Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಿಡ್ಡಳ್ಳಿಯಲ್ಲೇ ನಿವೇಶನ ನೀಡಲು...

ದಿಡ್ಡಳ್ಳಿಯಲ್ಲೇ ನಿವೇಶನ ನೀಡಲು ದೊರೆಸ್ವಾಮಿ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ14 Feb 2017 5:40 PM IST
share
ದಿಡ್ಡಳ್ಳಿಯಲ್ಲೇ ನಿವೇಶನ ನೀಡಲು ದೊರೆಸ್ವಾಮಿ ಒತ್ತಾಯ

ಮಡಿಕೇರಿ ಫೆ.14 :ಗುಡಿಸಲುಗಳಲ್ಲಿ ನೆಲೆಸಿರುವ ನಿವೇಶನ ರಹಿತರಿಗೆ ದಿಡ್ಡಳ್ಳಿಯಲ್ಲಿಯೇ ನಿವೇಶನ ಒದಗಿಸಬೇಕೆಂದು ಒತ್ತಾಯಿಸಿರುವ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ಕೇಂದ್ರದ ಅನುಮತಿಯ ಅಗತ್ಯವಿದ್ದರೆ ಆ ನಿಟ್ಟಿನಲ್ಲೂ ಸರಕಾರ ಪ್ರಯತ್ನ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

 ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಿಡ್ಡಳ್ಳಿಯಲ್ಲಿರುವ ಗಿರಿಜನರಿಗೆ ಅಲ್ಲಿಯೇ ಜಾಗ ಒದಗಿಸಬೇಕೆನ್ನುವುದು ನಮ್ಮ ಪ್ರಮುಖ ಬೇಡಿಕೆಯಾಗಿದ್ದು, ಆದಷ್ಟು ಶೀಘ್ರ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸುವುದಾಗಿ ತಿಳಿಸಿದರು.

ಗಿರಿಜನರಿಗೆ ನಿವೇಶನ ಒದಗಿಸುವ ನಿಟ್ಟಿನಲ್ಲಿ ಅವರೊಂದಿಗೆ ಮಾತುಕತೆ ನಡೆಸಬೇಕೆನ್ನುವ ಹಂತದಲ್ಲಿ ಆ ಪ್ರದೇಶಕ್ಕೆ ಪ್ರವೇಶಿಸದಂತೆ ನಿಷೇಧಾಜ್ಞೆಯ ಮೂಲಕ ನಿರ್ಬಂಧ ಹೇರಿರುವ ಜಿಲ್ಲಾಡಳಿತದ ಕ್ರಮ ಅತ್ಯಂತ ಬಾಲಿಶವಾಗಿದೆ. ದಿಡ್ಡಳ್ಳಿಗೆ ಆಗಮಿಸಿ ಯಾರೋ ಕಾನೂನು ಭಂಗ ಮಾಡಿ ಗದ್ದಲ ಮಾಡುತ್ತಾರೆ ಎಂದು ನಮ್ಮನ್ನು ಅಲ್ಲಿಗೆ ತೆರಳದಂತೆ ನಿಷೇಧಾಜ್ಞೆ ಹೇರಿ ನಿರ್ಬಂಧಿಸಿರುವ ಕ್ರಮ ಸರಿಯಲ್ಲ. ನಿಷೇದಾಜ್ಞೆ ಹೇರುವ ಮೂಲಕ ನಮ್ಮನ್ನು ದಿಡ್ಡಳ್ಳಿಗೆ ಹೋಗದಂತೆ ತಡೆಯವುದಕ್ಕೆ ನಾವೇನು ಹೊರಗಿನವರಲ್ಲ. ನಾವು ಭಾರತೀಯರು ಮತ್ತು ಕನ್ನಡಿಗರೇ ಆಗಿದ್ದೇವೆ ಎಂದು ದೊರೆಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.

 ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರು ಇತ್ತೀಚೆಗೆ, ಅರಣ್ಯ ಇಲಾಖೆಗೆ ಹಸ್ತಾಂತರಿಸಲ್ಪಟ್ಟು, ಅರಣ್ಯವೆಂದು ಪರಿವರ್ತನೆಯಾಗದಿರುವ ಸಿ ಮತ್ತು ಡಿ ದರ್ಜೆಯ ಭೂಮಿಯನ್ನು ಹಿಂದಕ್ಕೆ ಪಡೆಯುವುದಾಗಿ ತಿಳಿಸಿದ್ದಾರೆ. ಇಂತಹ ನಿರ್ಧಾರದಿಂದ ನಿರ್ವಸತಿಗರ ಪರವಾದ ನಮ್ಮ ಹೋರಾಟದಲ್ಲಿ ಅರ್ಧ ಯುದ್ಧವನ್ನು ಗೆದ್ದಂತಾಗಿದೆಯೆಂದು ತಿಳಿಸಿದರು. ನಾಮಕಾವಸ್ಥೆಯಲ್ಲಿರುವ ಡೀಮ್ಡ್ ಫಾರೆಸ್ಟ್ ಜಾಗವನ್ನು ಹಿಂದಕ್ಕೆ ಪಡೆಯುವುದಿದ್ದಲ್ಲಿ ಸ್ವಾಗತಿಸುವುದಾಗಿ ಹೇಳಿದ ದೊರೆಸ್ವಾಮಿ, ನಿಜಕ್ಕೂ ಅರಣ್ಯ ಪ್ರದೇಶವಾಗಿದ್ದಲ್ಲಿ ಅದನ್ನು ಉಳಿಸಿಕೊಳ್ಳುವುದು ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

 ಭೂಮಿ ಮತ್ತು ವಸತಿ ಹಕ್ಕುವಂಚಿತರ ಹೋರಾಟ ಸಮಿತಿಯ ಪ್ರಮುಖರಾದ ಎ.ಕೆ. ಸುಬ್ಬಯ್ಯ ಮಾತನಾಡಿ, ದಿಡ್ಡಳ್ಳಿಯ ಜಾಗವನ್ನು ಈ ಹಿಂದೆ ಅರಣ್ಯ ಇಲಾಖೆ ಮೀಸಲು ಅರಣ್ಯವೆಂದು ಹೇಳಲಾಗುತ್ತಿತ್ತು. ಆದರೆ ಪ್ರಸ್ತುತ ಅದು ಬಫರ್ ಝೋನ್‌ಗೆ ಇಳಿದಿದೆ ಎಂದು ವ್ಯಂಗ್ಯವಾಡಿದರು. ಗಿರಿಜನರಿಗೆ ದಿಡ್ಡಳ್ಳಿಯ ಜಾಗ ಒದಗಿಸಲು ಕೇಂದ್ರದ ಅನುಮತಿ ಬೇಕಿದ್ದರೆ, ಜಾಗ ಬಿಟ್ಟುಕೊಡಲು ಕೇಂದ್ರಕ್ಕೆ ಪತ್ರ ಬರೆಯುವಂತೆ ತಿಳಿಸಿದರು.

ಮುಖ್ಯಮಂತ್ರಿಗಳೊಂದಿಗೆ ಚರ್ಚೆಗೂ ಮುನ್ನವೆ ಜಿಲ್ಲೆಯ ವಿವಿಧೆಡೆಗಳಲ್ಲಿ ಜಾಗ ಗುರುತಿಸಿ ಗಿರಿಜನರನ್ನು ಅಲ್ಲಿಗೆ ಸ್ಥಳಾಂತರಿಸುವ ಪಿತೂರಿಯ ಹಿಂದೆ ಅರಣ್ಯ ಇಲಾಖೆ ಹಾಗೂ ಡೋಂಗಿ ಪರಿಸರವಾದಿಗಳ ಷಡ್ಯಂತ್ರ ಇದೆ ಎಂದು ಸುಬ್ಬಯ್ಯ ಆರೋಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X