Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅನುಪಮಾ ಶೆಣೈ ಹೇಳಿಕೆ ಸದನದಲ್ಲಿ...

ಅನುಪಮಾ ಶೆಣೈ ಹೇಳಿಕೆ ಸದನದಲ್ಲಿ ಪ್ರತಿಧ್ವನಿ: ಆರೋಪ ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ: ಪಿ.ಟಿ.ಪರಮೇಶ್ವರ್ ನಾಯ್ಕ್

ವಿಫಲರಾದರೆ ನಿವೃತ್ತಿ ಆಗ್ತೀರಾ: ಶೆಟ್ಟರ್‌ಗೆ ಸವಾಲು

ವಾರ್ತಾಭಾರತಿವಾರ್ತಾಭಾರತಿ9 Feb 2017 8:36 PM IST
share
ಅನುಪಮಾ ಶೆಣೈ ಹೇಳಿಕೆ ಸದನದಲ್ಲಿ ಪ್ರತಿಧ್ವನಿ: ಆರೋಪ ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ: ಪಿ.ಟಿ.ಪರಮೇಶ್ವರ್ ನಾಯ್ಕ್

ಬೆಂಗಳೂರು, ಫೆ. 9: ‘ನನ್ನ ವರ್ಗಾವಣೆಗೆ ಪರಮೇಶ್ವರ್ ನಾಯ್ಕ 42ಲಕ್ಷ ರೂ. ಹಣ ಪಡೆದಿದ್ದರು’ ಎಂಬ ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಆರೋಪ ಸಂಬಂಧ ಯಾವುದೇ ತನಿಖೆಗೆ ಸಿದ್ಧ. ಆರೋಪ ಸಾಬೀತುಪಡಿಸಿದರೆ ತಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆಂದು ಮಾಜಿ ಸಚಿವ ಪಿ.ಟಿ.ಪರಮೇಶ್ವರ್ ನಾಯ್ಕಿ ಸವಾಲು ಹಾಕಿದ್ದಾರೆ.

ಗುರುವಾರ ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಪ್ರಸ್ತಾಪಿಸಿದ ವಿಷಯಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಒಂದು ವೇಳೆ ದಾಖಲೆ ಸಮೇತ ಆರೋಪ ಸಾಬೀತುಪಡಿಸಲು ಸಾಧ್ಯವಾಗದಿದ್ದರೆ ನೀವು ರಾಜಕೀಯ ನಿವೃತ್ತಿ ಪಡೆಯುತ್ತೀರಾ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್‌ಗೆ ಸವಾಲೆಸೆದಿದ್ದು, ಇದಕ್ಕೆ ಆಡಳಿತ ಪಕ್ಷದ ಸದಸ್ಯರು ಮೇಜುಕುಟ್ಟಿ ಸ್ವಾಗತಿಸಿದರು.

ಮಾಧ್ಯಮಗಳ ವರದಿಯನ್ನು ಆಧರಿಸಿ ಈ ಮನೆಯ ಸದಸ್ಯನ ವಿರುದ್ಧ ಸುಳ್ಳು ಆರೋಪ ಸಲ್ಲ. ಇದು ವಿಪಕ್ಷ ನಾಯಕರ ಸ್ಥಾನದ ಘನತೆಗೆ ಶೋಭೆ ತರುವುದಿಲ್ಲ. ಡಿವೈಎಸ್ಪಿ ಹುದ್ದೆ ಕಳೆದುಕೊಂಡ ಹತಾಶೆಯಿಂದ ಅನುಪಮಾ ಶೆಣೈ ಮನಸೋ ಇಚ್ಛೆ ಹೇಳಿಕೆ ನೀಡುತ್ತಿದ್ದಾರೆಂದು ಪರಮೇಶ್ವರ್ ನಾಯ್ಕಾ ವಾಗ್ದಾಳಿ ನಡೆಸಿದರು.

ವರ್ಗಾವಣೆಗೆ ತಾನು ಹಣ ಪಡೆದಿದ್ದೇನೆ ಎಂಬುದು ಸತ್ಯಕ್ಕೆ ದೂರ. ನನಗೂ, ಅವರು ಮಾಡಿರುವ ಆರೋಪಕ್ಕೂ ಯಾವುದೇ ಸಂಬಂಧವಿಲ್ಲ. ಸುಳ್ಳು ಆರೋಪ ಮಾಡುತ್ತಿದ್ದು, ಎಸಿಬಿ ತನಿಖೆ ಮಾತ್ರವಲ್ಲ, ಸಿಬಿಐ ತನಿಖೆಗೂ ತಾನು ಸಿದ್ಧ ಎಂದು ಪರಮೇಶ್ವರ್ ನಾಯ್ಕಿ ಪ್ರಕಟಿಸಿದರು.

