Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಚನಕಾರರಿಂದ ಆಧುನಿಕ ಸಾಹಿತ್ಯವನ್ನು...

ವಚನಕಾರರಿಂದ ಆಧುನಿಕ ಸಾಹಿತ್ಯವನ್ನು ಮೀರಿಸುವ ಸಾಹಿತ್ಯಕೃಷಿ: ವೈದೇಹಿ

ವಾರ್ತಾಭಾರತಿವಾರ್ತಾಭಾರತಿ10 Feb 2017 4:05 PM IST
share
ವಚನಕಾರರಿಂದ ಆಧುನಿಕ ಸಾಹಿತ್ಯವನ್ನು ಮೀರಿಸುವ ಸಾಹಿತ್ಯಕೃಷಿ: ವೈದೇಹಿ

ಮಂಗಳೂರು, ಫೆ.10: ಯಾವುದೇ ಆಧುನಿಕ ಸಾಹಿತ್ಯವನ್ನು ಮೀರಿಸುವ ಸಾಹಿತ್ಯವನ್ನು ಅಕ್ಕ ಮಹಾದೇವಿ ಸೇರಿದಂತೆ ವಚನಕಾರರು ಬಹಳ ಹಿಂದೆಯೇ ರಚಿಸಿದ್ದಾರೆ ಎಂದು ಖ್ಯಾತ ಸಾಹಿತಿ ವೈದೇಹಿ ಅಭಿಪ್ರಾಯಿಸಿದರು.

ಸಂತ ಆ್ಯಗ್ನೆಸ್‌ ಕಾಲೇಜು(ಸ್ವಾಯತ್ತ) ಕನ್ನಡ ಹಾಗೂ ಗ್ರಂಥಾಲಯ ವಿಭಾಗ, ಕೇಂದ್ರ ಸಾಹಿತ್ಯ ಅಕಾಡಮಿ ಮತ್ತು ಆಕಾಶವಾಣಿ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಶುಕ್ರವಾರ ನಡೆದ ‘ಆಧುನಿಕ ಕನ್ನಡ ಮಹಿಳಾ ಸಾಹಿತ್ಯ ಇತ್ತೀಚಿನ ವಿದ್ಯಮಾನಗಳು’ ಎಂಬ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಅಕ್ಕ ಮಹಾದೇವಿಯಂತಹ ವಚನಕಾರರು ರಚಿಸಿದ ಕೃತಿಗಳನ್ನು ಹಿಂದಿನ ಕಾಲದ ಸಾಹಿತ್ಯ ದೂರ ಇಡಲು ಸಾಧ್ಯವಿಲ್ಲ. ಈ ಕೃತಿಗಳು ನಮ್ಮ ಇಂದಿನ ಸಮಾಜದ ಹುಳುಕುಗಳನ್ನು ಎತ್ತಿ ತೋರುತ್ತವೆ ಮತ್ತು ಸಾರ್ವಕಾಲಿಕ ವೌಲ್ಯವನ್ನು ಸಾರುತ್ತವೆ. ಮಹಿಳಾ ಸಾಹಿತಿಗಳು ತಮ್ಮ ಕೃತಿಗಳ, ಮೂಲಕ ಆತ್ಮಕತೆಗಳನ್ನು ಬರೆಯುವ ಮೂಲಕ ಸಮಾಜದಲ್ಲಿ ನಮ್ಮ ಧ್ವನಿಯೂ ಇದೆ ಎಂದು ತೋರಿಸಿಕೊಟ್ಟಿದ್ದಾರೆ ಎಂದು ವಿವರಿಸಿದರು.

ಪ್ರಸಕ್ತ ಹೊರಗೆ ಹೋದ ಹೆಣ್ಣು ಮಗು ಸುರಕ್ಷಿತವಾಗಿ ಹಿಂದಿರುಗಿ ಬರಲಾಗದ ಸಮಾಜ ನಮ್ಮ ಸುತ್ತ ಸೃಷ್ಟಿಯಾಗಿದೆ. ಈ ಸನ್ನಿವೇಶದಲ್ಲಿ ಮನುಷ್ಯರನ್ನು ಪರಸ್ಪರ ಒಂದುಗೂಡಿಸುವ ಸಾಹಿತ್ಯ ಕೃತಿಗಳು ದೀಪ ಹಚ್ಚುವ ರೀತಿಯಲ್ಲಿ ನಮ್ಮ ನಡುವೆ ಮೂಡಿ ಬರಬೇಕಾಗಿದೆ ಎಂದು ವೈದೇಹಿ ನುಡಿದರು.

