Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕನ್ನಡದ ಹಿರಿಮೆ ಅರ್ಥ ಮಾಡಿಕೊಂಡವರು ಅನ್ಯ...

ಕನ್ನಡದ ಹಿರಿಮೆ ಅರ್ಥ ಮಾಡಿಕೊಂಡವರು ಅನ್ಯ ಭಾಷಾ ವ್ಯಾಮೋಹಕ್ಕೆ ಬಲಿಯಾಗಲಾರರು: ಪೂರ್ಣಿಮಾ

ವಾರ್ತಾಭಾರತಿವಾರ್ತಾಭಾರತಿ12 Feb 2017 1:10 PM IST
share
ಕನ್ನಡದ ಹಿರಿಮೆ ಅರ್ಥ ಮಾಡಿಕೊಂಡವರು ಅನ್ಯ ಭಾಷಾ ವ್ಯಾಮೋಹಕ್ಕೆ ಬಲಿಯಾಗಲಾರರು:  ಪೂರ್ಣಿಮಾ

ಕಾಸರಗೋಡು, ಫೆ.12: ಕನ್ನಡ ಬರೀ ಭಾಷೆ ಮಾತ್ರವಲ್ಲ, ಅದೊಂದು ಸಂಸ್ಕತಿ. ಕನ್ನಡ ಭಾಷೆ ಮತ್ತು ಸಾಹಿತ್ಯ ಸಂಸ್ಕೃತಿಯ ಹಿರಿಮೆಯನ್ನು ಅರ್ಥಮಾಡಿಕೊಂಡವರು ಅನ್ಯ ಭಾಷಾ ವ್ಯಾಮೋಹಕ್ಕೆ ಬಲಿಯಾಗಲಾರರು ಎಂದು ಸಾಹಿತಿ, ಕಲಾವಿದೆ ಪೂರ್ಣಿಮಾ ಸುರೇಶ್ ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕ ಸರಕಾರದಕನ್ನಡಅಭಿವೃದ್ಧಿ ಪ್ರಾಧಿಕಾರದ ಪ್ರಾಯೋಜಕತ್ವದಲ್ಲಿ, ಕಾಸರಗೋಡಿನ ಅಪೂರ್ವ ಕಲಾವಿದರು ಸಂಸ್ಥೆಯ ಸಹಕಾರದೊಂದಿಗೆ ಕೂಡ್ಲು ಶ್ರೀಗೋಪಾಲಕೃಷ್ಣ ಪ್ರೌಢಶಾಲೆಯಲ್ಲಿ ನಡೆದ ‘ಕನ್ನಡ ಚಿಂತನೆ’ ಕಾರ್ಯಕ್ರಮದಲ್ಲಿ ಅವರು ‘ಕನ್ನಡ ಭಾಷೆಯ ಮಹತ್ವ’ ಎಂಬ ವಿಷಯದಲ್ಲಿ ವಿಶೇಷೋಪನ್ಯಾಸ ನೀಡಿದರು.

