Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಣ ಪೂರೈಸುವ ಸಂಸ್ಥೆಯ ನಾಲ್ವರ ಬಂಧನ

ಹಣ ಪೂರೈಸುವ ಸಂಸ್ಥೆಯ ನಾಲ್ವರ ಬಂಧನ

ವಾರ್ತಾಭಾರತಿವಾರ್ತಾಭಾರತಿ11 Feb 2017 11:48 PM IST
share

ಚಂಡಿಗಡ, ಫೆ.11: ರೋಹ್ಟಕ್‌ನ ಗಾಂಧಿಕ್ಯಾಂಪ್ ಪ್ರದೇಶದ ಎಟಿಎಂನಿಂದ 30 ಲಕ್ಷ ಹಣ ಲೂಟಿ ಮಾಡಿ ಬಳಿಕ ದಾಖಲೆಗಳನ್ನು ನಾಶಪಡಿಸುವ ಉದ್ದೇಶದಿಂದ ಎಟಿಎಂ ಕೇಂದ್ರಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿ, ಎಟಿಎಂಗಳಿಗೆ ಹಣ ಪೂರೈಸುವ ಸಂಸ್ಥೆಯ ನಾಲ್ವರನ್ನು ಬಂಧಿಸಲಾಗಿದೆ.

ಫೆ.8ರಂದು ಘಟನೆ ನಡೆದಿತ್ತು. ಅಂದು ಬೆಳಗ್ಗೆ ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿಯೋರ್ವ ಗಾಂಧಿಕ್ಯಾಂಪ್ ಪ್ರದೇಶದ ಎಟಿಎಂ ಕೇಂದ್ರಕ್ಕೆ ಬೆಂಕಿ ಬಿದ್ದಿರುವುದಾಗಿ ತಿಳಿಸಿದ್ದ. ಸ್ಥಳಕ್ಕೆ ಧಾವಿಸಿದ ಪೊಲೀಸರು ಬಳಿಕ ಅಗ್ನಿಶಾಮಕ ದಳಕ್ಕೆ ಫೋನ್ ಮಾಡಿದ್ದರು. ಮುಂಜಾವಿನ ವೇಳೆ ಮೂವರು ಕಳ್ಳರು ಎಟಿಎಂ ಒಳನುಗ್ಗಿ ತನ್ನನ್ನು ಕಟ್ಟಿಹಾಕಿ ಮೊಬೈಲ್ ಕಿತ್ತುಕೊಂಡಿದ್ದರು ಎಂದು ಈ ಸಂದರ್ಭ ಎಟಿಎಂನ ಭದ್ರತಾ ಸಿಬ್ಬಂದಿ ತಿಳಿಸಿದ್ದ. ಈ ಮಾಹಿತಿ ಆಧಾರದಲ್ಲಿ ತನಿಖೆ ತೀವ್ರಗೊಳಿಸಿದ ಪೊಲೀಸರು ಅರುಣ್ ಯಾದವ್, ಬಲ್‌ರಾಜ್, ಸುಖ್‌ವೀಂದರ್ ಮತ್ತು ಜಲ್‌ಬೀರ್ ಎಂಬ ಆರೋಪಿಗಳನ್ನು ಬಂಧಿಸಿದ್ದರು. ಎಟಿಎಂಗಳಿಗೆ ಹಣ ಪೂರೈಸುವ ಸಂಸ್ಥೆಯಲ್ಲಿ ಅರುಣ್ ಮತ್ತು ಬಲ್‌ರಾಜ್ ಹಣ ತುಂಬಿಸುವ ಕಾರ್ಯ ಮಾಡುತ್ತಿದ್ದರೆ, ಸುಖ್‌ವೀಂದರ್ ಮತ್ತು ಜಲ್‌ಬೀರ್ ಗನ್‌ಮ್ಯಾನ್‌ಗಳಾಗಿದ್ದರು. ಎಟಿಎಂಗೆ ತುಂಬಿಸಲು ಒಟ್ಟು 2.5 ಕೋಟಿ ರೂ. ಇವರ ಕೈಯಲ್ಲಿ ನೀಡಲಾಗಿದ್ದು ಈ ಮೊತ್ತದಲ್ಲಿ 30 ಲಕ್ಷ ರೂ. ಲೂಟಿ ಮಾಡಲು ಇವರು ಸಂಚು ಹೂಡಿದ್ದರು. ಅದರಂತೆ ಗಾಂಧಿಕ್ಯಾಂಪ್ ಎಟಿಎಂನಲ್ಲಿ ಕೇವಲ 4 ಲಕ್ಷ ರೂ. ಹಣ ತುಂಬಿಸಿ, ದಾಖಲೆ ಪತ್ರದಲ್ಲಿ 34 ಲಕ್ಷ ರೂ. ತುಂಬಿಸಿದಂತೆ ತೋರಿಸಿದ್ದರು. ಬಳಿಕ ರಾತ್ರಿ ವೇಳೆ ಮತ್ತೆ ಅಲ್ಲಿಗೆ ಆಗಮಿಸಿ, ಕಾವಲುಗಾರನನ್ನು ಕಟ್ಟಿ ಹಾಕಿ ಎಟಿಎಂ ಕೇಂದ್ರಕ್ಕೆ ಬೆಂಕಿ ಹಚ್ಚಿ ಪರಾರಿಯಾಗಿದ್ದರು ಎಂದು ತನಿಖೆಯಲ್ಲಿ ತಿಳಿದು ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಕಳೆದ ಎರಡ್ಮೂರು ವರ್ಷಗಳಿಂದ ಈ ಸಂಸ್ಥೆಯಲ್ಲಿ ದುಡಿಯುತ್ತಿದ್ದು ಇವರ ಬಳಿಯಿಂದ ಒಟ್ಟು 27.5 ಲಕ್ಷ ಹಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X