Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಿಡ್ಡಳ್ಳಿ ಆದಿವಾಸಿಗಳಿಗೆ ಸ್ಥಳದಲ್ಲೇ...

ದಿಡ್ಡಳ್ಳಿ ಆದಿವಾಸಿಗಳಿಗೆ ಸ್ಥಳದಲ್ಲೇ ಭೂಮಿ ನೀಡಲು ದೊರೆಸ್ವಾಮಿ ಆಗ್ರಹ

►144 ಜಾರಿ ಹಿನ್ನಲೆ ಮಾಲ್ದಾರೆ ಬಳಿ ಹೋರಾಟಗಾರರನ್ನು ತಡೆದ ಪೊಲೀಸರು ►ಸರಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ದೊರೆಸ್ವಾಮಿ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ13 Feb 2017 5:18 PM IST
share
ದಿಡ್ಡಳ್ಳಿ ಆದಿವಾಸಿಗಳಿಗೆ ಸ್ಥಳದಲ್ಲೇ ಭೂಮಿ ನೀಡಲು ದೊರೆಸ್ವಾಮಿ ಆಗ್ರಹ

ಸಿದ್ದಾಪುರ, ಫೆ.13: ಆದಿವಾಸಿಗಳ ಭೂಮಿ ಹಕ್ಕಿನ ಹೋರಾಟಕ್ಕೆ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ ವಾಹನದಲ್ಲಿ ದಿಡ್ಡಳ್ಳಿಗೆ ತೆರಳುತ್ತಿದ್ದ ಸಂದರ್ಭ ನಿಷೇದಾಜ್ಞೆ ಜಾರಿ ಹಿನ್ನೆಲೆ ಮಾಲ್ದಾರೆ ಬಳಿ ಪೊಲೀಸರು ತಡೆ ಒಡ್ಡಿದ್ದು, ಆಕ್ರೋಶಗೊಂಡ ಹೋರಾಟಗಾರರು ಸ್ಥಳದಲ್ಲಿಯೇ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ವಿರುದ್ಧ ಅಸಮಧಾನ ವ್ಯಕ್ತಪಡಿಸಿದ ಘಟನೆ ನಡೆಯಿತು.

   ರಸ್ತೆ ಬದಿಯಲ್ಲೇ ಉರಿ ಬಿಸಿಲಿನಲ್ಲಿ ಪ್ರತಿಭಟನೆ ನಡೆಸಿದ ಸಂದರ್ಭ ದಿಡ್ಡಳ್ಳಿಯಿಂದ ಕಾಲ್ನಡಿಗೆಯಲ್ಲಿ ಬಂದ ನಿರಾಶ್ರಿತ ಆದಿವಾಸಿಗಳು ಪ್ರತಿಭಟನೆಗೆ ಸಾಥ್ ನೀಡಿ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರನ್ನು ದಿಡ್ಡಳ್ಳಿಗೆ ತೆರಳದಂತೆ ತಡೆ ಒಡ್ಡಿರುವ ಜಿಲ್ಲಾಡಳಿತದ ವಿರುದ್ಧ ಆಕ್ರೋಷ ವ್ಯಕ್ತ ಪಡಿಸಿ ಸರಕಾರದ ವಿರುದ್ಧ ಧಿಕ್ಕಾರ ಕೂಗಿದರು. ಜಿಲ್ಲಾಡಳಿತ ಕೂಡಲೇ ಸೆ. 144 ತೆರವುಗೊಳಿಸಿ ದೊರೆಸ್ವಾಮಿ ಹಾಗೂ ಹೋರಾಟಗಾರರನ್ನು ದಿಡ್ಡಳ್ಳಿ ಪ್ರವೇಶಕ್ಕೆ ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿದರು.

ಈ ವೇಳೆ ಪ್ರತಿಭಟನೆ ನಿರತರನ್ನು ಉದ್ದೇಶಿಸಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ ಮಾತನಾಡಿ, ದಿಡ್ಡಳ್ಳಿಯ ನ್ಯಾಯುತ ಹೋರಾಟಕ್ಕೆ ನಿಮ್ಮ ಜೊತೆ ಇರುವುದಾಗಿ ತಿಳಿಸಿದರು. ದಿಡ್ಡಳ್ಳಿಯವರಿಗೆ ಧೈರ್ಯ ತುಂಬುವ ಸಲುವಾಗಿ ಆಗಮಿಸಲು ಮುಂದಾದಾಗ ಸೆ.144 ಜಾರಿ ಇರಲಿಲ್ಲ. ಆದರೆ, ರವಿವಾರ ಬೆಂಗಳೂರಿನಿಂದ ಹೊರಡುವ ವೇಳೆ ಸೆ 144 ಜಾರಿ ಮಾಡಿರುವುದು ಪತ್ರಿಕೆಗಳ ಮೂಲಕ ತಿಳಿಯಿತು. ಬಳಿಕ ಜಿಲ್ಲಾದಿಕಾರಿಗಳ ಜೊತೆ ಮಾತನಾಡಿದಾಗ ದುಷ್ಟರು ಬಂದು ಕಾನೂನು ಸುವ್ಯವಸ್ಥೆ ಹದೆಗಡುತ್ತದೆ ಆದ್ದರಿಂದ ಸೆ 144 ಜಾರಿ ಮಾಡಿರುವುದಾಗಿ ತಿಳಿಸಿದ್ದಾರೆ. ಆದರೆ, ಜಿಲ್ಲಾಧಿಕಾರಿಗಳು ನಾವು ಬರುವುದನ್ನು ತಡೆಯಲು ಸೆ 144. ಜಾರಿ ಮಾಡಿದ್ದಾರೆ.

ಜಿಲ್ಲಾಧಿಕಾರಿಗಳ ಈ ಕ್ರಮ ಸರಿಯಲ್ಲ. ಇದೀಗ ನಮ್ಮನ್ನು ಪೊಲೀಸರು ತಡೆದು ದಿಡ್ಡಳ್ಳಿಗೆ ನಾಲ್ಕು ಜನ ಹೋಗಬಹುದು ಎಂದಿದ್ದಾರೆ. ಆದರೆ ಹೋಗುವುದಾದರೆ ಹೋರಾಟಗಾರರೆಲ್ಲರಿಗೂ ಪ್ರವೇಶ ನೀಡಬೇಕೆಂದು ಆಗ್ರಹಿಸಿದಾಗ, ಇದಕ್ಕೆ ಪೊಲೀಸರು ನಿರಾಕರಿಸಿ ತಡೆದಿದ್ದಾರೆ. ಈಗಾಗಲೇ ಮುಖ್ಯಮಂತ್ರಿಗಳು ಫೋನ್ ಕರೆಮಾಡಿ ಎರಡು ದಿನದಲ್ಲಿ ಸಭೆ ನಡೆಸಿ ಸಮಸ್ಯೆ ಬಗೆ ಹರಿಸುವುದಾಗಿ ತಿಳಿಸಿದ್ದಾರೆ ಎಂದು ದೊರೆಸ್ವಾಮಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X