Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾದಕ ದ್ರವ್ಯ ಮಾಫಿಯಾ ವಿರುದ್ಧ ಹೋರಾಟ

ಮಾದಕ ದ್ರವ್ಯ ಮಾಫಿಯಾ ವಿರುದ್ಧ ಹೋರಾಟ

ವಾರ್ತಾಭಾರತಿವಾರ್ತಾಭಾರತಿ11 Feb 2017 8:27 PM IST
share

ಉಡುಪಿ, ಫೆ.11: ಜಿಲ್ಲೆಯಲ್ಲಿ ಅದರಲ್ಲೂ ವಿಶೇಷವಾಗಿ ಮಣಿಪಾಲ ಕೇಂದ್ರಿತವಾಗಿ ತಲೆಎತ್ತಿರುವ ಅಕ್ರಮ ಜೂಜು ಹಾಗೂ ಡ್ರಗ್ಸ್ ಮಾಫಿಯಾವನ್ನು ತಡೆಗಟ್ಟುವ ವಿರುದ್ಧ ಯುವ ಮೋರ್ಚಾ ಹೋರಾಟವನ್ನು ಸಂಘಟಿಸಲಿದೆ ಎಂದು ಉಡುಪಿ ನಗರ ಯುವಮೋರ್ಚಾದ ಅಧ್ಯಕ್ಷ ಅಕ್ಷಿತ್ ಶೆಟ್ಟಿ ತಿಳಿಸಿದ್ದಾರೆ.

ಮಣಿಪಾಲ ನಗರದ ಹೃದಯಭಾಗದಲ್ಲಿ ವಿದ್ಯಾರ್ಥಿಗಳ ಭವಿಷ್ಯವನ್ನೇ ಬರಡು ಮಾಡಬಲ್ಲ ಜುಗಾರಿ ಅಡ್ಡೆಗಳು ತಲೆ ಎತ್ತುತ್ತಿದ್ದು ಪೊಲೀಸ್ ಇಲಾಖೆ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೆ ಇರುವುದು ಹಲವಾರು ಅನುಮಾನಗಳನ್ನು ಹುಟ್ಟು ಹಾಕಿದೆ ಎಂದು ಅಕ್ಷಿತ್ ಶೆಟ್ಟಿ ಹೆರ್ಗ ಆತಂಕ ವ್ಯಕ್ತ ಪಡಿಸಿದ್ದಾರೆ.

. ಮಣಿಪಾಲಕ್ಕೆ ದೇಶವಿದೇಶಗಳವಿದ್ಯಾರ್ಥಿಗಳು ವಿದ್ಯಾರ್ಜನೆಗಾಗಿ ಬರುತ್ತಿದ್ದು, ಜಾಗತಿಕ ಮಟ್ಟದಲ್ಲಿ ಅದಕ್ಕೆ ತನ್ನದೇ ಆದ ಮಾನ್ಯತೆ ಇದೆ. 30 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತಿದ್ದಾರೆ. ಈ ಯುವ ಸಮುದಾಯವನ್ನು ಗುರಿಯಾಗಿಸಿಕೊಂಡು ಮಾದಕದ್ರವ್ಯ ಜಾಲ, ಜುಗಾರಿ ಅಡ್ಡೆಗಳು ನಾಯಿಕೊಡೆಗಳಂತೆ ಅಲ್ಲಲ್ಲಿ ತೆಲೆ ಎತ್ತುತ್ತಿವೆ. ಹಳೆಯ ಇಸ್ಟೀಟು ಆಟವನ್ನೇ ಆಧುನಿಕ ರೂಪದಲ್ಲಿ ವಿದ್ಯಾರ್ಥಿಗಳ ಮುಂದಿಟ್ಟು ಸಾವಿರಾರು ರೂ. ಪ್ರವೇಶ ಶುಲ್ಕ ಪಡೆದು ಇಲ್ಲಿ ಮಕ್ಕಳನ್ನು ಜೂಜು ಆಡುವಂತೆ ಪ್ರೇರೇಪಿಸ ಲಾಗುತ್ತಿದೆ ಎಂದವರು ಹೇಳಿದ್ದಾರೆ.

ಒಮ್ಮೆ ಈ ಆಟದ ಚಟಕ್ಕೆ ಬಿದ್ದರೆ ಮತ್ತೆ ವಿದ್ಯಾರ್ಥಿಗಳು ಇದರಿಂದ ಹೊರ ಬರುವುದು ಸಾಧ್ಯವಿಲ್ಲ. ಅಕ್ರಮಗಳ ಕೇಂದ್ರ ಸ್ಥಾನವಾಗಿರುವ ಇಂಥ ಹಲವಾರು ಅಡ್ಡೆಗಳು ಕಾರ್ಯಚರಿಸುತ್ತಿವೆ. ಇದರ ಹಿಂದೆ ರಾಜಕೀಯ ಶಕ್ತಿಗಳ ಒತ್ತಡವೂ ಇರುವ ಸಾಧ್ಯತೆ ಇದೆ. ಸ್ಥಳೀಯ ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಮಾದಕ ವಸ್ತುಗಳ ಮಾರಾಟ ಜಾಲವೂ ಕಾರ್ಯನಿರ್ವಹಿಸುತ್ತಿದೆ.

ಯುವ ಸಮುದಾಯದ ಬಗ್ಗೆ ಕಾಳಜಿ ತೋರಬೇಕಿರುವ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಈ ಬಗ್ಗೆ ಕೈ ಕಟ್ಟಿ ಕುಳಿತಿರುವುದನ್ನು ನಗರ ಬಿಜೆಪಿ ಯುವ ಮೋರ್ಚಾ ಉಗ್ರವಾಗಿ ಖಂಡಿಸುತ್ತದೆ. ಮುಂದಿನ ಒಂದು ವಾರದೊಳಗೆ ಇಂಥ ಜೂಜು ಕೇಂದ್ರಗಳನ್ನು ಪತ್ತೆ ಹಚ್ಚಿ ಅವುಗಳನ್ನು ಮುಚ್ಚಿ ಅದರ ಹಿಂದಿರುವ ಸಮಾಜಘಾತುಕ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ತಪ್ಪಿದರೆ ನಗರ ಯುವ ಮೋರ್ಚಾ ವತಿಯಿಂದ ಅಂತಹ ಅಡ್ಡೆಗಳ ಮುಂಭಾಗದಲ್ಲೇ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X