Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೂಟುಹೊಳೆಯಲ್ಲಿ ನೀರಿನ ಪ್ರಮಾಣ ಇಳಿಕೆ

ಕೂಟುಹೊಳೆಯಲ್ಲಿ ನೀರಿನ ಪ್ರಮಾಣ ಇಳಿಕೆ

ಕುಂಡಾಮೇಸಿ್ತ್ರ ನೀರು ಸರಬರಾಜಿಗೆ ತಾಂತ್ರಿಕ ಅಡಚಣೆ

ಎಸ್.ಕೆ.ಲಕ್ಷ್ಮೀಶ್,ಎಸ್.ಕೆ.ಲಕ್ಷ್ಮೀಶ್,9 Feb 2017 11:13 PM IST
share
ಕೂಟುಹೊಳೆಯಲ್ಲಿ ನೀರಿನ ಪ್ರಮಾಣ ಇಳಿಕೆ

 ಮಡಿಕೇರಿ ಮಡಿಕೇರಿ, ಫೆ.9: ನಗರದ ಶೇ.70ರಷ್ಟು ಭಾಗಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಕೂಟುಹೊಳೆಯಲ್ಲಿ ನೀರಿನ ಪ್ರಮಾಣ ಇಳಿಕೆಯಾಗಿದ್ದು, ಕುಡಿಯುವ ನೀರಿನ ಸಮಸ್ಯೆ ತಾರಕಕ್ಕೇರಿದೆ. ಟ್ರಾನ್ಸ್‌ಫಾರ್ಮರ್‌ಗೆ ಸಂಪರ್ಕ ಕಲ್ಪಿಸುವ ಕಾಪರ್ ವಯರ್ ಕಳ್ಳತನವಾಗಿ, ತಾಂತ್ರಿಕ ತೊಂದರೆ ಎದುರಾಗಿರುವುದರಿಂದ ಕುಂಡಾಮೇಸ್ತ್ರಿ ಯೋಜನೆಯ ಸ್ಥಳದಿಂದ ಕೂಟುಹೊಳೆಗೆ ನೀರು ಹರಿಸಲು ಸಾಧ್ಯವಾಗುತ್ತಿಲ್ಲ. ಮಡಿಕೇರಿ ನಗರದಲ್ಲಿ ಪ್ರತಿವರ್ಷ ಎಪ್ರಿಲ್ ಹಾಗೂ ಮೇ ತಿಂಗಳಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವುದು ಸಹಜ. ಕಳೆದ ಎರಡು ವರ್ಷಗಳಿಂದ ಕುಂಡಾಮೇಸ್ತ್ರಿ ಯೋಜನೆಯ ನೀರನ್ನು ಬಳಕೆ ಮಾಡುತ್ತಿರುವುದರಿಂದ ಇತ್ತೀಚೆಗೆ ಅಷ್ಟೇನು ನೀರಿನ ಕೊರತೆ ನಗರವನ್ನು ಕಾಡಿರಲಿಲ್ಲ. ಅಲ್ಲದೆ ಟ್ಯಾಂಕರ್ ನೀರಿಗಾಗಿ ಹಣ ಪೋಲಾಗುವುದು ಕೂಡ ತಪ್ಪಿತ್ತು. ಆದರೆ ಪ್ರಸ್ತುತ ವರ್ಷ ಫೆಬ್ರವರಿ ಮೊದಲ ವಾರದಿಂದಲೇ ಕುಡಿಯುವ ನೀರಿನ ಬವಣೆ ಆರಂಭವಾಗಿದೆ. ನಗರದ ಬಹುತೇಕ ಭಾಗಕ್ಕೆ ನೀರನ್ನು ಒದಗಿಸುವ ಕೂಟುಹೊಳೆಯಲ್ಲಿ ನೀರಿನ ಪ್ರಮಾಣ ಸಂಪೂರ್ಣವಾಗಿ ಕುಸಿದಿದೆ. ಕುಂಡಾಮೇಸ್ತ್ರಿ ಯೋಜನೆಯ ಮೂಲಕ ನೀರು ಹರಿಸಿ ಈ ಕೊರತೆಯನ್ನು ತುಂಬಬಹುದಾಗಿತ್ತಾದರೂ ತಾಂತ್ರಿಕ ಅಡಚಣೆಯಿಂದಾಗಿ 300 ಎಚ್‌ಪಿ ಮೋಟಾರ್ ಕಾರ್ಯ ನಿರ್ವಹಿಸುತ್ತಿಲ್ಲ. ಕುಂಡಾಮೇಸ್ತ್ರಿಯಿಂದ ನೀರನ್ನು ಹರಿಸಬೇಕಾದರೆ ವಿದ್ಯುತ್ ಕೇಂದ್ರದಲ್ಲಿ ದುರಸ್ತಿ ಕಾರ್ಯ ನಡೆಯಬೇಕಾಗಿದೆ. ಹೂಳು