ಆರಂಭಕ್ಕೆ ರಾಜ್ಯಪಾಲರ ಭಾಷಣದ ಮೇಲೆ ಮಾತನಾಡಿದ ಶೆಟ್ಟರ್, ಅನುಪಮಾ ಶೆಣೈ ವರ್ಗಾವಣೆಗೆ ಪಿ.ಟಿ.ಪರಮೇಶ್ವರ್ ನಾಯ್ಕೆ 42 ಲಕ್ಷ ರೂ.ಹಣ ಪಡೆದಿದ್ದಾರೆ ಎಂದು ಆರೋಪ ಸಂಬಂಧದ ಮಾಧ್ಯಮ ವರದಿ ಉಲ್ಲೇಖಿಸಿದರು. ಈ ಸಂಬಂಧ ಎಸಿಬಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

ಹೀಗಾಗಿ ಕೆಲಕಾಲ ಆಡಳಿತ ಮತ್ತು ವಿಪಕ್ಷ ಸದಸ್ಯರ ಮಧ್ಯೆ ಏರುಧ್ವನಿಯಲ್ಲಿ ಆರೋಪ-ಪ್ರತ್ಯಾರೋಪ, ತೀವ್ರ ವಾಗ್ವಾದ ನಡೆಯಿತು. ಈ ಮಧ್ಯೆ ಪ್ರತಿಕ್ರಿಯಿಸಿದ ಪರಮೇಶ್ವರ್ ನಾಯ್ಕಿ ‘ನಿಮಗೆ ನಾಚಿಕೆಯಾಗಬೇಕು’ ಎಂದು ವಿಪಕ್ಷ ಸದಸ್ಯರನ್ನು ಕೆರಳಿಸಿದರು.

ಈ ಹಂತದಲ್ಲಿ ಎದ್ದುನಿಂತ ವಿಶ್ವೇಶ್ವರ ಹೆಗಡೆ ಕಾಗೇರಿ, ಪರಮೇಶ್ವರ ನಾಯ್ಕ ಸದನದಲ್ಲೇ ಹೀಗೆ ವರ್ತಿಸುತ್ತಿದ್ದು, ಬಳ್ಳಾರಿಯಲ್ಲಿ ಏನೆಲ್ಲ ಮಾಡಿರಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು. ‘ನಿಮ್ಮಂಥ ವ್ಯಕ್ತಿಗಳಿಂದ ಹೇಗೆ ನಡೆದುಕೊಳ್ಳಬೇಕೆಂದು ತಾನು ಪಾಠ ಕಲಿಯಬೇಕಿಲ್ಲ. ನಿಮ್ಮ ಆಡಳಿತಾವಧಿಯಲ್ಲಿ ಏನೆಲ್ಲ ಮಾಡಿದ್ದೀರಿ ಎಂಬುದು ರಾಜ್ಯದ ಜನಕ್ಕೆ ಗೊತ್ತಿದೆ’ ಎಂದು ವಾಗ್ದಾಳಿ ಮುಂದುವರಿಸಿದರು.ಈ ವೇಳೆ ಮಧ್ಯಪ್ರವೇಶಿಸಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ, ಅನುಪಮಾ ಶೆಣೈ ಆರೇಳು ತಿಂಗಳಿನಿಂದ ಹೇಳಿಕೆ ಮೇಲೆ ಹೇಳಿಕೆ ನೀಡುತ್ತಿದ್ದು, ಎಸಿಬಿಗೆ ದೂರು ನೀಡಿದ್ದು ತನಿಖೆ ನಡೆಯುತ್ತಿದೆ. ತನಿಖೆ ವರದಿ ಬರಲಿ, ವರದಿ ಬಂದ ಮೇಲೆ ಈ ವಿಚಾರ ಪ್ರಸ್ತಾಪ ಮಾಡಬಹುದಿತ್ತು ಎನ್ನುವ ಮೂಲಕ ಕಾವೇರಿದ ವಾತಾವರಣ ತಿಳಿಯಾಗಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X