Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಂಡೂರು ವ್ಯಾಪ್ತಿಯಲ್ಲಿ ಅಕ್ರಮ ಮದ್ಯ...

ಮುಂಡೂರು ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ-ಆರೋಪ

ಮಾರಾಟಗಾರರಿಂದ ಹಣ ಪಡೆಯುವ ಅಬಕಾರಿ ಅಧಿಕಾರಿಗಳು !

ವಾರ್ತಾಭಾರತಿವಾರ್ತಾಭಾರತಿ13 Feb 2017 7:19 PM IST
share
ಮುಂಡೂರು ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ-ಆರೋಪ

ಪುತ್ತೂರು,ಫೆ.13: ಪುತ್ತೂರು ತಾಲೂಕಿನ ಮುಂಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹೆಚ್ಚಿನ ಕಡೆಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದ್ದು ಇದರಿಂದ ಜನ ಸಾಮಾನ್ಯರಿಗೆ ತೀವ್ರ ತೊಂದರೆಯಾಗಿದೆ, ಕ್ರಮ ಕೈಗೊಳ್ಳಿ ಎಂದು ಅಬಕಾರಿ ಇಲಾಖೆಗೆ ಮಾಹಿತಿ ನೀಡಿದರೆ ಅವರು ಬಂದು ಮದ್ಯ ಮಾರಾಟಗಾರರಿಂದ ಹಣ ಪಡೆದು ತೆರಳುತ್ತಾರೆ ಎಂದು ಮುಂಡೂರು ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ಆರೋಪಿಸಿದರು.

ಸಭೆಯು ಗ್ರಾ.ಪಂ ಅಧ್ಯಕ್ಷ ಎಸ್.ಡಿ ವಸಂತ ಅವರ ಅಧ್ಯಕ್ಷತೆಯಲ್ಲಿ ಫೆ.10ರಂದು ಮುಂಡೂರು ಸಿ.ಎ ಬ್ಯಾಂಕ್ ಸಭಾ ಭವನದಲ್ಲಿ ನಡೆಯಿತು. ಅಬಕಾರಿ ಇಲಾಖೆಯವರು ಗ್ರಾಮ ಸಭೆಗಳಿಗೂ ಬರುವುದಿಲ್ಲ ಎಂದು ಆರೋಪಿಸಿದ ಗ್ರಾಮಸ್ಥರು ಅಬಕಾರಿಯವರು ದಾಳಿ ನಡೆಸಿ ಅಕ್ರಮ ಮದ್ಯ ಪತ್ತೆ ಮಾಡಿದ್ದು ಎಲ್ಲೂ ನಮಗೆ ಗೊತ್ತಿಲ್ಲ, ಅಕ್ರಮ ಮದ್ಯ ಮಾರಾಟದ ವಿರುದ್ದ ನಾವು ಪೊಲೀಸ್ ಇಲಾಖೆಗೆ ದೂರು ನೀಡಿದ್ದೇವೆ ಆದರೆ ಪೊಲೀಸ್ ಇಲಾಖೆಯನ್ನು ಕ್ರಮಕೈಗೊಳ್ಳದಂತೆ ಅಬಕಾರಿ ಇಲಾಖೆಯವರು ಮಾಡುತ್ತಿದ್ದಾರೆ ಎಂದರು. ಅಬಕಾರಿ ಇಲಾಖೆಯ ವಿರುದ್ದ ನಿರ್ಣಯ ಕೈಗೊಂಡು ಸರಕಾರಕ್ಕೆ ಮಾಹಿತಿ ನೀಡಬೇಕು, ಇಲ್ಲವಾದರೆ ಇಲಾಖೆಯ ವಿರುದ್ದ ಹೋರಾಟ ಅನಿವಾರ್ಯವಾದೀತು ಗ್ರಾಮಸ್ಥರು ಎಚ್ಚರಿಸಿದರು.

