Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಿಳಾ ಐಎಎಸ್ ಅಧಿಕಾರಿಗೇ ಬೆದರಿಕೆ ಹಾಕಿದ...

ಮಹಿಳಾ ಐಎಎಸ್ ಅಧಿಕಾರಿಗೇ ಬೆದರಿಕೆ ಹಾಕಿದ ಅಕ್ರಮ ಮರಳುಗಾರಿಕೆ ಮಾಫಿಯಾ

ವಾರ್ತಾಭಾರತಿವಾರ್ತಾಭಾರತಿ9 Feb 2017 8:08 PM IST
share
ಮಹಿಳಾ ಐಎಎಸ್ ಅಧಿಕಾರಿಗೇ ಬೆದರಿಕೆ ಹಾಕಿದ ಅಕ್ರಮ ಮರಳುಗಾರಿಕೆ ಮಾಫಿಯಾ

ಬುಂದೇಲ್ ಖಂಡ್ , ಫೆ. 9 : ಮಧ್ಯ ಪ್ರದೇಶದಲ್ಲಿ ಗಣಿ ಮಾಫಿಯಾದ ಗೂಂಡಾಗಿರಿ ಮೇರೆ ಮೀರಿದೆ. ಅದು ಈಗ ಎಲ್ಲಿಗೆ ತಲುಪಿದೆಯೆಂದರೆ, ಮಹಿಳಾ ಐಎಎಸ್ ಅಧಿಕಾರಿಗೇ ಬೆದರಿಕೆ ಹಾಕಿ ಅವಹೇಳನ ಮಾಡಿರುವ ಘಟನೆ ನಡೆದಿದೆ. ಇಲ್ಲಿನ ಛತ್ರಪುರ ಜಿಲ್ಲೆಯ ಬಾಮಿತ ಠಾಣಾ ವ್ಯಾಪ್ತಿಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. 

ಇಲ್ಲಿನ ಸಬ್ ಡಿವಿಜನಲ್ ಮ್ಯಾಜಿಸ್ಟ್ರೇಟ್ ಸೋನಿಯಾ ಮೀನಾ ಅಕ್ರಮ ಗಣಿಗಾರಿಕೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದರು. ಇದರಿಂದಾಗಿ ಈ ಅಕ್ರಮ ಗಣಿ ಮಾಫಿಯಾದ ಕೆಂಗಣ್ಣಿಗೂ ಗುರಿಯಾಗಿದ್ದರು. 

ಬುಧವಾರ ದಿನವಿಡೀ ಅಕ್ರಮ ಗಣಿಗಾರಿಕೆ ಮಾಡುವವರ ವಿರುದ್ಧ ಕಾರ್ಯಾಚರಣೆ ನಡೆಸಿದ ಬಳಿಕ ಸಂಜೆ ಸುಮಾರು ಐದು ಗಂಟೆಗೆ ತನ್ನ ಕಚೇರಿಗೆ ತೆರಳುತ್ತಿದ್ದರು. ಅಕ್ರಮ ಮರಳುಗಾರಿಕೆ ಮಾಡುತ್ತಿದ್ದ ಟ್ರ್ಯಾಕ್ಟರ್ ಒಂದನ್ನು ಜಪ್ತಿ ಮಾಡಿದ್ದು ಅದನ್ನು ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗುವಂತೆ ಸೋನಿಯಾ ಆದೇಶ ನೀಡಿದ್ದರು. ಆಗ ಅಲ್ಲಿಗೆ ಬಂದ ಟ್ರ್ಯಾಕ್ಟರ್ ಮಾಲಕ ಹಾಗು ಅಕ್ರಮ ಗಣಿ ಮಾಫಿಯಾದ ಅರ್ಜುನ್ ಸಿಂಗ್ ಅಲ್ಲಿಗೆ ಬಂದು ರೌದ್ರಾವತಾರ ತಾಳಿಬಿಟ್ಟ. 

ಅಲ್ಲಿಗೆ ಬಂದ ಕೂಡಲೇ ತನ್ನ ಟ್ರ್ಯಾಕ್ಟರ್ ನಲ್ಲಿ ಕುಳಿತ ಪೊಲೀಸ್ ಸಿಬ್ಬಂದಿ ಭಗವಂತ್ ಯಾದವ್ ಮೇಲೆ ಬಂದೂಕು ತೋರಿಸಿದ. ಬಳಿಕ ಟ್ರ್ಯಾಕ್ಟರ್ ನಲ್ಲಿ ಕುಳಿತು ಅದನ್ನು ಚಲಾಯಿಸಿ ತೆಗೆದುಕೊಂಡು ಹೋಗಲು ಪ್ರಾರಂಭಿಸಿದ. ಹೀಗೆ ಮಾಡಬೇಡಿ ಎಂದು ಎಸ್ ಡಿ ಎಮ್  ಸೋನಿಯಾ ಅವರು ಅರ್ಜುನ್ ಸಿಂಗ್ ಗೆ ಹೇಳಿದಾಗ ಆತ ಗಾಳಿಯಲ್ಲಿ ಗುಂಡು ಹಾರಿಸಿ ಮಹಿಳಾ ಅಧಿಕಾರಿಗೆ ಅವಾಚ್ಯ ಪದ ಬಳಸಿ ಅವಹೇಳನ ಮಾಡಿದ್ದಾನೆ. 

