Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಚ್ಚಿಲ ಹೆದ್ದಾರಿ ವಿಭಜಕ ಸಮಸ್ಯೆ:...

ಉಚ್ಚಿಲ ಹೆದ್ದಾರಿ ವಿಭಜಕ ಸಮಸ್ಯೆ: ಸಾರ್ವಜನಿಕರಿಂದ ಹೆದ್ದಾರಿ ಇಲಾಖೆಗೆ 15 ದಿನದ ಗಡುವು

ವಾರ್ತಾಭಾರತಿವಾರ್ತಾಭಾರತಿ9 Feb 2017 6:38 PM IST
share
ಉಚ್ಚಿಲ ಹೆದ್ದಾರಿ ವಿಭಜಕ ಸಮಸ್ಯೆ: ಸಾರ್ವಜನಿಕರಿಂದ ಹೆದ್ದಾರಿ ಇಲಾಖೆಗೆ 15 ದಿನದ ಗಡುವು

ಪಡುಬಿದ್ರಿ, ಫೆ.9: ಉಚ್ಚಿಲ ಪೇಟೆಯಲ್ಲಿ ಕ್ರಾಸಿಂಗ್ ನೀಡಬೇಕು ಹಾಗೂ ಸರ್ವಿಸ್ ರಸ್ತೆ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿ ಗುರುವಾರ ಬೃಹತ್ ಸಾರ್ವಜನಿಕ ಪ್ರತಿಭಟನೆ ನಡೆಸಿದ್ದು, ಹೆದ್ದಾರಿ ಇಲಾಖೆಗೆ ಬೇಡಿಕೆ ಪೂರೈಸಲು ಪ್ರತಿಭಟನಕಾರರು 15 ದಿನದ ಗಡುವು ನೀಡಿ, ಬೇಡಿಕೆ ಈಡೇರಿಸದಿದ್ದರೆ ಡಿವೈಡರ್ ಒಡೆದು ತಾವೇ ವ್ಯವಸ್ಥೆ ಮಾಡಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಬಡಾ ಗ್ರಾ.ಪಂ ವ್ಯಾಪ್ತಿಯ ಉಚ್ಚಿಲ ಮುಖ್ಯ ಪೇಟೆ ಪ್ರದೇಶದ ರಾ.ಹೆ 66ರಲ್ಲಿ ಸೂಕ್ತ ಕ್ರಾಸಿಂಗ್ ಮತ್ತು ಸರ್ವಿಸ್ ರಸ್ತೆಯ ಬೇಡಿಕೆಯನ್ನು ಮುಂದಿರಿಸಿ ರಿಕ್ಷಾ ಚಾಲಕರು ಮತ್ತು ಮಾಲಕರ ಸಂಘದ ನೇತೃತ್ವದಲ್ಲಿ ಉಚ್ಚಿಲದ ವಿವಿಧ ಸಂಘ ಸಂಸ್ಥೆಗಳು ಮತ್ತು ಗ್ರಾ.ಪಂ ಸದಸ್ಯರು, ಅನೇಕ ಜನಪ್ರತಿನಿಧಿಗಳ ಮುಂದಾಳತ್ವದೊಂದಿಗೆ ಪ್ರತಿಭಟನೆ ನಡೆಯಿತು.

