Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಟ್ರಂಪ್ ತನ್ನ ಹುದ್ದೆಯ ಬಗ್ಗೆ...

ಟ್ರಂಪ್ ತನ್ನ ಹುದ್ದೆಯ ಬಗ್ಗೆ ಕಲಿಯುತ್ತಿದ್ದಾರೆ :ಚೀನಾ ಮಾಧ್ಯಮ

ವಾರ್ತಾಭಾರತಿವಾರ್ತಾಭಾರತಿ11 Feb 2017 9:03 PM IST
share
ಟ್ರಂಪ್ ತನ್ನ ಹುದ್ದೆಯ ಬಗ್ಗೆ ಕಲಿಯುತ್ತಿದ್ದಾರೆ :ಚೀನಾ ಮಾಧ್ಯಮ

ಬೀಜಿಂಗ್, ಫೆ. 11: ‘ಅವಿಭಜಿತ ಚೀನಾ’ ನೀತಿಯ ಕುರಿತ ತನ್ನ ರೋಷಾವೇಶದ ಮಾತುಗಳಿಂದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಿಂದೆ ಸರಿದಿರುವುದು, ಅವರು ತನ್ನ ನೂತನ ಹುದ್ದೆಯ ಬಗ್ಗೆ ಕಲಿಯುತ್ತಿದ್ದಾರೆ ಎನ್ನುವುದನ್ನು ಸೂಚಿಸುತ್ತದೆ ಎಂದು ಚೀನಾದ ಅಧಿಕೃತ ಮಾಧ್ಯಮ ಶನಿವಾರ ಹೇಳಿದೆ.

ತೈವಾನ್ ಚೀನಾದ ಪ್ರಧಾನ ನೇಲಕ್ಕೆ ಸೇರಿದೆ ಎಂಬುದನ್ನು ಮಾನ್ಯ ಮಾಡುವ ಮೂಲಕ, ಅಮೆರಿಕ ದಶಕಗಳಿಂದ ಅನುಸರಿಸಿಕೊಂಡು ಬರುತ್ತಿರುವ ‘ಅವಿಭಜಿತ ಚೀನಾ’ ನೀತಿಯನ್ನು ಮಾನ್ಯ ಮಾಡಲು ಟ್ರಂಪ್ ಒಪ್ಪಿರುವುದನ್ನು ‘ಗ್ಲೋಬಲ್ ಟೈಮ್ಸ್’ ಶ್ಲಾಘಿಸಿದೆ.

‘‘ಅಧಿಕಾರ ವಹಿಸಿಕೊಂಡ ಬಳಿಕ, ಟ್ರಂಪ್ ಮತ್ತು ಅವರ ತಂಡ ಚೀನಾದ ಕುರಿತ ತಮ್ಮ ನಿಲುವನ್ನು ಬದಲಿಸಿದ್ದಾರೆ. ಚೀನಾದ ಮೂಲಭೂತ ಹಿತಾಸಕ್ತಿಗಳಿಗೆ ಬಹಿರಂಗವಾಗಿ ಸವಾಲು ಹಾಕುವುದನ್ನು ಟ್ರಂಪ್ ನಿಲ್ಲಿಸಿದ್ದಾರೆ. ಬದಲಿಗೆ, ಬೀಜಿಂಗ್‌ಗೆ ಗೌರವ ತೋರಿಸಿದ್ದಾರೆ’’ ಎಂದು ಪತ್ರಿಕೆ ತನ್ನ ಸಂಪಾದಕೀಯದಲ್ಲಿ ಹೇಳಿದೆ.

‘ಅವಿಭಜಿತ ಚೀನಾ’ ನೀತಿಗೆ ಬದ್ಧನಾಗಿರಬೇಕೆಂದು ತನಗೆ ಅನಿಸುತ್ತಿಲ್ಲ ಎಂದು ಅಧಿಕಾರ ವಹಿಸಿಕೊಳ್ಳುವ ಮೊದಲು ಟ್ರಂಪ್ ಹೇಳಿದ್ದರು ಹಾಗೂ ತೈವಾನ್ ಅಧ್ಯಕ್ಷೆಯ ಜೊತೆ ಪೋನ್‌ನಲ್ಲಿ ಮಾತನಾಡುವ ಮೂಲಕ ಶಿಷ್ಟಾಚಾರವನ್ನು ಉಲ್ಲಂಘಿಸಿದ್ದರು.

ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಜೊತೆಗೆ ಇತ್ತೀಚೆಗೆ ನಡೆಸಿದ ಮೊದಲ ಟೆಲಿಫೋನ್ ಸಂಭಾಷಣೆಯಲ್ಲಿ, ‘ಅವಿಭಜಿತ ಚೀನಾ’ ನೀತಿಯನ್ನು ಪಾಲಿಸುವುದಾಗಿ ಟ್ರಂಪ್ ಭರವಸೆ ನೀಡಿರುವುದನ್ನು ಸ್ಮರಿಸಬಹುದಾಗಿದೆ.

ಸಿಡಿದು ಹೋದ ಪ್ರಾಂತ

ತೈವಾನ್ ತನ್ನಿಂದ ಸಿಡಿದು ಹೋದ ಪ್ರಾಂತ ಎಂಬುದಾಗಿ ಚೀನಾ ಪರಿಗಣಿಸುತ್ತದೆ. ಅಗತ್ಯ ಬಿದ್ದರೆ ಬಲ ಪ್ರಯೋಗಿಸಿಯಾದರೂ ಅದನ್ನು ಮತ್ತೆ ತನ್ನ ತೆಕ್ಕೆಗೆ ಸೇರಿಸಿಕೊಳ್ಳಬೇಕಾಗುತ್ತದೆ ಎಂದು ಭಾವಿಸುತ್ತದೆ.

ಸ್ವ-ಆಡಳಿತವಿರುವ ತೈವಾನ್ ದ್ವೀಪದ ನಾಯಕರೊಂದಿಗೆ ವಿದೇಶಿ ಸರಕಾರಗಳು ಅಧಿಕೃತ ಸಂಪರ್ಕ ಹೊಂದುವುದನ್ನು ಚೀನಾ ವಿರೋಧಿಸುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X