Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 150 ರೂ.ಗಾಗಿ ಗೆಳೆಯರಿಂದ 14 ವರ್ಷದ...

150 ರೂ.ಗಾಗಿ ಗೆಳೆಯರಿಂದ 14 ವರ್ಷದ ಬಾಲಕನ ಬಲಿ !

ವಾರ್ತಾಭಾರತಿವಾರ್ತಾಭಾರತಿ13 Feb 2017 3:15 PM IST
share
150 ರೂ.ಗಾಗಿ ಗೆಳೆಯರಿಂದ 14 ವರ್ಷದ ಬಾಲಕನ ಬಲಿ !

ಕೃಷ್ಣನಗರ್ ,ಫೆ.13 : 150 ರೂಪಾಯಿಗಾಗಿ ಹದಿನಾಲ್ಕುವರ್ಷದ ಬಾಲಕನನ್ನುಆತನ ಗೆಳೆಯರು ಕೊಂದಿದ್ದಾರೆ. ಪಶ್ಚಿಮ ಬಂಗಾಳದ ಕೃಷ್ಣನಗರದಲ್ಲಿ ಘಟನೆ ನಡೆದಿದೆ. ದೇಬಾಶಿಸ್ ಭೌಮಿಕ್ ಎನ್ನುವ 14ವರ್ಷದ ಬಾಲಕ ಕ್ರೂರವಾಗಿ ಕೊಲೆಯಾಗಿದ್ದಾನೆ. ಆರೋಪಿಗಳು ಕೂಡಾ ಬಾಲಕರೇ ಆಗಿದ್ದಾರೆ. ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಫೆಬ್ರವರಿ 8ರಂದು ರಾತ್ರಿ ಭೌಮಿಕ್ ಮತ್ತು ಇಬ್ಬರು ಗೆಳೆಯರು ಸೇರಿ ಮದ್ಯಪಾನಮಾಡಿದ್ದರು. ಮಾತಿನ ವಾಗ್ವಾದ ನಡೆದು ಗೆಳೆಯರಲ್ಲೊಬ್ಬ ಭೌಮಿಕ್‌ನ ತಲೆಗೆ ಮದ್ಯದ ಬಾಟ್ಲಿಯಿಂದ ಹೊಡೆದಿದ್ದಾನೆ. ಭೌಮಿಕ್ ಮೃತಪಟ್ಟ ಎಂದು ಸ್ಪಷ್ಟವಾದ ಬಳಿಕ ಗೆಳೆಯರು ಮೃತದೇಹವನ್ನು ಸಮೀಪದ ಕೆಸರಿದ್ದ ಹೊಂಡದೊಳಗೆ ಹೂತು ಹಾಕಿದ್ದರು.

 ಘಟನೆಯ ದಿವಸ ಸಂಜೆ 4:15 ಗಂಟೆಗೆ ಪಿಯೊನ್‌ಪರದ ತನ್ನ ಮನೆಯಿಂದ ಭೌಮಿಕ್ ಗೆಳೆಯರ ಜೊತೆ ಆಡಲು ಹೊರಟು ಹೋಗಿದ್ದ. ರಾತ್ರಿಯಾದರೂ ಹುಡುಗ ಮರಳಿ ಬಂದಿರಲಿಲ್ಲ. ಮನೆಯವರು ಹುಡುಕಿದರೂ ಬಾಲಕ ಪತ್ತೆಯಾಗಿರಲಿಲ್ಲ. ಮರುದಿವಸ ಭೌಮಿಕ್‌ನ ಅಮ್ಮ ಕೋಟ್ವಲಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪೊಲೀಸರು ತನಿಖೆ ನಡೆಸಿದಾಗ ಭೌಮಿಕ್‌ನ ಮನೆಯಿಂದ ಎರಡು ಕಿಲೊಮೀಟರ್ ದೂರದ ನಿರ್ಜನ ಪ್ರದೇಶದ ಹೆಲಿಪ್ಯಾಡ್‌ನ ಸಮೀಪದ ಕಾಡಿನಲ್ಲಿ ಭೌಮಿಕ್‌ನ ಸೈಕಲ್ ಪತ್ತೆಯಾಗಿತ್ತು. ಭೌಮಿಕ್‌ನ ಜೊತೆಗೆ ಇತರ ಇಬ್ಬರು ಮಕ್ಕಳಿದ್ದುದನ್ನು ನಾವು ನೋಡಿದ್ದೇವೆಂದು ಸ್ಥಳೀಯನಿವಾಸಿಗಳು ಪೊಲೀಸರಿಗೆ ತಿಳಿಸಿದ್ದರು. ರವಿವಾರ ಇಬ್ಬರನ್ನೂ ಹಿಡಿದು ಪೊಲೀಸರು ತನಿಖೆ ನಡೆಸಿದಾಗ ಭೌಮಿಕ್‌ನ ಗೆಳೆಯರ ಕ್ರೂರ ಕೃತ್ಯ ಬಯಲಾಯಿತು. ಭೌಮಿಕ್‌ನನ್ನು ಕೊಂದು ಮುಚ್ಚಿಹಾಕಿದ ಗುಂಡಿಯನ್ನು ಕೆಲವು ದಿವಸಗಳ ಹಿಂದೆ ನಾವೇ ತೋಡಿದ್ದೆವು ಎಂದು ಆರೋಪಿಗಳಾದ ಇಬ್ಬರು ಬಾಲಕರು ಪೊಲೀಸರಿಗೆ ತಿಳಿಸಿದರು. ರವಿವಾರ ಮಧ್ಯಾಹ್ನ ಆರೋಪಿಗಳ ನೆರವಿನಲ್ಲಿ ಮೃತದೇಹವನ್ನು ಪತ್ತೆಮಾಡಲಾಯಿತು. ಒಡೆದ ಮದ್ಯದ ಬಾಟ್ಲಿಯನ್ನು ಸ್ಥಳದಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೂವರು ಸೇರಿ ಯಾವಾಗಲೂ ಮದ್ಯಪಾನ ಮಾಡುತ್ತಿದ್ದರು. ಭೌಮಿಕ್‌ನಿಂದ ಪಡೆದಿದ್ದ 150 ರೂಪಾಯಿಯ ಕುರಿತ ಜಗಳ ಸಾವಿನೊಂದಿಗೆ ಪರ್ಯಾವಸನಗೊಂಡಿತು ಎಂದು ಆರೋಪಿ ಬಾಲಕರು ಹೇಳಿದ್ದಾರೆ. ನಂತರ ಅವರನ್ನು ಜುವೈನಲ್ ಹೋಮ್‌ಗೆ ಪೊಲೀಸರು ಕಳುಹಿಸಿದ್ದಾರೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X