ಉಚ್ಚಿಲ ಪ್ರದೇಶದಿಂದ ಹಾದು ಹೋಗುವ ರಾ.ಹೆ 66 ನೆರೆಗ್ರಾಮಗಳಾದ ಮುದರಂಗಡಿ, ಪಣಿಯೂರು, ಎಲ್ಲೂರು, ಶಿರ್ವ, ಬೆಳಪು ಗ್ರಾಮಗಳಿಗೆ ಸಂಪರ್ಕ ರಸ್ತೆಯಾಗಿದ್ದು, ಈ ಪ್ರದೇಶದಲ್ಲಿ ಸಮರ್ಪಕ ಕ್ರಾಸಿಂಗ್ ವ್ಯವಸ್ಥೆಯಿಲ್ಲದೆ ಸಾರ್ವಜನಿಕರು ಪರದಾಡುವಂತಾಗುತ್ತಿದ್ದು, ಸಮಸ್ಯೆಯ ಬಗ್ಗೆ 2014ರಿಂದ ಹಲವಾರು ಬಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗುತ್ತಿತ್ತು. ಆದರೆ ಎಲ್ಲಾ ಮನವಿಗೂ ಯಾವುದೇ ಪೂರಕ ಉತ್ತರ ದೊರಕಿದಿರುವ ಸಲುವಾಗಿ ಉಚ್ಚಿಲದ ಎಲ್ಲಾ ಸಂಘ ಸಂಸ್ಥೆಗಳು ಸೇರಿ ಉಚ್ಚಿಲದಲ್ಲಿ ಪ್ರತಿಭಟನೆ ನಡೆಸಿದ್ದು ನೂರಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ ಎಂದು ತಿಳಿಸಿದ್ದಾರೆ.

ಬೆಳಪು ಗ್ರಾ.ಪಂ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಮಾತನಾಡಿ, 2010ರಲ್ಲಿ ರಾ.ಹೆ ಕಾಮಗಾರಿ ಪ್ರಾರಂಭವಾಗುತ್ತಿದ್ದ ವೇಳೆ ರಸ್ತೆ ಅಗಲೀಕರಣಗೊಂಡು ವಾಹನ ದಟ್ಟಣೆ ಕಡಿಮೆಯಾಗಿ ಅಪಘಾತಗಳು ಕ್ಷೀಣಿಸುವ ಕಾರಣ ವಾಹನ ಸಂಚಾರ ಸುಗಮವಾಗಬಹುದೆಂದು ಸಾರ್ವಜನಿಕರು ನಿರೀಕ್ಷೆಯಲ್ಲಿದ್ದರು. ಆದರೆ ಇಂದು ಜನರು ಭಯಭೀತ ಜೀವನ ನಡೆಸುವ ಪರಿಸ್ಥಿತಿ ಉದ್ಭವವಾಗಿದೆ. 2010ರ ನೀಲಿನಕಾಶೆಯ ಅನ್ವಯ ಸರ್ವಿಸ್ ರಸ್ತೆ, ವೈಜ್ಞಾನಿಕ ತಿರುವುಗಳನ್ನು ಕೊಡಬೇಕು. ಆದರೆ ಸಾರ್ವಜನಿಕ ಹಿತಾಸಕ್ತಿ ಕಾಪಾಡಿಕೊಳ್ಳದೆ, ಸ್ಥಳೀಯ ಬೇಡಿಕೆಗಳನ್ನು ಈಡೇರಿಸದೆ ಏಕಾಏಕಿ ಟೋಲ್ ಸಂಗ್ರಹಕ್ಕೂ ಮುಂದಾಗಿದ್ದಾರೆ. ಇದೇ ರೀತಿ ಮುಂದಾದಲ್ಲಿ ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮದಲ್ಲೂ ಜನಜಾಗೃತಿ ಮಾಡಬೇಕಾಗಬಹುದು. ಕಂಪನಿಯು ತನ್ನ ಜೇಬು ತುಂಬಿಸುವ ಕೆಲಸ ಕೈಬಿಡದಿದ್ದರೆ ಸಾಂಕೇತಿಕ ಹೋರಾಟವನ್ನು ಉಗ್ರ ಸ್ವರೂಪಕ್ಕೆ ಪರಿವರ್ತಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಉಚ್ಚಿಲ ಪೇಟೆ ಪ್ರದೇಶಕ್ಕೆ ಹೊಂದಿಕೊಂಡು ಎರಡು ಶಾಲೆಗಳಿದ್ದು ಸುಮಾರು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ದಿನನಿತ್ಯ ರಸ್ತೆ ದಾಟುವ ಅನಿವಾರ್ಯತೆಯಲ್ಲಿದ್ದಾರೆ. ಶಾಲಾ ಮಕ್ಕಳಿಗೆ ರಸ್ತೆ ದಾಟುವ ವೇಳೆ ತೀವ್ರ ತೊಂದರೆಗಳಾಗುತ್ತಿದ್ದು ಅಪಘಾತ ಸಂಭವಿಸಿದ ನಿದರ್ಶನಗಳೂ ಇವೆ. ಹೆದ್ದಾರಿ ಇಲಾಖಾಧಿಕಾರಿಗಳು ಸಮಸ್ಯೆಗೆ ಸಂಬಂಧಿಸಿ ಇಲ್ಲಸಲ್ಲದ ಕಾನೂನು ಹೇಳುತ್ತಾರೆ. ಈ ಬಗ್ಗೆ ಸಾರ್ವಜನಿಕರು ಒತ್ತಡ ಹೇರದಿದ್ದರೆ, ದಾರಿತಪ್ಪಿಸುವ ಅಧಿಕಾರಿಗಳಿಗೆ ಬುದ್ಧಿ ಕಲಿಸದಿದ್ದರೆ ಸಮಸ್ಯೆ ಪರಿಹಾರ ಆಗುವುದಿಲ್ಲ ಎಂದು ಮಹಾಲಕ್ಷ್ಮೀ ಶಾಲೆಯ ಮುಖ್ಯಸ್ಥ ಶರತ್ ಗುಡ್ಡೆಕೊಪ್ಲ ಹೇಳಿದರು.