ಇದಕ್ಕೆ ಉತ್ತರಿಸಿದ ಅಧ್ಯಕ್ಷರು ಅಕ್ರಮ ಮದ್ಯ ಮಾರಾಟ ನಿಂತರೆ ಸಮಾಜದಲ್ಲಿ ಅಪರಾಧಗಳು ಘಟಿಸುವುದಿಲ್ಲ. ಗ್ರಾಮ ಸಭೆಗೆ ಕರೆದರೆ ಅಬಕಾರಿ ಇಲಾಖೆಯವರು ಬರುತ್ತಿಲ್ಲ, ಗ್ರಾಮಸ್ಥರಿಗೆ ಮಾರಕವಾಗಿರುವ ಅಬಕಾರಿ ಇಲಾಖೆಯ ವಿರುದ್ದ ಸರಕಾರಕ್ಕೆ ಬರೆದುಕೊಳ್ಳುವುದಾಗಿ ನಿರ್ಣಯ ಮಾಡುವುದಾಗಿ ಗ್ರಾಮಸ್ಥರಿಗೆ ಮಾಹಿತಿ ನೀಡಿದರು.

ತ್ಯಾಜ್ಯ ಎಸೆಯುವವರ ವಿರುದ್ದ ಕ್ರಮ ಕೈಗೊಳ್ಳಿ:

ಮುಂಡೂರು ಗ್ರಾ.ಪಂ ವ್ಯಾಪ್ತಿಯ ಹಲವು ಕಡೆಗಳಲ್ಲಿ ತ್ಯಾಜ್ಯ ಎಸೆಯಲಾಗುತ್ತಿದೆ, ನೀರಿನ ಟ್ಯಾಂಕ್ ಇರುವ ಕಡೆಗಳಲ್ಲಿಯೂ ಕೋಳಿ ತ್ಯಾಜ್ಯವನ್ನು ಹಾಕುತ್ತಿದ್ದಾರೆ ಇದರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.

 ತ್ಯಾಜ್ಯ ಹಾಕುವವರನ್ನು ಗ್ರಾಮಸ್ಥರೇ ಗಮನಿಸಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು ಗ್ರಾಮಸ್ಥರ ಮಾಹಿತಿಯನ್ನು ಗೌಪ್ಯವಾಗಿಡುವ ಮೂಲಕ ಆರೋಪಿಗಳ ವಿರುದ್ದ ಕ್ರಮಕೈಗೊಳ್ಳುವುದಾಗಿ ಪೊಲೀಸರು ಸಭೆಗೆ ತಿಳಿಸಿದರು. ಮುಂಡೂರು ಪೇಟೆಯಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಸಿ ಸಿ ಕೆಮರಾ ವ್ಯವಸ್ಥೆ ಮಾಡುವ ಮೂಲಕ ದುಷ್ಟ ಶಕ್ತಿಗಳ ನಿಯಂತ್ರಣಕ್ಕೆ ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದು ಪೊಲೀಸ್ ಇಲಾಖೆಯವರು ಮಾಹಿತಿ ನೀಡಿದರು.

ಸಂಶಯಕ್ಕೆ ಎಡೆ ಮಾಡಿದ ಮರ ಸಾಗಾಟ:

ಅರಣ್ಯ ಇಲಾಖೆಯ ಅಧಿಕಾರಿಯವರು ಮಾಹಿತಿ ನೀಡುತ್ತಿದ್ದ ವೇಳೆ ಗ್ರಾಮಸ್ಥ ರಾಧಾಕೃಷ್ಣ ಅವರು ಮಾತನಾಡಿ ಮರದ ವಿಚಾರದಲ್ಲಿ ಕೋಟಿ ಕೋಟಿ ಲೆಕ್ಕಾಚಾರ ಹೇಳುತ್ತೀರಿ ಆದರೆ ಪರಿಸರದ ದೃಷ್ಟಿಯಿಂದ ಒಂದು ಮರವನ್ನಾದರೂ ಅರಣ್ಯ ಇಲಾಖೆ ನೆಟ್ಟಿದೆಯೇ ಎಂದು ಪ್ರಶ್ನಿಸಿದರು.

 ತಾ.ಪಂ ಸದಸ್ಯ ಶಿವರಂಜನ್ ಮಾತನಾಡಿ ಪಂಜಳ, ಮುಂಡೂರು ಮತ್ತಿತರ ಕಡೆಗಳಿಂದ ದಿನಾಲೂ ಪಿಕಪ್ ಹಾಗೂ ಲಾರಿಗಳಲ್ಲಿ ನಿರಾತಂಕವಾಗಿ ಮರಗಳ ಸಾಗಾಟ ಮಾಡಲಾಗುತ್ತಿದ್ದು ಹಲವು ಸಂಶಯಗಳು ನಮ್ಮನ್ನು ಕಾಡುತ್ತಿದೆ ಎಂದರು. ಸಾಗಾಟ ಮಾಡುವ ಮತಗಳಿಗೆ ಪರ್ಮಿಶನ್ ಇದೆಯೇ ಅಥವಾ ಇಲ್ಲದೆಯೇ ಸಾಗಾಟ ಮಾಡಲಾಗುತ್ತಿದೆಯೇ ಎಂದು ಅವರು ಪ್ರಶ್ನಿಸಿದರು. ಮರಗಳ ಅಕ್ರಮ ಸಾಗಾಟದ ಶಂಕೆ ಇರುವುದರಿಂದ ಅರಣ್ಯ ಇಲಾಖೆ ತುಸು ಅಲರ್ಟ್ ಆಗಿ ಇರಬೇಕಾದ ಅವಶ್ಯಕತೆ ಇದೆ ಎಂದು ಶಿವರಂಜನ್ ಹೇಳಿದರು.

