ಕಳ್ಳಬಟ್ಟಿ: ಓರ್ವನ ಬಂಧನ

ಮೂಡಿಗೆರೆ, ಫೆ.14: ಕಳ್ಳಬಟ್ಟಿ ತಯಾರಿಸುತ್ತಿದ್ದ ಎರಡು ಮನೆಗಳ ಮೇಲೆ ಧಾಳಿ ನಡೆಸಿದ ಅಬಕಾರಿ ಪೊಲೀಸರು ಓರ್ವನನ್ನು ಬಂಧಿಸಿದ್ದು, ಇನ್ನೋರ್ವ ಆರೋಪಿ ಪರಾರಿಯಾಗಿದ್ದಾನೆ.
ಬಣಕಲ್ ಹೋಬಳಿ ತ್ರಿಪುರ ಗ್ರಾಮದಲ್ಲಿ ಕಳ್ಳಬಟ್ಟಿ ತಯಾರಿಸುತ್ತಿದ್ದ ಮನೆಗಳ ಮೇಲೆ ಧಾಳಿ ನಡೆಸಿದಾಗ 4 ಲೀಟರ್ ಕಳ್ಳಬಟ್ಟಿ, 90 ಲೀಟರ್ ಬೆಲ್ಲದ ಕೊಳೆ ಹಾಗೂ ಕಳ್ಳಬಟ್ಟಿ ತಯಾರಿಕಾ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿ ತ್ರಿಪುರ ಗ್ರಾಮದ ಮಹೇಶ್ ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಇನ್ನೋರ್ವ ಆರೋಪಿ ಕೃಷ್ಣಪ್ಪ ತಲೆಮರೆಸಿಕೊಂಡಿದ್ದಾನೆ. ಈತನ ಬಂಧನಕ್ಕೆ ಅಬಕಾರಿ ಪೊಲೀಸರು ಬಲೆ ಬೀಸಿದ್ದಾರೆ.
ಕಾರ್ಯಚರಣೆಯಲ್ಲಿ ಅಬಕಾರಿ ಪೊಲೀಸ್ ಉಪಾದೀಕ್ಷಕ ಕೆ.ಬಿ.ಸಂತೋಷ್, ಸರ್ಕಲ್ ಇನ್ಸ್ಪೆಕ್ಟರ್ ಆನಂದ್ ಹಾಗೂ ಅಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು.
Next Story