ಪ್ರತಿಭಟನೆಯ ವೇಳೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಧಿಕ್ಕಾರ ಕೂಗಲಾಯಿತು.

 ಜಿ.ಪಂ ಸದಸ್ಯೆ ಶಿಲ್ಪ ಸುವರ್ಣ, ತಾ.ಪಂ ಸದಸ್ಯ ಶೇಖಬ್ಬ, ಗ್ರಾಪಂ ಅಧ್ಯಕ್ಷೆ ನಾಗರತ್ನ ಕರ್ಕೇರ, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್‌ಚಂದ್ರ ಜೆ. ಶೆಟ್ಟಿ, ಕಾಪು ಬಿಜೆಪಿ ಕ್ಷೇತ್ರಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಬಿ.ಎಸ್ ಆಚಾರ್ಯ, ದೀಪಕ್ ಎರ್ಮಾಳು, ಗಣೇಶ್ ಆಚಾರ್ಯ ಉಚ್ಚಿಲ, ಪುಟ್ಟಮ್ಮ ಶ್ರೀಯಾನ್, ವಸಂತಿ ಮಧ್ವರಾಜ್, ಯಶ್‌ವಂತ್ ಶೆಟ್ಟಿ, ಚಂದ್ರಶೇಖರ್ ಕೋಟ್ಯಾನ್, ವಿಶ್ವಾಸ್ ವಿ. ಅಮೀನ್, ಗುಲಾಂ ಮೊಹಮ್ಮದ್, ರಹೀಂ ಕುಂಜೂರು, ಯಶವಂತ ಶೆಟ್ಟಿ ಎಲ್ಲೂರು, ಧೀರಜ್ ಹುಸೈನ್, ಇಬ್ರಾಹಿಮ್ ಅರ್ಶ್, ವೇಣುಗೋಪಾಲ, ಮುಂತಾದವರು ಮಾತನಾಡಿದರು. ಗ್ರ.ಪಂ ಸದಸ್ಯರ ಸಹಿತ ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಜನಪ್ರತಿನಿಧಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದರು. ರಿಕ್ಷಾ ಚಾಲಕ ಮತ್ತು ಮಾಲಕರ ಸಂಘದ ಅಧ್ಯಕ್ಷ ಸಿರಾಜ್ ವಂದಿಸಿದರು. ಪ್ರತಿಭಟನೆಯ ಹಿನ್ನಲೆಯಲ್ಲಿ ಉಚ್ಚಿಲದ ಸರ್ವ ರಿಕ್ಷಾ ಚಾಲಕರು ಬೆಳಗ್ಗೆಯಿಂದಲೇ ಬಂದ್ ಆಚರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X