ಅಪಪ್ರಚಾರಕ್ಕೆ ಕಿವಿಗೊಡಬೇಡಿ - ವೈದ್ಯೆ ಖತೀಜ ದಿಲ್ಶಾದ್

ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಖತೀಜ ದಿಲ್ಶಾದ್ ಮಾತನಾಡಿ ದಡಾರ ಹಾಗೂ ರುಬೆಲ್ಲೋ ಚುಚ್ಚುಮದ್ದು ವಿಚಾರವಾಗಿ ವ್ಯಾಪಕ ಅಪಪ್ರಚಾರ ನಡೆಯುತ್ತಿದ್ದು ಅದಕ್ಕೆ ಪೋಷಕರು ಕಿವಿಗೊಡದೆ ತಮ್ಮ ಮಕ್ಕಳಿಗೆ ಚುಚ್ಚುಮದ್ದು ಹಾಕಿಸಿಕೊಳ್ಳಿ ಎಂದು ಹೇಳಿದರು. ಮಕ್ಕಳ ಹಿತದೃಷ್ಟಿಯಿಂದ ಚುಚ್ಚು ಮದ್ದು ಕೊಡಲಾಗುತ್ತಿದ್ದು ಇದನ್ನು ಯಾರಿಗೂ ಬಲತ್ಕಾರವಾಗಿ ಕೊಡಲಾಗುತ್ತಿಲ್ಲ, ಯಾರೋ ಮಾಡುವ ಅಪಪ್ರಾಚರವನ್ನು ನಂಬಿ ತಮ್ಮ ಮಕ್ಕಳಿಗೆ ಚುಚ್ಚುಮದ್ದು ಹಾಕಿಸದೇ ಇದ್ದರೆ ಅದು ನಿಮಗೇ ನಷ್ಟ ಎಂದು ಅವರು ಹೇಳಿದರು.ಪಶು ವೈದ್ಯಾಧಿಕಾರಿ ಪ್ರಸನ್ನ ಕುಮಾರ್ ಹೆಬ್ಬಾರ್ ಚರ್ಚಾ ನಿಯಂತ್ರಣಾಧಿಕಾರಿಯಾಗಿದ್ದರು.

ವೇದಿಕೆಯಲ್ಲಿ ಗ್ರಾ.ಪಂ ಸದಸ್ಯರಾದ ಶಿವನಾಥ ರೈ ಮೇಗಿನಗುತ್ತು, ರಾಮಚಂದ್ರ ಸೊರಕೆ, ಮಹೇಶ್ಚಂದ್ರ ಸಾಲ್ಯಾನ್, ಬಾಲಕೃಷ್ಣ ಪೂಜಾರಿ, ಹಂಝ ಎಲಿಯ, ಶೀನಪ್ಪ ನಾಯ್ಕ, ಬಿ.ಟಿ ಮಹೇಶ್ಚಂದ್ರ ಸಾಲ್ಯಾನ್, ಹೊನ್ನಮ್ಮ, ಸೀತಾ, ಸಾವಿತ್ರಿ, ಮೀನಾಕ್ಷಿ, ಕುಸುಮ, ಉದಯಕುಮಾರ್ ಬಾಕುಡ ಉಪಸ್ಥಿತರಿದ್ದರು. ಪಿಡಿಓ ಸುಜಾತಾ ಕೆ ವರದಿ ಹಾಗೂ ಲೆಕ್ಕ ಪತ್ರಗಳನ್ನು ಮಂಡಿಸಿದರು. ಶಿವನಾಥ ರೈ ಮೇಗಿನಗುತ್ತು ಸ್ವಾಗತಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X