Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ ಭರ್ಜರಿ...

ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಅಶ್ವಿನ್, ಜಡೇಜ ಸ್ಪಿನ್ ದಾಳಿಗೆ ಬೆದರಿದ ಬಾಂಗ್ಲಾಟೈಗರ್

ವಾರ್ತಾಭಾರತಿವಾರ್ತಾಭಾರತಿ13 Feb 2017 2:58 PM IST
share
ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಹೈದರಾಬಾದ್, ಫೆ.13: ಅವಳಿ ಸ್ಪಿನ್ನರ್‌ಗಳಾದ ಆರ್.ಅಶ್ವಿನ್ ಹಾಗೂ ರವೀಂದ್ರ ಜಡೇಜ ದಾಳಿಗೆ ನಿರುತ್ತರವಾದ ಬಾಂಗ್ಲಾದೇಶ ತಂಡ ಭಾರತ ವಿರುದ್ಧ ಇಲ್ಲಿ ನಡೆದ ಏಕೈಕ ಟೆಸ್ಟ್ ಪಂದ್ಯದಲ್ಲಿ 208 ರನ್‌ಗಳ ಅಂತರದಿಂದ ಸೋತಿದೆ.

ಈ ಗೆಲುವಿನ ಮೂಲಕ ಭಾರತ ಏಕೈಕ ಪಂದ್ಯವನ್ನು ಗೆದ್ದುಕೊಂಡಿದ್ದು, ಅಜೇಯ ಗೆಲುವಿನ ಓಟವನ್ನು 20ಕ್ಕೆ ವಿಸ್ತರಿಸಿದೆ. ಭಾರತ 2015ರಲ್ಲಿ ಶ್ರೀಲಂಕಾ ವಿರುದ್ಧ ಸರಣಿ ಜಯ ಸಾಧಿಸಿದ ಬಳಿಕ ಸತತ 6ನೆ ಟೆಸ್ಟ್ ಸರಣಿ ಗೆದ್ದುಕೊಂಡು ಶ್ರೇಷ್ಠ ಸಾಧನೆ ಮಾಡಿದೆ. ಈ ಹಿಂದೆ 2008 ಹಾಗೂ 2010ರ ನಡುವೆ ಸತತ 5 ಟೆಸ್ಟ್ ಸರಣಿ ಗಳಲ್ಲಿ ಗೆದ್ದುಕೊಂಡ ಸಾಧನೆ ಮಾಡಿತ್ತು.

ಐದನೆ ಹಾಗೂ ಅಂತಿಮ ದಿನವಾದ ಸೋಮವಾರ 3 ವಿಕೆಟ್ ನಷ್ಟಕ್ಕೆ 103 ರನ್‌ನಿಂದ ಎರಡನೆ ಇನಿಂಗ್ಸ್ ಮುಂದುವರಿಸಿದ ಬಾಂಗ್ಲಾದೇಶ 250 ರನ್‌ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು.

ಬಾಂಗ್ಲಾದ ಪರ ಮಹಮುದುಲ್ಲಾ(64) ಅಗ್ರ ಸ್ಕೋರರ್ ಎನಿಸಿಕೊಂಡರು. ಅಶ್ವಿನ್(4-73), ಜಡೇಜ(4-78) 8 ವಿಕೆಟ್‌ಗಳನ್ನು ಉರಳಿಸಿದರು. ವೇಗದ ಬೌಲರ್ ಇಶಾಂತ್ ಶರ್ಮ(2-40) ಉಳಿದೆರಡು ವಿಕೆಟ್ ಪಡೆದರು.

ನಾಲ್ಕನೆ ದಿನವಾದ ರವಿವಾರ 2ನೆ ಇನಿಂಗ್ಸ್‌ನಲ್ಲಿ 4 ವಿಕೆಟ್‌ಗೆ 159 ರನ್‌ಗೆ ಇನಿಂಗ್ಸ್ ಡಿಕ್ಲೇರ್ ಮಾಡಿದ್ದ ಭಾರತ ತಂಡ ಬಾಂಗ್ಲಾದ ಗೆಲುವಿಗೆ 459 ರನ್ ಗುರಿ ನೀಡಿತ್ತು.

