Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಾಗರಿಕರಿಂದ ಟೋಲ್ ಫ್ಲಾಝಾಕ್ಕೆ...

ನಾಗರಿಕರಿಂದ ಟೋಲ್ ಫ್ಲಾಝಾಕ್ಕೆ ಮುತ್ತಿಗೆ: ಸ್ಥಳೀಯರಿಗೆ "ಟೋಲ್ ಫ್ರೀ" ಭರವಸೆ

ತಲಪಾಡಿ: ಟೋಲ್ ಸಂಗ್ರಹದ ವಿರುದ್ಧ ಮುಂದುವರಿದ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ9 Feb 2017 6:14 PM IST
share
  • ನಾಗರಿಕರಿಂದ ಟೋಲ್ ಫ್ಲಾಝಾಕ್ಕೆ ಮುತ್ತಿಗೆ: ಸ್ಥಳೀಯರಿಗೆ ಟೋಲ್ ಫ್ರೀ ಭರವಸೆ
  • ನಾಗರಿಕರಿಂದ ಟೋಲ್ ಫ್ಲಾಝಾಕ್ಕೆ ಮುತ್ತಿಗೆ: ಸ್ಥಳೀಯರಿಗೆ ಟೋಲ್ ಫ್ರೀ ಭರವಸೆ

ಉಳ್ಳಾಲ, ಫೆ.9: ಹೆದ್ದಾರಿಯ ಕಾಮಗಾರಿಯು ಪೂರ್ಣಗೊಳ್ಳದೆ ತಲಪಾಡಿ ಟೋಲ್ ಫ್ಲಾಝಾದಲ್ಲಿ ಅವೈಜ್ಞಾನಿಕ ರೀತಿಯಲ್ಲಿ ಸುಂಕ ವಸೂಲಿ ಮಾಡುತ್ತಿರುವುದನ್ನು ವಿರೋಧಿಸಿ ಗುರುವಾರವೂ ಕೇರಳದ ಯುಡಿವೈಎಫ್ ಸೇರಿದಂತೆ ಕರ್ನಾಟಕದ ಗಡಿ ಪ್ರದೇಶದ ಹಲವು ಸಂಘಟನೆಗಳು ಟೋಲ್ ಗೇಟ್‌ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಸುಂಕ ವಸೂಲಾತಿಯನ್ನು ವಿರೋಧಿಸಿ, ಹಲವು ಬೇಡಿಕೆಗಳನ್ನು ಇಟ್ಟು ಸ್ಥಳೀಯ ಸಂಘಟನೆಗಳು ಬುಧವಾರ ಕೂಡಾ ಪ್ರತಿಭಟನೆ ನಡೆಸಿದ್ದು ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಕರೆದೊಯ್ದಿದ್ದರು. ಆದರೆ ಟೋಲ್ ಅಧಿಕಾರಿಗಳು ಮಾತ್ರ ಸ್ಥಳೀಯರ ಬೇಡಿಕೆಗಳಿಗೆ ಸ್ಪಂದಿಸದೆ ತಮ್ಮ ನಿಲುವನ್ನೇ ಸಮರ್ಥಿಸಿ ಮುಂದುವರೆಸಿದ್ದರು. ಇದರಿಂದ ಮತ್ತಷ್ಟು ಆಕ್ರೋಶಗೊಂಡ ನಾಗರಿಕರು ಗುರುವಾರದಂದು ಮತ್ತೆ ಪ್ರತಿಭಟನೆಯನ್ನು ನಡೆಸಿದರು.

ಗುರುವಾರ ಮಂಜೇಶ್ವರದ ಯುಡಿವೈಎಫ್ ಮತ್ತು ಇತರ ಮಿತ್ರ ಸಂಘಟನೆಗಳು, ಮಂಜೇಶ್ವರ ಶಾಸಕ ಅಬ್ದುಲ್ ರಝಾಕ್ ಸೇರಿದಂತೆ ಬೃಹತ್ ಸಂಖ್ಯೆಯಲ್ಲಿ ಕಾಲ್ನಡಿಗೆ ಜಾಥಾದಲ್ಲಿ ಬಂದು ಟೋಲ್ ಫ್ಲಾಝಾಕ್ಕೆ ನುಗ್ಗಲು ಯತ್ನಿಸಿದ್ದು ನೂರಾರು ಸಂಖ್ಯೆಯಲ್ಲಿ ಗಸ್ತು ಕಾಯುತ್ತಿದ್ದ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ನೂಕಾಟ,ತಳ್ಳಾಟವೂ ನಡೆಯಿತು.

