Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನ್ಯೂಝಿಲ್ಯಾಂಡ್: ತಿಮಿಂಗಿಲಗಳನ್ನು ದೂರ...

ನ್ಯೂಝಿಲ್ಯಾಂಡ್: ತಿಮಿಂಗಿಲಗಳನ್ನು ದೂರ ಅಟ್ಟಲು ಮಾನವ ಸರಪಣಿ

ವಾರ್ತಾಭಾರತಿವಾರ್ತಾಭಾರತಿ11 Feb 2017 8:23 PM IST
share
ನ್ಯೂಝಿಲ್ಯಾಂಡ್: ತಿಮಿಂಗಿಲಗಳನ್ನು ದೂರ ಅಟ್ಟಲು ಮಾನವ ಸರಪಣಿ

ವೆಲಿಂಗ್ಟನ್, ಫೆ. 11: ನೂರಾರು ಸಂಖ್ಯೆಯಲ್ಲಿ ಸಮುದ್ರ ತೀರಕ್ಕೆ ಬಂದು ಸಿಕ್ಕಿಹಾಕಿಕೊಂಡಿರುವ ತಿಮಿಂಗಿಲಗಳನ್ನು ರಕ್ಷಿಸಲು ನ್ಯೂಝಿಲ್ಯಾಂಡ್‌ನ ರಕ್ಷಣಾ ಕಾರ್ಯಕರ್ತರು ತಮಗೆ ತಿಳಿದಿರುವ ಎಲ್ಲ ತಂತ್ರಗಳನ್ನು ಬಳಸುತ್ತಿದ್ದಾರೆ.

ಸುಮಾರು 200 ಪೈಲಟ್ ತಿಮಿಂಗಿಲಗಳು ಮತ್ತೆ ತೀರಕ್ಕೆ ಬರದಂತೆ ತಡೆಯುವುದಕ್ಕಾಗಿ ಕಾರ್ಯಕರ್ತರು ಶನಿವಾರ ಕುತ್ತಿಗೆವರೆಗಿನ ಆಳದ ನೀರಿನಲ್ಲಿ ಮಾನವ ಸರಪಳಿಯನ್ನು ನಡೆಸಿದರು.ಇಲ್ಲಿ ಈಗಾಗಲೇ ಸುಮಾರು 300 ತಿಮಿಂಗಿಲಗಳು ಈ ವಾರ ಸಾವನ್ನಪ್ಪಿವೆ.

ನ್ಯೂಝಿಲ್ಯಾಂಡ್‌ನ ಸೌತ್ ಐಲ್ಯಾಂಡ್‌ನ ತುದಿಯಲ್ಲಿರುವ ಗೋಲ್ಡನ್ ಬೇ ಸಮುದ್ರ ತೀರದ ಆಳವಿರದ ನೀರಿನಲ್ಲಿ ತಿಮಿಂಗಿಲಗಳು ಬಂದು ಸೇರಿಕೊಂಡಿವೆ.

ನ್ಯೂಝಿಲ್ಯಾಂಡ್‌ನಲ್ಲಿ ಇಷ್ಟೊಂದು ಪ್ರಮಾಣದಲ್ಲಿ ತಿಮಿಂಗಿಲಗಳು ಸಮುದ್ರ ತೀರಕ್ಕೆ ಬಂದು ಸಿಕ್ಕಿಹಾಕಿಕೊಂಡಿರುವುದು 1985ರ ಬಳಿಕ ಇದೇ ಮೊದಲ ಬಾರಿಯಾಗಿದೆ. 1985ರಲ್ಲಿ ಆಕ್ಲಂಡ್‌ನಲ್ಲಿ 450 ತಿಮಿಂಗಿಲಗಳು ಸಮುದ್ರ ತೀರಕ್ಕೆ ಬಂದಿದ್ದವು.

ಸುಮಾರು 100 ರಕ್ಷಣಾ ಸ್ವಯಂಸೇವಕರ ಗುಂಪೊಂದು ಮೂರು ದೋಣಿಗಳ ಸಹಾಯದಿಂದ ತಿಮಿಂಗಿಲಗಳು ತೀರಕ್ಕೆ ಬರದಂತೆ ತಡೆಯುತ್ತಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

‘‘ಈ ತಿಮಿಂಗಿಲಗಳು ಉತ್ತಮ ಸ್ಥಿತಿಯಲ್ಲಿಲ್ಲ. ಯಾತನೆಯಿಂದ ಮುಕ್ತಿ ನೀಡಲು ಅವುಗಳಿಗೆ ದಯಾಮರಣ ನೀಡಲಾಗುವುದು’’ ಎಂದು ಅರಣ್ಯ ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ.

ಆಳವಿಲ್ಲದ ಬೀಚ್‌ನಲ್ಲಿ ದಿಕ್ಕು ತಪ್ಪಿರಬಹುದು

ಗೋಲ್ಡನ್ ಬೇ ಸಮುದ್ರ ತೀರಕ್ಕೆ ತಿಮಿಂಗಿಲಗಳು ಬಂದು ಸಿಕ್ಕಿಹಾಕಿಕೊಳ್ಳುವುದು ಅಪರೂಪವೇನಲ್ಲ. ಆದಾಗ್ಯೂ, ಇದಕ್ಕೆ ನಿಖರ ಕಾರಣ ತಿಳಿದಿಲ್ಲ.

ಈ ಬೀಚ್‌ನ ಅತ್ಯಂತ ಕಡಿಮೆ ಮಟ್ಟದ ನೀರು ತಿಮಿಂಗಿಲಗಳ ಸೋನಾರ್ ವ್ಯವಸ್ಥೆಯನ್ನು ಗೊಂದಲಕ್ಕೀಡುಮಾಡುತ್ತಿರಬಹುದು, ಹಾಗಾಗಿ, ಸಮುದ್ರದ ಇಳಿತದ ಸಮಯದಲ್ಲಿ ಅವುಗಳು ಸಿಕ್ಕಿಹಾಕಿಕೊಳ್ಳುತ್ತಿರಬಹುದು ಎಂದು ಪರಿಣತರು ಹೇಳುತ್ತಾರೆ.

ಪೈಲಟ್ ತಿಮಿಂಗಿಲಗಳು ಅಪಾಯದಂಚಿನಲ್ಲಿರುವ ಪ್ರಾಣಿಗಳ ಪಟ್ಟಿಗೆ ಸೇರ್ಪಡೆಯಾಗಿಲ್ಲ. ಆದರೆ, ನ್ಯೂಝಿಲ್ಯಾಂಡ್ ಸಮುದ್ರದಲ್ಲಿ ಅವುಗಳು ಎಷ್ಟು ಸಂಖ್ಯೆಯಲ್ಲಿರಬಹುದು ಎಂಬ ಬಗ್ಗೆ ಯಾವುದೇ ಮಾಹಿತಿಯಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X