Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕ್ಯಾಲಿಫೋರ್ನಿಯಾದ ಒರೊವಿಲ್ಲೆ ಜಲಾಶಯ...

ಕ್ಯಾಲಿಫೋರ್ನಿಯಾದ ಒರೊವಿಲ್ಲೆ ಜಲಾಶಯ ಕುಸಿಯುವ ಭೀತಿ; ಲಕ್ಷಾಂತರ ಜನರ ಸ್ಥಳಾಂತರ

ವಾರ್ತಾಭಾರತಿವಾರ್ತಾಭಾರತಿ13 Feb 2017 12:48 PM IST
share
ಕ್ಯಾಲಿಫೋರ್ನಿಯಾದ ಒರೊವಿಲ್ಲೆ ಜಲಾಶಯ ಕುಸಿಯುವ ಭೀತಿ; ಲಕ್ಷಾಂತರ ಜನರ ಸ್ಥಳಾಂತರ

ಕ್ಯಾಲಿಫೋರ್ನಿಯಾ, ಫೆ.13: ಅಮೆರಿಕಾದ ಕ್ಯಾಲಿಫೋರ್ನಿಯಾ ನಗರದಲ್ಲಿರುವ ದೇಶದ ಅತ್ಯಂತ ಎತ್ತರದ ಒರೊವಿಲ್ಲೆ ಜಲಾಶಯ ಕುಸಿಯುವ ಅಪಾಯವೆದುರಿಸುತ್ತಿರುವುದರಿಂದ ಜಲಾಶಯದ ಸಮೀಪದ ತಗ್ಗು ಪ್ರದೇಶಗಳಲ್ಲಿ ವಾಸವಾಗಿರುವ ಕನಿಷ್ಠ 1.3 ಲಕ್ಷ ಜನರನ್ನು ಸ್ಥಳದಿಂದ ಸ್ಥಳಾಂತರಿಸಲಾಗುತ್ತಿದೆ. ಜಲಾಶಯದ ತುರ್ತುದ್ವಾರವೊಂದರಲ್ಲಿ ಕಂಡು ಬಂದಿರುವ ತೋತೊಂದರಿಂದ ನೀರು ಹೊರಬರಲಾಂಭಿಸಿದ್ದು ಕ್ಯಾಲಿಫೋರ್ನಿಯಾದ ಜಲಸಂಪನ್ಮೂಲ ಇಲಾಖೆ ಮಧ್ಯರಾತ್ರಿಗೆ ತನ್ನ ಫೇಸ್ ಬುಕ್ ಪುಟದಲ್ಲಿ ಪೋಸ್ಟ್ ಒಂದನ್ನು ಮಾಡಿ ಇನ್ನೊಂದು ಗಂಟೆಯಲ್ಲಿ ದ್ವಾರ ಕುಸಿಯುವ ಸಾಧ್ಯತೆಯಿದೆಯೆಂದು ಹೇಳಿದೆ.

ತರುವಾಯ ಹೆಲಿಕಾಪ್ಟರ್ ಮುಖಾಂತರ ಬಂಡೆಕಲ್ಲುಗಳನ್ನು ಕೆಳಕ್ಕೆ ಬೀಳಿಸಿ ದ್ವಾರದಲ್ಲಿ ಕಂಡು ಬಂದಿರುವ ತೂತನ್ನು ಮುಚ್ಚಲು ಪ್ರಯತ್ನಿಸಲಾಗುವುದು ಎಂದು ಇಲಾಖೆ ಹೇಳಿದೆ. ಅಧಿಕಾರಿಗಳು ಜಲಾಶಯದಲ್ಲಿರುವ ನೀರನ್ನು ಕಡಿಮೆಗೊಳಿಸುವ ಸಲುವಾಗಿ ನೀರನ್ನು ಹೊರಕ್ಕೆ ಬಿಡುತ್ತಿದ್ದಾರೆ.

ಒರೊವಿಲ್ಲೆ, ಗ್ರಿಡ್ಲೆ, ಲೈವ್ ಓಕ್, ಮೇರಿಸ್‌ವಿಲ್ಲೆ, ವೀಟ್ ಲ್ಯಾಂಡ್, ಯುಬಾ ಸಿಟಿ, ಪ್ಲುಮಾಸ್ ಲೇಕ್ ಹಾಗೂ ಒಲಿವ್ ಹಸ್ಟ್ ಇಲ್ಲಿ ತೆರವು ಕಾರ್ಯಾಚರಣೆ ನಡೆಯುತ್ತಿದೆ.

ಕಳೆದ ಶುಕ್ರವಾರ ಈ ಜಲಾಶಯದ ನೀರಿನ ಮಟ್ಟ 273 ಮೀಟರಿನಷ್ಟಿತ್ತು. ಇದು ಜಲಾಶಯದ ಒಟ್ಟು ಎತ್ತರಕ್ಕಿಂತ ಕೇವಲ ಎರಡು ಮೀಟರ್ ಕಡಿಮೆ ಇದೆಯೆಂದು ಜಲಸಂಪನ್ಮೂಲ ಇಲಾಖೆ ಹೇಳಿದೆ.

ಒರೋವಿಲ್ಲೆಗಿಂತ ಸುಮಾರು 20 ಮೈಲು ದೂರದಲ್ಲಿರುವ ಚಿಕೊದಲ್ಲಿ ಸ್ಥಳಾಂತರಿಸಲ್ಪಟ್ಟ ಜನರಿಗೆ ಪುನರ್ವಸತಿ ಕಲ್ಪಿಸಲಾಗಿದೆ. ಸ್ಥಳಕ್ಕೆ ಹೋಗುವ ದಾರಿಗಳೆಲ್ಲವೂ ವಾಹನಗಳಿಂದ ಕಿಕ್ಕಿರಿದಿದ್ದು ಹೆಚ್ಚಿನ ಜನರು ತಮ್ಮ ವಾಹನಗಳಲ್ಲಿಯೇ ಅಪಾಯವಿರುವ ಸ್ಥಳಗಳಿಂದ ಹೊರಟು ಬಂದಿದ್ದಾರೆ.

ನೀರು ಪೂರೈಕೆ, ಜಲವಿದ್ಯುತ್ ಉತ್ಪಾದನೆ ಹಾಗೂ ನೆರೆ ನಿಯಂತ್ರಣದಲ್ಲಿ ಈ ಜಲಾಶಯ ಮಹತ್ತರ ಪಾತ್ರ ವಹಿಸುತ್ತಿದ್ದು ಇತ್ತೀಚೆಗೆ ಬಿದ್ದ ಭಾರೀ ಮಳೆಯಿಂದ ಜಲಾಶಯದ ನೀರಿನ ಮಟ್ಟ ಅದರ ಸಾಮರ್ಥ್ಯಕ್ಕಿಂತ ಏರಿದ್ದರಿಂದ ತುರ್ತುದ್ವಾರವನ್ನು ತೆರೆಯಲಾಗಿತ್ತು.

1962 ಹಾಗೂ 1968ರ ನಡುವೆ ನಿರ್ಮಿಸಲ್ಪಟ್ಟ ಈ ಜಲಾಶಯ ಖ್ಯಾತ ಹೂವರ್ ಜಲಾಶಯಕ್ಕಿಂತಲೂ 12 ಮೀಟರ್ ಎತ್ತರವಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X