ಇದೇ ಸಮಯದಲ್ಲಿ ಟೋಲ್ ಫ್ಲಾಝಾದ ಇತ್ತ ಕಡೆ ಕರ್ನಾಟಕ ಗಡಿ ಪ್ರದೇಶದ ಸಂಘಟನೆಗಳಾದ ಎಸ್‌ಡಿಪಿಐ, ಡೈಮಂಡ್ ಅಸೋಷಿಯೇಷನ್, ಗಡಿನಾಡು ರಕ್ಷಣಾ ವೇದಿಕೆ ಸದಸ್ಯರು ಬೃಹತ್ ಸಂಖ್ಯೆಯಲ್ಲಿ ಸೇರಿ ಟೋಲ್ ಫ್ಲಾಝಾಕ್ಕೆ ನುಗ್ಗಲು ಯತ್ನಿಸಿದ್ದು ಪೊಲೀಸರು ಹರಸಾಹಸ ಪಟ್ಟು ಅವರನ್ನು ತಡೆದಿದ್ದಾರೆ. ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಲು ಮುಂದಾದಾಗ ಉದ್ರಿಕ್ತ ನಾಗರಿಕರು ಟೋಲ್ ಗೇಟ್‌ನ ಅಧಿಕಾರಿಗಳನ್ನು ಸ್ಥಳಕ್ಕೆ ಮಾತುಕತೆಗೆ ಕರೆಸುವಂತೆ ಪಟ್ಟು ಹಿಡಿದರು.

ಸ್ಥಳೀಯರಿಗೆ"ಟೋಲ್ ಫ್ರೀ"ಭರವಸೆ:

ಪ್ರತಿಭಟನಾಕಾರರ ಆಗ್ರಹಕ್ಕೆ ಮಣಿದು ಸ್ಥಳಕ್ಕೆ ಬಂದ ನವಯುಗ ಗುತ್ತಿಗೆ ಕಂಪನಿಯ ವ್ಯವಸ್ಥಾಪಕ ಭಾನುಪ್ರಕಾಶ್ ಅವರಲ್ಲಿ ಪ್ರತಿಭಟನಾಕಾರರು ಸ್ಥಳೀಯರಿಗೆ ಟೋಲ್ ಫ್ರೀ ಮತ್ತು ಟೋಲ್ ಫ್ಲಾಝಾದಲ್ಲಿ ಕರ್ತವ್ಯಕ್ಕಾಗಿ ನೇಮಿಸಲಾಗಿರುವ ಕ್ರಿಮಿನಲ್ ಹಿನ್ನೆಲೆಯ ಗೂಂಡಾಗಳನ್ನು ಕಿತ್ತು ಅವರ ಸ್ಥಾನಕ್ಕೆ ಮಹಿಳೆಯರನ್ನು ನೇಮಿಸಬೇಕೆಂಬ ಬೇಡಿಕೆಯನ್ನು ಇಟ್ಟರು.ಆರಂಭದಲ್ಲಿ ಅದನ್ನೆಲ್ಲ ಹಿರಿಯ ಅಧಿಕಾರಿಗಳಲ್ಲಿ ಚರ್ಚಿಸಬೇಕೆಂದು ನಕಾರ ಎತ್ತಿದ ಭಾನುಪ್ರಕಾಶ್ ಪ್ರತಿಭಟನೆ ಮತ್ತೆ ಉಗ್ರ ರೂಪಕ್ಕೆ ತಿರುಗುವುದನ್ನು ಮನಗಂಡು ಟೋಲ್ ಫ್ಲಾಝಾ ಸುತ್ತಮುತ್ತಲಿನ 5ಕಿ.ಮೀ ವ್ಯಾಪ್ತಿಯ ಸ್ಥಳೀಯರಿಗೆ ಸಂಜೆ 6 ಗಂಟೆ ತನಕ ಟೋಲ್ ಫ್ರೀ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಮುಂದಿನ ನಿರ್ಧಾರಗಳನ್ನು ಕೈಗೊಳ್ಳಲಾಗುವ ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X