 ಎರಡೂ ಇನಿಂಗ್ಸ್‌ನಲ್ಲಿ 100ಕ್ಕೂ ಅಧಿಕ ಓವರ್‌ಗಳನ್ನು ಎದುರಿಸಿದ ಬಾಂಗ್ಲಾ ಉತ್ತಮ ಹೋರಾಟ ನೀಡಿದರೂ ಗೆಲುವು ದಕ್ಕಲಿಲ್ಲ. ಮೊದಲ ಇನಿಂಗ್ಸ್‌ನಲ್ಲಿ ದ್ವಿಶತಕ ಬಾರಿಸಿದ ನಾಯಕ ವಿರಾಟ್ ಕೊಹ್ಲಿ(204) ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ಅಂಕಿ-ಅಂಶ

 19: ಭಾರತ ಟೆಸ್ಟ್‌ನಲ್ಲಿ ಸತತ 19 ಪಂದ್ಯಗಳಲ್ಲಿ ಅಜೇಯ ಗೆಲುವಿನ ದಾಖಲೆ ಕಾಯ್ದುಕೊಂಡಿದೆ. ಟೆಸ್ಟ್ ಇತಿಹಾಸದಲ್ಲಿ ಇದು ತಂಡವೊಂದರ ಐದನೆ ಶ್ರೇಷ್ಠ ಸಾಧನೆ. ವೆಸ್ಟ್‌ಇಂಡೀಸ್ 1982-84ರಲ್ಲಿ 27 ಪಂದ್ಯಗಳಲ್ಲಿ ಅಜೇಯ ಗೆಲುವಿನ ದಾಖಲೆ ಕಾಯ್ದುಕೊಂಡಿತ್ತು.

 01: ವಿರಾಟ್ ಕೊಹ್ಲಿ ಸತತ 19 ಪಂದ್ಯಗಳಲ್ಲಿ ಸೋಲನ್ನೇ ಕಾಣದ ಭಾರತದ ಮೊದಲ ನಾಯಕ. ಸುನಿಲ್ ಗವಾಸ್ಕರ್ ಸತತ 18 ಹಾಗೂ ಕಪಿಲ್‌ದೇವ್ 1985-87ರಲ್ಲಿ ಸತತ 17 ಟೆಸ್ಟ್ ಪಂದ್ಯಗಳಲ್ಲಿ ನಾಯಕರಾಗಿ ಸೋಲನ್ನು ಕಂಡಿರಲಿಲ್ಲ.

06: ಭಾರತ ಸತತ ಆರನೆ ಟೆಸ್ಟ್ ಸರಣಿಯನ್ನು ಗೆದ್ದುಕೊಂಡಿದೆ. 2008-10ರಲ್ಲಿ ಎಂಎಸ್ ಧೋನಿ ನಾಯಕತ್ವದಲ್ಲಿ ಐದು ಸರಣಿಯನ್ನು ಜಯಿಸಿದ ಸಾಧನೆ ಮಾಡಿತ್ತು. 2015ರ ಆಗಸ್ಟ್‌ನ ಬಳಿಕ ಭಾರತ ವಿದೇಶದಲ್ಲಿ ಶ್ರೀಲಂಕಾ ಹಾಗೂ ವೆಸ್ಟ್‌ಇಂಡೀಸ್‌ನ ವಿರುದ್ಧ, ಸ್ವದೇಶದಲ್ಲಿ ದಕ್ಷಿಣ ಆಫ್ರಿಕ, ನ್ಯೂಝಿಲೆಂಡ್, ಇಂಗ್ಲೆಂಡ್ ಹಾಗೂ ಬಾಂಗ್ಲಾದೇಶದ ವಿರುದ್ಧ ಸ್ವದೇಶದಲ್ಲಿ ಸರಣಿ ಜಯಿಸಿದೆ. ಮುಂಬರುವ ಸರಣಿಯಲ್ಲಿ ಆಸ್ಟ್ರೇಲಿಯವನ್ನು ಎದುರಿಸಲಿರುವ ಭಾರತಕ್ಕೆ ಅಜೇಯ ದಾಖಲೆ ಮುಂದುವರಿಸುವ ಅವಕಾಶವಿದೆ.

15: ಕೊಹ್ಲಿ ನಾಯಕನಾಗಿ ಆಡಿರುವ 23 ಪಂದ್ಯಗಳ ಪೈಕಿ 15ರಲ್ಲಿ ಜಯ ಸಾಧಿಸಿದ್ದಾರೆ. ಈ ಮೂಲಕ ರಿಕಿ ಪಾಂಟಿಂಗ್ ಹಾಗೂ ಮೈಕಲ್ ವಾನ್(ತಲಾ 15) ಸಾಧನೆಯ ಕ್ಲಬ್‌ಗೆ ಸೇರ್ಪಡೆಯಾದರು.