‘ಒಂದು ಕಾಲದಲ್ಲಿ ಕನ್ನಡ ನಾಡು, ಭಾಷೆ, ಸಂಸ್ಕೃತಿಗಳ ವ್ಯಾಪ್ತಿ ಇಂದಿನ ಕರ್ನಾಟಕ ರಾಜ್ಯದ ಗಡಿ ರೇಖೆಗಳಿಗೆ ಮಾತ್ರ ಸೀಮಿತವಾಗಿರಲಿಲ್ಲ. ಅದು ಈಗಿನ ಮಹಾರಾಷ್ಟ್ರದ ವರೆಗೂ ವಿಸ್ತರಿಸಿತ್ತು. ಕಾಸರಗೋಡು, ಸೊಲ್ಲಾಪುರ, ಹೊಸೂರು ಮುಂತಾದುವು ಇಂದಿಗೂ ಕನ್ನಡದ ಮಣ್ಣು. ಕನ್ನಡ ಭಾಷೆಯ ಪರಂಪರೆ ಮತ್ತು ಅದರ ಸಾಹಿತ್ಯ ಸಂಪತ್ತು ಭಾರತೀಯ ಸಾಹಿತ್ಯಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡಿದ್ದು, ಇದರಿಂದಲೇ ನಮ್ಮ ಭಾಷೆಗೆ ಶಾಸ್ತ್ರೀಯ ಸ್ಥಾನಮಾನದ ಮನ್ನಣೆಯೂ ಲಭಿಸಿದೆ ಎಂದು ಅವರು ನುಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಿರಿಯ ಕಲಾವಿದ ವಿದ್ವಾನ್ ಬಾಬು ರೈ, ಯಕ್ಷಗಾನ ಕಲೆಯಿಂದ ಕನ್ನಡ ಭಾಷೆ ಸಮೃದ್ಧವಾಗಿದೆ. ಭಾಷೆಯ ಕಟ್ಟುನಿಟ್ಟು ಯಕ್ಷಗಾನ ಕಲೆಗೆ ಶೋಭೆಯನ್ನೂ ತಂದಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೂಡ್ಲು ಶ್ರೀಗೋಪಾಲಕೃಷ್ಣ ಪ್ರೌಢಶಾಲೆಯ ವ್ಯವಸ್ಥಾಪಕ ಕೆ.ಜಿ.ಶ್ಯಾನುಭೋಗ್ ವಹಿಸಿದ್ದರು.

ಹಿರಿಯ ಕನ್ನಡಪರ ಹೋರಾಟಗಾರ, ವಿಶ್ರಾಂತ ಮುಖೋಪಾಧ್ಯಾಯ ಪುರುಷೋತ್ತಮ ಬಿ., ಹಿರಿಯ ಯಕ್ಷಗಾನ ಕಲಾವಿದ ಆನಂದ ಕೂಡ್ಲು ಮತ್ತು ಹಾರ್ಮೋನಿಯಂ ಕಲಾವಿದ ಭಾಸ್ಕರ ಕೂಡ್ಲುರನ್ನು ಈ ಸಂದರ್ಭದಲ್ಲಿ ಶಾಲು ಹೊದಿಸಿ ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾಗಿ ಆರ್.ಜಿ.ಹಳ್ಳಿ ನಾಗರಾಜ್, ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಶ್ರೀಹರಿ ಎನ್., ಯಕ್ಷಗಾನ ಭಾಗವತ ತಲ್ಪನಾಜೆ ವೆಂಕಟ್ರಮಣ ಭಟ್, ಕನ್ನಡ ಸಮನ್ವಯ ಸಮಿತಿ ಯುವ ಬಳಗದ ಕಾರ್ಯದರ್ಶಿ ರಾಜೇಶ್ ಎಸ್.ಪಿ. ಉಪಸ್ಥಿತರಿದ್ದರು.

ಅಪೂರ್ವ ಕಲಾವಿದರು ಸಂಘಟನೆಯ ಅಧ್ಯಕ್ಷ ಉಮೇಶ ಎಂ. ಸಾಲ್ಯಾನ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.
  ಅಧ್ಯಾಪಕ ಕಿರಣ್ ಪ್ರಸಾದ್ ಕೂಡ್ಲು ಕಾರ್ಯಕ್ರಮ ನಿರ್ವಹಿಸಿದರು. ಕನ್ನಡ ಚಿಂತನೆ ಕಾರ್ಯಕ್ರಮ ಸಂಯೋಜಕ ಎಸ್.ಜಗನ್ನಾಥ ಶೆಟ್ಟಿ ಕುಂಬಳೆ ವಂದಿಸಿದರು.

ಚಿತ್ರದುರ್ಗದ ಮಲ್ಲಯ್ಯ ಶ್ರೀಮಠ, ಶಿವು ಮೈಸೂರು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಕೂಡ್ಲು ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ‘ಮುರಾಸುರ ವಧೆ’ ಎಂಬ ಯಕ್ಷಗಾನ ಪ್ರದರ್ಶನವು ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X