Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಾಂತ ರೀತಿಯಲ್ಲಿ ನೀರಸ ಮತದಾನ

ಶಾಂತ ರೀತಿಯಲ್ಲಿ ನೀರಸ ಮತದಾನ

ಗ್ರಾಮ ಪಂಚಾಯತ್ ಚುನಾವಣೆ

ವಾರ್ತಾಭಾರತಿವಾರ್ತಾಭಾರತಿ12 Feb 2017 11:13 PM IST
share
ಶಾಂತ ರೀತಿಯಲ್ಲಿ ನೀರಸ ಮತದಾನ

ಮೂಡಿಗೆರೆ, ಫೆ.12: ಗೋಣಿಬೀಡು, ತರುವೆ ಮತ್ತು ಬಣಕಲ್ ಗ್ರಾಪಂ ಕ್ಷೇತ್ರಗಳ ಮತದಾನವು ಶಾಂತ ರೀತಿಯಿಂದ ನಿರಸವಾಗಿ ನಡೆದಿದ್ದು,ಯಾವುದೇ ಅಹಿತರ ಘಟನೆ ನಡೆಯದೆ ಪ್ರಶಾಂತತೆಯಿಂದ ಸಾರ್ವಜನಿಕರು ಮತದಾನ ಮಾಡಿದರು.


ತರುವೆ ಗ್ರಾಪಂ ವ್ಯಾಪ್ತಿಯ ಕ್ಷೇತ್ರದಲ್ಲಿ ಕೊಟ್ಟಿಗೆಹಾರದ ಅತ್ತಿಗೆರೆ ಸ.ಹಿ.ಪ್ರಾ.ಶಾಲೆಯಲ್ಲಿ ಬೆಳಗ್ಗೆ 7ಗಂಟೆಯಿಂದ ಮತದಾನ ಆರಂಭವಾಯಿತು.ಮತದಾರರು ಯಾವುದೇ ಸಮಸ್ಯೆ ಎದುರಾಗದೇ ಶಾಂತ ರೀತಿಯಿಂದ ಮತದಾನ ಮಾಡಿ ತಮ್ಮ ಪಂಚಾಯತ್ ಚುಕ್ಕಾಣಿಗಾಗಿ ಅಭಿವೃದ್ಧಿಯ ಹಿನ್ನಲೆಯಲ್ಲಿ ಸ್ವತಂತ್ರವಾಗಿ ಮತದಾನ ಮಾಡಿದರು. ತರುವೆ ಕ್ಷೇತ್ರದಲ್ಲಿ ಶೇ.79.29ರಷ್ಟು ಮತದಾನವಾಗಿದೆ.
 ಬಣಕಲ್,ಕೂಡಹಳ್ಳಿ, ಹೆಗ್ಗುಡ್ಲು ಕ್ಷೇತ್ರದಲ್ಲೂ ಕೂಡ ಗ್ರಾಪಂ ಚುನಾವಣೆ ಸರಕಾರಿ ಶಾಲೆಯಲ್ಲಿ ಶಾಂತ ರೀತಿಯಿಂದ ನಡೆಯಿತು.ಪೊಲೀಸ್ ಸಿಬ್ಬಂದಿ ಹಾಗೂ ಚುನಾವಣಾ ಅಧಿಕಾರಿಗಳು ಮತದಾನ ಯಶಸ್ವಿಯಾಗಲು ಸಹಕರಿಸಿದರು. ಬಣಕಲ್ ಗ್ರಾಮಸ್ಥರು ಕನಿಷ್ಠ ಶೇ.67.97ರಷ್ಟು ಮತದಾನ ಮಾಡಿದರು.ಸಂಜೆ 5 ಗಂಟೆಗೆ ಎಲ್ಲಾ ಕ್ಷೇತ್ರಗಳಲ್ಲೂ ಮತದಾನವು ಸಮಾಪ್ತಿ ಮಾಡಲಾಯಿತು.