ಹೆಣ್ಣು ಮಕ್ಕಳ ಬಗ್ಗೆ ಅಪಕಲ್ಪನೆ ಸೃಷ್ಟಿಯಾಗಿರುವ ಪ್ರಸಕ್ತ ಸನ್ನಿವೇಶದಲ್ಲಿ ನಮ್ಮ ಸುತ್ತಮುತ್ತ ಏನು ನಡೆಯುತ್ತಿವೆ ಎಂಬ ಕುತೂಹಲ, ಕಾತರವನ್ನು ಇಟ್ಟುಕೊಂಡು ನಾವು ಕೃತಿಗಳನ್ನು ರಚಿಸಬೇಕು.ಸಮಾಜದಲ್ಲಿ ಹಲವು ಮಹಿಳೆಯರು ತಮ್ಮ ನೋವು ನಲಿವುಗಳನ್ನು ಕೃತಿಗಳಲ್ಲಿ ದಾಖಲಿಸಿದ್ದರೂ ನಾವು ಮತ್ತೆ ನಮ್ಮ ಅನುಭವವಗಳನ್ನು ದಾಖಲಿಸಬೇಕಾಗಿದೆ. ಏಕೆಂದರೆ ನಾವು ಇಲ್ಲಿ ಉಸಿರಾಡಿಕೊಂಡು ಬದುಕಿದ್ದೇವೆ. ಸಾಹಿತ್ಯ ತಮ್ಮ ಇರುವಿಕೆಯ ಗುರುತು, ಉಸಿರಾಡುತ್ತಿರುವುದರ ಸಂಕೇತವಾಗಿದೆ ಎಂದರು.

ಹಿಂದಿನ ಮಹಿಳೆಯರು ಅಡುಮನೆಯಲ್ಲೇ ಇದ್ದುಕೊಂಡು ಪ್ರಮುಖವಾದ ಸಾಹಿತ್ಯ ಕೃತಿಗಳನ್ನು ರಚಿಸಿದ್ದಾರೆ. ಈಗಿನ ಮಹಿಳೆಯರು ಅಡುಗೆ ಮನೆಯನ್ನು ಬಿಟ್ಟು ಹೊರ ಬಂದಿದ್ದಾರೆ.ಸಾಕಷ್ಟು ಕ್ಷೇತ್ರಗಳಲ್ಲಿ ದುಡಿಯುತ್ತಿದ್ದಾರೆ. ಈ ಸಂದರ್ಭದಲ್ಲಿ ವರ್ತಮಾನದ ಘಟನೆಗಳನ್ನು ತೆರೆದ ಕಣ್ಣುಗಳಿಂದ ನೋಡಿ ತಮ್ಮ ಕೃತಿಗಳನ್ನು ರಚಿಸಬೇಕಾದ ಅಗತ್ಯವಿದೆ ಎಂದು ವೈದೇಹಿ ಹೇಳಿದರು.

ಮುಖ್ಯ ಅತಿಥಿಯಾಗಿ ಆಕಾಶವಾಣಿಯ ಸಹಾಯಕ ನಿಲಯ ನಿರ್ದೇಶಕಿ ಎನ್.ಉಷಾಲತಾ, ಸೈಂಟ್ ಆ್ಯಗ್ನೆಸ್ ಕನ್ನಡ ಸಂಘದ ಸಂಚಾಲಕ ಡಾ.ಸಂಪೂರ್ಣಾನಂದ ಬಳ್ಕೂರ್, ಮಂಗಳೂರು ಆಕಾಶವಾಣಿಯ ಕಾರ್ಯಕ್ರಮ ನಿರ್ದೇಶಕ ಪಿ.ಸೂರ್ಯನಾರಾಯಣ ಭಟ್ ಮೊದಲಾದವರು ಉಪಸ್ಥಿತರಿದ್ದರು.

ಸೈಂಟ್ ಆಗ್ನೆಸ್ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಜಸ್ವೀನಾ ಎ.ಸಿ. ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X