Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಲಸಿಗರನ್ನು ನಿಷೇಧಿಸಲು ನೂತನ ಆದೇಶ...

ವಲಸಿಗರನ್ನು ನಿಷೇಧಿಸಲು ನೂತನ ಆದೇಶ :ಟ್ರಂಪ್ ಇಂಗಿತ

ವಾರ್ತಾಭಾರತಿವಾರ್ತಾಭಾರತಿ11 Feb 2017 8:29 PM IST
share
ವಲಸಿಗರನ್ನು ನಿಷೇಧಿಸಲು ನೂತನ ಆದೇಶ :ಟ್ರಂಪ್ ಇಂಗಿತ

ವಾಶಿಂಗ್ಟನ್, ಫೆ. 11: ಮುಸ್ಲಿಮ್ ಬಾಹುಳ್ಯದ ದೇಶಗಳ ನಿವಾಸಿಗಳಿಗೆ ಅಮೆರಿಕ ಪ್ರವೇಶವನ್ನು ನಿಷೇಧಿಸುವ ತನ್ನ ಮೊದಲ ಆದೇಶ ನ್ಯಾಯಾಲಯದ ಅವಕೃಪೆಗೆ ಗುರಿಯಾಗಿರುವ ಹಿನ್ನೆಲೆಯಲ್ಲಿ, ನೂತನ ಆದೇಶವೊಂದನ್ನು ಸಿದ್ಧಪಡಿಸುವ ಬಗ್ಗೆ ಪರಿಶೀಲಿಸುತ್ತಿದ್ದೇನೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಹೇಳಿದ್ದಾರೆ.

ಫೆಡರಲ್ ನ್ಯಾಯಾಲಯದಲ್ಲಿ ಎರಡು ಬಾರಿ ಸೋಲು ಅನುಭವಿಸಿದ ಹೊರತಾಗಿಯೂ ಕಾನೂನು ತನ್ನ ಪರವಾಗಿದೆ ಎಂದು ಹೇಳಿಕೊಂಡ ಟ್ರಂಪ್, ಭದ್ರತಾ ಬೆದರಿಕೆಯ ಹಿನ್ನೆಲೆಯಲ್ಲಿ ಕಾನೂನು ವ್ಯವಸ್ಥೆಯು ಅನುಮತಿ ನೀಡುವ ಮೊದಲೇ ಕ್ಷಿಪ್ರವಾಗಿ ಕ್ರಮ ತೆಗೆದುಕೊಳ್ಳಬೇಕಾದ ಅಗತ್ಯವಿದೆ ಎಂದು ಹೇಳಿದರು.

‘‘ಕಾನೂನುಬದ್ಧವಾಗಿ ಹೋದರೆ ಸಮಯ ತೆಗೆದುಕೊಳ್ಳುತ್ತದೆ, ಆದರೆ, ನಾವು ಹೋರಾಟದಲ್ಲಿ ಜಯ ಗಳಿಸುವುದು ಖಂಡಿತ. ಅದೂ ಅಲ್ಲದೆ, ನಮ್ಮಲ್ಲಿ ಇತರ ಹಲವಾರು ಆಯ್ಕೆಗಳೂ ಇವೆ. ಹೊಸ ಆದೇಶವೊಂದನ್ನು ಹೊರಡಿಸುವುದು ಅವುಗಳ ಪೈಕಿ ಒಂದು’’ ಎಂದರು.ಆದಾಗ್ಯೂ, ಮುಂದಿನ ವಾರಕ್ಕಿಂತ ಮೊದಲು ಯಾವುದೇ ಕ್ರಮ ತೆಗೆದುಕೊಳ್ಳಲಾಗುವುದಿಲ್ಲ ಎಂದು ಟ್ರಂಪ್ ನುಡಿದರು.

ನೂತನ ಕರಡು ರಚನೆ ನಿಮ್ಮ ಯೋಜನೆಯ ಭಾಗವಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅಮೆರಿಕದ ಅಧ್ಯಕ್ಷರು, ‘‘ಭದ್ರತಾ ಕಾರಣಗಳ ಹಿನ್ನೆಲೆಯಲ್ಲಿ ನಾವು ವೇಗವಾಗಿ ಕಾರ್ಯಾಚರಿಸಬೇಕಾಗಿದೆ. ಹಾಗಾಗಿ, ಅದೇ ಆಗಬಹುದಾಗಿದೆ’’ ಎಂದರು.

ಪ್ರವಾಸಿ ಜಪಾನ್ ಪ್ರಧಾನಿ ಶಿಂರೊ ಅಬೆ ಜೊತೆಗೆ ಶುಕ್ರವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟ್ರಂಪ್, ‘‘ದೇಶಕ್ಕೆ ಎದುರಾಗಿರುವ ಅಗಾಧ ಬೆದರಿಕೆಗಳ ಬಗ್ಗೆ ಅಧ್ಯಕ್ಷನ ನೆಲೆಯಲ್ಲಿ ನಾನು ತಿಳಿದುಕೊಂಡಿದ್ದೇನೆ’’ ಎಂದರು.

ನೋಂದಣಿಯಾಗದ ನೂರಾರು ವಲಸಿಗರ ಬಂಧನ

ಈ ವಾರ ಅಮೆರಿಕದ ಕನಿಷ್ಠ ನಾಲ್ಕು ರಾಜ್ಯಗಳಲ್ಲಿ ನೋಂದಣಿಯಾಗದ ನೂರಾರು ವಲಸಿಗರನ್ನು ಫೆಡರಲ್ ವಲಸೆ ಅಧಿಕಾರಿಗಳು ಬಂಧಿಸಿದ್ದಾರೆ.
ವಲಸೆ ಅಧಿಕಾರಿಗಳು ಅಟ್ಲಾಂಟ, ನ್ಯೂಯಾಕ್, ಶಿಕಾಗೊ, ಲಾಸ್ ಏಂಜಲಿಸ್ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಅಮೆರಿಕ ವಲಸೆ ಮತ್ತು ಸುಂಕ ಇಲಾಖೆಯ ಲಾಸ್ ಏಂಜಲಿಸ್ ಕ್ಷೇತ್ರ ಕಚೇರಿಯ ನಿರ್ದೇಶಕ ಡೇವಿಡ್ ಮ್ಯಾರಿನ್ ತಿಳಿಸಿದರು.

ಬಂಧಿತರ ಒಟ್ಟು ಸಂಖ್ಯೆಯನ್ನು ಇಲಾಖೆ ಬಿಡುಗಡೆ ಮಾಡಿಲ್ಲ. ಮೂರು ರಾಜ್ಯಗಳ ವ್ಯಾಪ್ತಿ ಹೊಂದಿರುವ ಅಟ್ಲಾಂಟ ಕಚೇರಿ 200 ಮಂದಿಯನ್ನು ಬಂಧಿಸಿದೆ ಎಂದು ಕಚೇರಿಯ ವಕ್ತಾರರೊಬ್ಬರು ತಿಳಿಸಿದರು.

ಅದೇ ವೇಳೆ, ಲಾಸ್ ಏಂಜಲಿಸ್ ಪ್ರದೇಶದಲ್ಲಿ 161 ಮಂದಿಯನ್ನು ಬಂಧಿಸಲಾಗಿದೆ.ಫೆಡರಲ್ ಅಧಿಕಾರಿಗಳ ಈ ಕಾರ್ಯಾಚರಣೆಯು ವಲಸಿಗರ ಬೆನ್ನುಹುರಿಯಲ್ಲಿ ಚಳಿ ಹುಟ್ಟಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X