ತುಂಬಿರುವ ಕೂಟುಹೊಳೆ: ಕೂಟುಹೊಳೆಯಲ್ಲಿ ಹೂಳು ತುಂಬಿರುವುದರಿಂದ ಮತ್ತು ಕಳೆದ ವರ್ಷ ಮಳೆಯ ಪ್ರಮಾಣ ಕಡಿಮೆಯಿದ್ದ ಕಾರಣ ನೀರಿನ ಪ್ರಮಾಣ ಜನವರಿ ತಿಂಗಳಿನಲ್ಲೇ ಇಳಿಕೆಯಾಗಿದೆ. ಇನ್ನು ಒಂದು ವಾರಕ್ಕಾಗುವಷ್ಟು ಮಾತ್ರ ನೀರಿದ್ದು, ಕುಂಡಾಮೇಸ್ತ್ರಿ ಯೋಜನೆಯ ನೀರನ್ನು ಹರಿಸದಿದ್ದಲ್ಲಿ ಕೂಟುಹೊಳೆ ಸಂಪೂರ್ಣವಾಗಿ ಬರಿದಾಗುವ ಸಾಧ್ಯತೆಗಳಿವೆ. ಕಳೆದ 10 ವರ್ಷಗಳಿಂದ ಹೂಳೆತ್ತದೇ ಇರುವುದರಿಂದ ಕೂಟುಹೊಳೆ ತುಂಬಾ ಹೂಳು ತುಂಬಿದೆ. ದುರಸ್ತಿಯಾಗದ ಪೈಪ್‌ಲೈನ್: ಫಿಲ್ಟರ್ ಹೌಸ್‌ನಿಂದ ಎಲೆಪೇಟೆಗೆ ಸರಬರಾಜಾಗುವ ನೀರಿನ ಬೃಹತ್ ಪೈಪ್‌ಲೈನ್ ಕಡಿತಗೊಂಡು ಅನೇಕ ದಿನಗಳೇ ಕಳೆದಿದ್ದರೂ ದುರಸ್ತಿ ಕಾರ್ಯ ಮಾತ್ರ ಆರಂಭಗೊಂಡಿಲ್ಲ.
ನಗರದ ಪ್ರಮುಖ ಬಡಾವಣೆಗಳಲ್ಲಿ ಕಳೆದ ಎರಡು ವಾರಗಳಿಂದ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದ್ದು, ಸಾರ್ವಜನಿಕರು ನಗರಸಭೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಚ್ಚೆತ್ತುಕೊಳ್ಳದ ನಗರಸಭೆ: ಮಳೆಯ ಕೊರತೆಯಿಂದಾಗಿ ಈ ಬಾರಿ ಎರಡು ತಿಂಗಳಿಗೂ ಮೊದಲೇ ಕುಡಿಯುವ ನೀರಿನ ಸಮಸ್ಯೆ ನಗರವನ್ನು ಕಾಡಬಹುದೆನ್ನುವ ಬಗ್ಗೆ ಮುಂದಾಲೋಚನೆಯನ್ನು ಮಾಡದ ನಗರಸಭೆ ಇದೀಗ ಕೂಟುಹೊಳೆಯಲ್ಲಿ ನೀರು ಬರಿದಾಗುವ ಸಂದರ್ಭದಲ್ಲಿ ಎಚ್ಚೆತ್ತುಕೊಂಡಂತೆ ಕಂಡು ಬರುತ್ತಿದೆ. ಕುಂಡಾಮೇಸ್ತ್ರಿ ಯೋಜನೆಯ ಸ್ಥಿತಿಗತಿಯ ಬಗ್ಗೆ ಪರಿಶೀಲಿಸದೆ ಇರುವುದರಿಂದಲೇ ಆಗಸ್ಟ್ ತಿಂಗಳಿನಲ್ಲಿ ನಡೆದ ಕಾಪರ್ ವಯರ್ ಕಳ್ಳತನ ಪ್ರಕರಣ ಈಗಷ್ಟೆ ಬೆಳಕಿಗೆ ಬಂದಿದೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಮನ್ವಯತೆಯ ಕೊರತೆ ಹಾಗೂ ನಿರ್ಲಕ್ಷವೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಲು ಕಾರಣವೆಂದು ವಿವಿಧ ಬಡಾವಣೆಗಳ ನಿವಾಸಿಗಳು ಆರೋಪಿಸಿದ್ದಾರೆ.

share
ಎಸ್.ಕೆ.ಲಕ್ಷ್ಮೀಶ್,
ಎಸ್.ಕೆ.ಲಕ್ಷ್ಮೀಶ್,
Next Story
X