಅಧ್ಯಕ್ಷ ಸಿದ್ದೀಕ್ ತಲಪಾಡಿ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X