ಆಗ ಅದನ್ನು ತಡೆಯಲು ಬಂದ ಇನ್ನೊಬ್ಬ ಪೊಲೀಸ್ ಸಿಬ್ಬಂದಿಯನ್ನು ಅರ್ಜುನ್ ದೂಡಿ ಹಾಕಿದ್ದಾನೆ. ಬಳಿಕ ಎಲ್ಲರ ಎದುರಲ್ಲೇ ಐಎಎಸ್ ಅಧಿಕಾರಿಗೆ ಬೆದರಿಕೆ ಹಾಕಿ ತನ್ನ ಟ್ರ್ಯಾಕ್ಟರ್ ಅನ್ನು ಅಲ್ಲಿಂದ ತೆಗೆದುಕೊಂಡು ಹೋಗಿದ್ದಾನೆ. ವಿಪರ್ಯಾಸವೆಂದರೆ ಈ ಘಟನೆ ಪೊಲೀಸ್ ಠಾಣೆಯಿಂದ ಕೇವಲ 500 ಮೀಟರ್ ದೂರದಲ್ಲಿ ನಡೆದಿದೆ. 

ತಕ್ಷಣ ಅಲ್ಲಿಂದ ಪೊಲೀಸ್ ಠಾಣೆಗೆ ಹೋದ ಸೋನಿಯಾ ಅರ್ಜುನ್ ಸಿಂಗ್ ನನ್ನ ಬಂಧಿಸಿ ಆತನ ಬಂದೂಕು ಪರವಾನಿಗೆ ರದ್ದು ಪಡಿಸುವಂತೆ ಅಲ್ಲಿದ್ದ ಠಾಣಾಧಿಕಾರಿ ಎಸ್ .ಪಿ. ಸಿಂಗ್ ಸಿಸೋಡಿಯಾ ಅವರಿಗೆ ಆದೇಶ ನೀಡಿದರು. ಬಳಿಕ ಹಿರಿಯಧಿಕಾರಿಗಳಿಗೆ ಮಾಹಿತಿ ನೀಡಲಾಯಿತು. ತಕ್ಷಣ ಭೇಟಿ ನೀಡಿದ ಹಿರಿಯಧಿಕಾರಿ ಮೊಹಮ್ಮದ್ ಇಸ್ರಾರ್ ಮನ್ಸೂರಿ ಅವರು ಕಾರ್ಯಾಚರಣೆಗೆ ನಿರ್ದೇಶನ ನೀಡಿದರು. ಆದರೆ ಈವರೆಗೆ ಅರ್ಜುನ್ ಸಿಂಗ್ ಬಂಧನ ಆಗಿಲ್ಲ. 

ಆದರೆ ಮಹಿಳಾ ಅಧಿಕಾರಿ ಮೇಲೆ  ಅರ್ಜುನ್ ಸಿಂಗ್ ಗೂಂಡಾಗಿರಿಯನ್ನು ಸುದ್ದಿಯಾಗದಂತೆ ತಡೆಯಲು ಅಧಿಕಾರಿ ವರ್ಗವೇ ಪ್ರಯತ್ನಿಸುತ್ತಿದೆ ಎಂದು ತಿಳಿದು ಬಂದಿದೆ. ನೂರಾರು ಜನರು ಹಾಗು ಪೊಲೀಸ್ ಸಿಬ್ಬಂದಿಯೆದುರೇ ಅರ್ಜುನ್ ಸಿಂಗ್ ಮಹಿಳಾ ಐಎಎಸ್ ಅಧಿಕಾರಿ ವಿರುದ್ಧ ಗೂಂಡಾಗಿರಿ ಮಾಡಿದ್ದರೂ ಆತ ಕೇವಲ ಪೊಲೀಸ್ ಸಿಬ್ಬಂದಿ ಜೊತೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಅಲ್ಲಿನ ಎಎಸ್ಪಿಯೇ ಹೇಳಿಕೆ ನೀಡಿರುವುದು ಸಂಶಯಕ್ಕೆ ಎಡೆ ಮಾಡಿದೆ. 

ಅರ್ಜುನ್ ಸಿಂಗ್ ವಿರುದ್ಧ ಐಪಿಸಿ 334, 332, 386, 294, 506B, 34 ಕಲಂ ಗಳ ಅನ್ವಯ ಪ್ರಕರಣ ದಾಖಲಾಗಿದೆ. ಇಲ್ಲಿ ನಡೆಯುವ ಅಕ್ರಮ ಮರಳುಗಾರಿಕೆಗೆ ಎಲ್ಲ ಪಕ್ಷಗಳ ನಾಯಕರ ಬೆಂಬಲ ಇರುವುದೂ ಅಧಿಕಾರಿಗಳ ನಿಷ್ಕ್ರಿಯತೆಗೆ ಇನ್ನೊಂದು ಕಾರಣ ಎಂದು ಹೇಳಲಾಗಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X