ತರುವೆ ಗ್ರಾಪಂ ವ್ಯಾಪ್ತಿಯಲ್ಲಿ ಚಿಕ್ಕಪುಟ್ಟ ಮಾತಿನ ಚಕಮಕಿಯಿಂದ ಸ್ವಲ್ಪಹೊತ್ತು ಬಿಗುವಿನ ವಾತಾವರಣ ಸೃಷ್ಟಿಯಾಯಿತು. ಬಾಳೂರು ಮೂಡಿಗೆರೆ ಮತ್ತು ಬಣಕಲ್ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ಶಾಂತಗೊಳಿಸಿದರು. ತರುವೆ ಚುನಾವಣಾ ಕಾರ್ಯದಲ್ಲಿ ಚುನಾವಣಾಧಿಕಾರಿಗಳಾದ ತೇಜೋಮೂರ್ತಿ,ಆಲೇಗೌಡ, ಪುಟ್ಟಪ್ಪ, ಶಿಕ್ಷಕ ಮಧುಸೂದನ್, ಅಣ್ಣಪ್ಪ ಮತ್ತಿತರರಿದ್ದರು.

 ಜಿ.ಹೊಸಳ್ಳಿ, ಹಿರೇಶಿಗರದಲ್ಲಿ ಶೇ.74.56ರಷ್ಟು ಮತದಾನಗೋಣಿಬೀಡು ಗ್ರಾಪಂ ವ್ಯಾಪ್ತಿಯ ಜಿ.ಹೊಸಳ್ಳಿ ಹಾಗೂ ಹಿರೇಶಿಗರದ ಒಟ್ಟು5 ಸ್ಥಾನಗಳಿಗೆ ಚುನಾವಣೆ ಮತದಾನ ಪ್ರಕ್ರಿಯೆ ರವಿವಾರ ಎರಡು ಮತಗಟ್ಟೆಗಳಲ್ಲಿ ನಡೆದಿದ್ದು ಶೇ.74.56 ಮತದಾನ ದಾಖಲಾಗಿದೆ. ತಲಾ ನಾಲ್ಕು ಸಿಬ್ಬಂದಿ ಮತಗಟ್ಟೆಯಲ್ಲಿ ಕರ್ತವ್ಯ ನಿರ್ವಹಿಸಿದರು. ಚುನಾವಣೆ ಘೋಷಣೆಯಾಗಿದ್ದ ಐದು ಸ್ಥಾನಗಳಿಗೆ ಒಟ್ಟು 11 ಅಭ್ಯರ್ಥಿಗಳು ಕಣದಲ್ಲಿದ್ದು ಯಾವ ಅಭ್ಯರ್ಥಿಗೆ ಅದೃಷ್ಟ ಒಲಿದಿದೆ ಎಂಬುದು ಮತಪೆಟ್ಟಿಗೆಯಲ್ಲಿ ಅಡಕವಾಗಿದೆ. ಫೆ.15ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.

ಪ್ರತ್ಯೇಕ ಗ್ರಾಪಂ ಸ್ಥಾಪನೆಗೆ ಒತ್ತಾಯಿಸಿ ಕಳೆದ 2 ವರ್ಷಗಳಿಂದ ಗ್ರಾಪಂ ಚುನಾವಣೆ ಬಹಿಷ್ಕರಿಸಿ ಪ್ರತಿಭಟಿಸಿದ್ದ ಗೋಣಿಬೀಡು ಗ್ರಾಪಂ ವ್ಯಾಪ್ತಿಯ ಜಿ.ಹೊಸಳ್ಳಿ ಹಾಗೂ ಹಿರೇಶಿಗರ ಕ್ಷೇತ್ರಗಳ ಮತದಾರರು ಈ ಬಾರಿ ಚುನಾವಣೆಗೆ ಸಮ್ಮತಿ ಸೂಚಿಸಿ ಮತದಾನ ಹೆಚ್ಚಿನ ಸಂಖ್ಯೆಯಲ್ಲಿ ಮಾಡಿದ್ದಾರೆ. ತಾಲೂಕಿನ ಬಣಕಲ್ ಶೇ.67.97 ಹಾಗೂ ತರುವೆ 79.29ರಷ್ಟು ಮತದಾನ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X