50: ಆರ್.ಅಶ್ವಿನ್ ಟೆಸ್ಟ್‌ನ ನಾಲ್ಕನೆ ಇನಿಂಗ್ಸ್‌ನಲ್ಲಿ 50 ವಿಕೆಟ್ ಪಡೆದ ಸಾಧನೆ ಮಾಡಿದರು. ಈ ಸಾಧನೆ ಮಾಡಿದ ಭಾರತದ 3ನೆ ಬೌಲರ್ ಅಶ್ವಿನ್. ಈ ಹಿಂದೆ ಬಿಷನ್ ಸಿಂಗ್ ಬೇಡಿ ಹಾಗೂ ಅನಿಲ್ ಕುಂಬ್ಳೆ ಈ ಸಾಧನೆ ಮಾಡಿದ್ದರು.

228.2: ಬಾಂಗ್ಲಾದೇಶ ತಂಡ ಭಾರತ ವಿರುದ್ಧ ಟೆಸ್ಟ್‌ನಲ್ಲಿ ಗರಿಷ್ಠ ಓವರ್(228.2) ಬ್ಯಾಟಿಂಗ್ ನಡೆಸಿತು. 2000ರಲ್ಲಿ ಭಾರತ ವಿರುದ್ಧ ಢಾಕಾದಲ್ಲಿ ಆಡಿದ್ದ ತನ್ನ ಮೊತ್ತ ಮೊದಲ ಟೆಸ್ಟ್ ಪಂದ್ಯದಲ್ಲಿ 200ಕ್ಕೂ ಅಧಿಕ ಓವರ್ ಬ್ಯಾಟಿಂಗ್ ಮಾಡಿತ್ತು.

ಸ್ಕೋರ್ ವಿವರ

ಭಾರತ ಪ್ರಥಮ ಇನಿಂಗ್ಸ್: 687/6 ಡಿಕ್ಲೇರ್

ಬಾಂಗ್ಲಾದೇಶ ಪ್ರಥಮ ಇನಿಂಗ್ಸ್: 388

ಭಾರತ ದ್ವಿತೀಯ ಇನಿಂಗ್ಸ್: 159/4 ಡಿಕ್ಲೇರ್

ಬಾಂಗ್ಲಾದೇಶ ದ್ವಿತೀಯ ಇನಿಂಗ್ಸ್: 100.3 ಓವರ್‌ಗಳಲ್ಲಿ 250

ತಮೀಮ್ ಇಕ್ಬಾಲ್ ಸಿ ಕೊಹ್ಲಿ ಬಿ ಅಶ್ವಿನ್ 03

ಸರ್ಕಾರ್ ಸಿ ರಹಾನೆ ಬಿ ಜಡೇಜ 42

ಮೊಮಿನುಲ್ ಹಕ್ ಸಿ ರಹಾನೆ ಬಿ ಅಶ್ವಿನ್ 27

ಮಹಮ್ಮುದುಲ್ಲಾ ಸಿ ಕುಮಾರ್ ಬಿ ಶರ್ಮ 64

ಶಾಕಿಬ್ ಅಲ್ ಹಸನ್ ಸಿ ಪೂಜಾರ ಬಿ ಜಡೇಜ 22

ಮುಶ್ಫಿಕುರ್ರಹೀಂ ಸಿ ಜಡೇಜ ಬಿ ಅಶ್ವಿನ್ 23

ಶಬ್ಬೀರ್ರಹ್ಮಾನ್ ಎಲ್ಬಿಡಬ್ಲು ಶರ್ಮ 22

ಮೆಹೆದಿ ಹಸನ್ ಸಿ ಸಹಾ ಬಿ ಜಡೇಜ 23

ಕಮ್ರುಲ್ ಇಸ್ಲಾಂ ಅಜೇಯ 03

ತೈಜುಲ್ ಇಸ್ಲಾಂ ಸಿ ರಾಹುಲ್ ಬಿ ಜಡೇಜ 06

ತಸ್ಕನ್ ಅಹ್ಮದ್ ಎಲ್ಬಿಡಬ್ಲು ಅಶ್ವಿನ್ 01

ಇತರ 14

ವಿಕೆಟ್ ಪತನ: 1-11, 2-71, 3-75, 4-106, 5-162, 6-213, 7-225, 8-242, 9-249, 10-250.

ಬೌಲಿಂಗ್ ವಿವರ:

ಭುವನೇಶ್ವರ ಕುಮಾರ್ 8-4-15-0

ಆರ್.ಅಶ್ವಿನ್ 30.3-10-73-4

ಇಶಾಂತ್ ಶರ್ಮ 13-3-40-2

ಉಮೇಶ್ ಯಾದವ್ 12-2-33-0

ಜಡೇಜ 37-15-78-4

ಪಂದ್ಯಶ್ರೇಷ್ಠ: ವಿರಾಟ್ ಕೊಹ್ಲಿ .

share
ವಾರ್ತಾಭಾರತಿ
ವಾರ್ತಾಭಾರತಿ
Next Story
X