Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು ನಗರಸಭೆ ಉಪಚುನಾವಣೆಗೆ ಸರ್ವ...

ಪುತ್ತೂರು ನಗರಸಭೆ ಉಪಚುನಾವಣೆಗೆ ಸರ್ವ ಸಿದ್ದತೆ

ಫೆ.12 ರಂದು ಮತದಾನ: ಹಕ್ಕು ಚಲಾಯಿಸಲಿರುವ 9585 ಮಂದಿ ಮತದಾರರು

ವಾರ್ತಾಭಾರತಿವಾರ್ತಾಭಾರತಿ11 Feb 2017 5:30 PM IST
share
ಪುತ್ತೂರು ನಗರಸಭೆ ಉಪಚುನಾವಣೆಗೆ ಸರ್ವ ಸಿದ್ದತೆ

ಪುತ್ತೂರು,ಫೆ.11: ನಗರಸಭೆಯ 6 ವಾರ್ಡ್‌ಗಳಿಗೆ ಭಾನುವಾರ ನಡೆಯಲಿರುವ ಉಪಚುನಾವಣೆಗೆ ಸರ್ವ ಸಿದ್ದತೆಗಳು ನಡೆದಿದ್ದು, ಶನಿವಾರ ತಾಲೂಕು ಕಚೇರಿಯ ಸಭಾಂಗಣದಲ್ಲಿ ಮಸ್ಟರಿಂಗ್ ನಡೆಯಿತು. 6 ವಾರ್ಡ್‌ಗಳ ವ್ಯಾಪ್ತಿಯಲ್ಲಿ 4755 ಪುರುಷರು ಹಾಗೂ 4830 ಮಹಿಳೆಯರು ಸೇರಿದಂತೆ ಒಟ್ಟು 9585 ಮಂದಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.

6 ಕ್ಷೇತ್ರಗಳಲ್ಲಿ ಒಟ್ಟು 10 ಮತಗಟ್ಟೆಗಳಿದ್ದು, 6ನೇ ವಾರ್ಡ್, 16ನೇ ವಾರ್ಡ್, 21ನೇ ವಾರ್ಡ್ ಮತ್ತು 26ನೇ ವಾರ್ಡ್‌ಗಳಲ್ಲಿ ತಲಾ 2 ಮತಗಟ್ಟೆಗಳಿವೆ, ಉಳಿಂದತೆ 19ನೇ ವಾರ್ಡ್ ಮತ್ತು 22ನೇ ವಾರ್ಡ್‌ಗಳಲ್ಲಿ ತಲಾ 1 ಮತಗಟ್ಟೆಗಳಿವೆ. ಉಪಚುಣಾವಣೆಯಲ್ಲಿ ಯಾವುದೇ ಸೂಕ್ಷ್ಮ ಅಥವಾ ಅತಿಸೂಕ್ಷ್ಮ ಮತೆಗಟ್ಟೆಗಳಿಲ್ಲ. ಎಲ್ಲಾ 6 ವಾರ್ಡ್‌ಗಳೂ ಸಾಮಾನ್ಯ ಮತಗಟ್ಟೆಯಾಗಿದೆ. ಉಪವಿಭಾಗಾಧಿಕಾರಿ ರಘುನಂದನ್ ಮೂರ್ತಿ ಮುಖ್ಯ ಚುನಾವಣಾಧಿಕಾರಿಯಾಗಿದ್ದಾರೆ. ಸಹಾಯಕ ಕೃಷಿ ನಿರ್ದೇಶಕ ನಯೀಂ ಹುಸೇನ್ ಉಪಚುನಾವಣಾಧಿಕಾರಿಯಾಗಿದ್ದು, ತಹಸೀಲ್ದಾರ್ ಅನಂತಶಂಕರ್ ಅವರು ಚುನಾವಣಾ ಉಸ್ತುವಾರಿಯಾಗಿದ್ದಾರೆ. ಎಸಿಎಫ್ ಸುಂದರ್ ಶೆಟ್ಟಿ ಸೆಕ್ಟರ್ ಆಫೀಸರ್ ಆಗಿ ಮತ್ತು ತರಬೇತಿ ಅಧಿಕಾರಿ ಪ್ರಶಾಂತ್ ನಾಯಕ್ ತಾಂತ್ರಿಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಪ್ರತಿಯೊಂದು ಮತಗಟ್ಟೆಗೆ ತಲಾ ಮೂವರು ಮತದಾನ ಅಧಿಕಾರಿಗಳು ಮತ್ತು ಒಬ್ಬರು ಡಿ ಗ್ರೂಪ್ ನೌಕರರನ್ನು ನಿಯೋಜಿಸಲಾಗಿದೆ. 1400ಕ್ಕೂ ಅಧಿಕ ಮತದಾರರಿರುವ ಮತಗಟ್ಟೆಗಳಿಗೆ ನಾಲ್ವರು ಮತದಾನ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ರವಿವಾರ ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದ್ದು, ಬಳಿಕ ತಾಲೂಕು ಕಚೇರಿಯಲ್ಲಿ ಡಿಮಸ್ಟರಿಂಗ್ ನಡೆಯಲಿದೆ. ಎಲ್ಲಾ ಮತಪೆಟ್ಟಿಗೆಗಳನ್ನು ಉಪಖಜಾನೆಯ ಭದ್ರತಾ ಕೊಠಡಿಯಲ್ಲಿರಿಸಲಾಗುತ್ತದೆ.

ನೋಟಾ ಅವಕಾಶಗಳಿಲ್ಲ:

ಮತದಾನಕ್ಕೆ ಇಲೆಕ್ಟ್ರಾನಿಕ್ ಮತಯಂತ್ರಗಳನ್ನು ಬಳಸಲಾಗುತ್ತಿದೆ. ಆದರೆ ನೋಟಾ ಮತದಾನಕ್ಕೆ ಇದರಲ್ಲಿ ಅವಕಾಶಗಳಿಲ್ಲ. ನಗರ ಮತ್ತು ಸ್ಥಳೀಯ ಸಂಸ್ಥೆಗಳಿಗೆ ನಡೆಯುವ ಚುನಾವಣೆಗಳಲ್ಲಿ ನೋಟಾ ಬಳಸಲು ಇನ್ನೂ ಅವಕಾಶಗಳನ್ನು ಕಲ್ಪಸಿರದ ಕಾರಣ ನೋಟಾ ಮತದಾನಕ್ಕೆ ಅವಕಾಶಗಳಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X