Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯೋಧರಿಗೆ ಖೋಟಾ ನೋಟು ಪತ್ತೆ ತರಬೇತಿ

ಯೋಧರಿಗೆ ಖೋಟಾ ನೋಟು ಪತ್ತೆ ತರಬೇತಿ

ವಾರ್ತಾಭಾರತಿವಾರ್ತಾಭಾರತಿ12 Feb 2017 11:43 PM IST
share

ಕೋಲ್ಕತಾ, ಫೆ.12: ಭಾರತ-ಬಾಂಗ್ಲಾದೇಶ ಗಡಿಯ ಮೂಲಕ ಕಳ್ಳಸಾಗಣೆ ಯಾಗುತ್ತಿರುವ ಖೋಟಾ ನೋಟುಗಳನ್ನು ಗುರುತಿಸಲು ತನ್ನ ಯೋಧರಿಗೆ ತರಬೇತಿ ನೀಡುವ ಬಗ್ಗೆ ಗಡಿ ರಕ್ಷಣಾ ಪಡೆ(ಬಿಎಸ್‌ಎಫ್)ಯು ಆರ್‌ಬಿಐ ಜೊತೆಗೆ ಮಾತುಕತೆ ನಡೆಸುತ್ತಿದೆ.

ಕಳೆದ ಒಂದು ತಿಂಗಳಿನಿಂದ ಗಡಿಯಲ್ಲಿ ಭಾರೀಪ್ರಮಾಣದಲ್ಲಿ 2,000 ರೂ.ಗಳ ಖೋಟಾನೋಟುಗಳನ್ನು ವಶಪಡಿಸಿಕೊಳ್ಳಲಾಗುತ್ತಿದ್ದು, ಇದು ಬಿಎಸ್‌ಎಫ್ ಮತ್ತು ಗುಪ್ತಚರ ಸಂಸ್ಥೆಗಳನ್ನು ನಿದ್ದೆಗೆಡಿಸಿದೆ.
ಭದ್ರತಾ ಏಜನ್ಸಿಗಳು ವಶಪಡಿಸಿಕೊಳ್ಳುತ್ತಿರುವ ಖೋಟಾ ನೋಟುಗಳ ಪ್ರಮಾಣವು ಕಳವಳವನ್ನು ಹುಟ್ಟಿಸಿದೆ. ನೋಟಿನಲ್ಲಿಯ ಭದ್ರತಾ ಲಕ್ಷಣಗಳನ್ನು ಅತ್ಯಂತ ಕೌಶಲಪೂರ್ವಕವಾಗಿ ನಕಲು ಮಾಡಲಾಗಿದೆ. ಹೊಸ 2,000 ರೂ.ನೋಟಿನಲ್ಲಿರುವ ಅರ್ಧದಷ್ಟು ಭದ್ರತಾ ವೈಶಿಷ್ಟಗಳು ಖೋಟಾ ನೋಟುಗಳಲ್ಲಿವೆ. ಮೇಲ್ನೋಟಕ್ಕೆ ಖೋಟಾ ನೋಟು ಎನ್ನುವುದೂ ಗೊತ್ತಾಗುತ್ತಿಲ್ಲ. ಹೀಗಾಗಿ ಖೋಟಾ ನೋಟುಗಳ ಪತ್ತೆಗಾಗಿ ನಮ್ಮ ಯೋಧರು ಮತ್ತು ಅಧಿಕಾರಿಗಳಿಗೆ ತರಬೇತಿ ಕೊಡಿಸುವ ಬಗ್ಗೆ ಆರ್‌ಬಿಐ ಜೊತೆ ಮಾತುಕತೆ ನಡೆಯುತ್ತಿದೆ ಎಂದು ಹಿರಿಯ ಬಿಎಸ್‌ಎಫ್ ಅಧಿಕಾರಿಯೋರ್ವರು ತಿಳಿಸಿದರು.
ತಂತ್ರಜ್ಞಾನದ ಮೂಲಕ ಅಥವಾ ಭೌತಿಕವಾಗಿ ಖೋಟಾ ಮತ್ತು ಅಸಲಿ ನೋಟುಗಳನ್ನು ಪತ್ತೆ ಹಚ್ಚುವ ಸಾಮರ್ಥ್ಯ ನಮ್ಮ ಯೋಧರಲ್ಲಿರಬೇಕು ಎಂದು ನಾವು ಬಯಸಿದ್ದೇವೆ. 2,000 ರೂ.ನೋಟಿನಲ್ಲಿ 17 ಭದ್ರತಾ ವೈಶಿಷ್ಟಗಳಿವೆ. ಹೆಚ್ಚಿನ ಸಂಖ್ಯೆಯ ಭದ್ರತಾ ವೈಶಿಷ್ಟಗಳನ್ನು ಯಥಾವತ್ತಾಗಿ ನಕಲು ಮಾಡಲಾಗುತ್ತಿದ್ದು,ಇದನ್ನು ಪತ್ತೆ ಹಚ್ಚಲು ನಮ್ಮ ಯೋಧರು ನುರಿತಿರಬೇಕು ಎಂದರು.
ಭಾರತ-ಬಾಂಗ್ಲಾದೇಶ ಗಡಿಯಲ್ಲಿ, ವಿಶೇಷವಾಗಿ ಮಾಲ್ಡಾ-ಮುರ್ಷಿದಾಬಾದ್ ಜಿಲ್ಲೆಯೊಳಗೆ ನುಸುಳಿ ಬರುತ್ತಿದ್ದ ಖೋಟಾ ನೋಟುಗಳ ಹುಲುಸಾದ ದಂಧೆಗೆ ನ.8ರ ನೋಟು ಅಮಾನ್ಯದ ಬಳಿಕ ತಡೆ ಬಿದ್ದಿದೆ ಎಂದೇ ಭಾವಿಸಲಾಗಿತ್ತು. ಆದರೆ ಶೇ.50-60ರಷ್ಟು ಭದ್ರತಾ ವೈಶಿಷ್ಟಗಳನ್ನು ಯಥಾವತ್ತಾಗಿ ನಕಲು ಮಾಡಿರುವ 2,000 ರೂ.ಗಳ ಖೋಟಾನೋಟುಗಳು ಪತ್ತೆಯಾದ ಬಳಿಕ ಅಪಾಯದ ಗಂಟೆ ಮತ್ತೆ ಬಾರಿಸಿದೆ.
ಡಿಸೆಂಬರ್,2016-ಜನವರಿ,2017 ಅವಧಿಯಲ್ಲಿ ಮಾಲ್ಡಾ ಜಿಲ್ಲೆಗೆ ಸಮೀಪದ ಗಡಿಗಳಲ್ಲಿ 2,000 ರೂ.ಗಳ ಖೋಟಾನೋಟುಗಳನ್ನು ವಶಪಡಿಸಿಕೊಂಡ ಕೆಲವು ಪ್ರಕರಣಗಳು ವರದಿಯಾಗಿವೆ.
ಫೆ.8ರಂದು ಮುರ್ಷಿದಾಬಾದ್ ಜಿಲ್ಲೆಯಲ್ಲಿ ಪ.ಬಂಗಾಲ ಪೊಲೀಸರು 2,000 ರೂ.ಗಳ 40 ಖೋಟಾ ನೋಟುಗಳನ್ನು ವಶಪಡಿಸಿಕೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X