Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪನ್ನೀರ್‌ಸೆಲ್ವಂ ಸಹಿತ 10 ಎಡಿಎಂಕೆ...

ಪನ್ನೀರ್‌ಸೆಲ್ವಂ ಸಹಿತ 10 ಎಡಿಎಂಕೆ ಮುಖಂಡರ ಉಚ್ಚಾಟನೆ

ವಾರ್ತಾಭಾರತಿವಾರ್ತಾಭಾರತಿ14 Feb 2017 7:28 PM IST
share
ಪನ್ನೀರ್‌ಸೆಲ್ವಂ ಸಹಿತ 10 ಎಡಿಎಂಕೆ ಮುಖಂಡರ ಉಚ್ಚಾಟನೆ

ಚೆನ್ನೈ,ಫೆ.14: ತನ್ನ ವಿರುದ್ಧ ಬಂಡೆದ್ದಿರುವ ಮುಖ್ಯಮಂತ್ರಿ ಓ. ಪನ್ನೀರ್‌ಸೆಲ್ವಂ ಸೇರಿದಂತೆ ಎಡಿಎಂಕೆ ಪಕ್ಷದ 20 ಮಂದಿ ಮುಖಂಡರನ್ನು, ಪ್ರಧಾನ ಕಾರ್ಯದರ್ಶಿ ಶಶಿಕಲಾ ಅವರು ಮಂಗಳವಾರ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿದ್ದಾರೆ.

ಆದಾಯ ಮೀರಿದ ಆಸ್ತಿಗಳಿಕೆ ಪ್ರಕರಣದಲ್ಲಿ ತನ್ನನ್ನು ಸುಪ್ರೀಂಕೋರ್ಟ್ ದೋಷಿಯೆಂದು ತೀರ್ಪು ನೀಡಿದ ಕೆಲವೇ ತಾಸುಗಳಲ್ಲಿ ಶಶಿಕಲಾ ಈ ಕ್ರಮವನ್ನು ಕೈಗೊಂಡಿದ್ದಾರೆ.

‘‘ ಪಕ್ಷದ ತತ್ವ ಹಾಗೂ ಸಿದ್ಧಾಂತಗಳಿಗೆ ವಿರುದ್ಧವಾಗಿ ಕಾರ್ಯಾಚರಿಸಿದ ಈ ಸದಸ್ಯರನ್ನು ಅವರ ಪಕ್ಷವಿರೋಧಿ ಚಟುವಟಿಕೆಗಳಿಗಾಗಿ ಹಾಗೂ ಪಕ್ಷದ ಹಿತಾಸಕ್ತಿಗಳಿಗೆ ವಿರುದ್ಧವಾಗಿ ವರ್ತಿಸಿದ್ದಕ್ಕಾಗಿ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ’’ ಎಂದು ಶಶಿಕಲಾ ಅವರು ಸಹಿಹಾಕಿರುವ ಪಕ್ಷದ ಅಧಿಕೃತ ಹೇಳಿಕೆಯು ತಿಳಿಸಿದೆ.

ಮುಖ್ಯಮಂತ್ರಿ ಪನ್ನೀರ್‌ಸೆಲ್ವಂ, ಶಾಲಾ ಶಿಕ್ಷಣ ಸಚಿವ ಮಾ ಫೊಯ್ ಪಾಂಡ್ಯರಾಜನ್, ಎಡಿಎಂಕೆ ವಕ್ತಾರ ಪೊನ್ನಯ್ಯನ್, ಮಾಜಿ ಸಚಿವರಾದ ನಾಥಮ್ ಆರ್.ವಿಶ್ವನಾಥನ್, ಕೆ.ಪಿ. ಮುನುಸ್ವಾಮಿ, ರಾಜೇಂದ್ರ ಬಾಲಾಜದಿ ಹಾಗೂ ಪಿ. ಮೋಹನ್ ಉಚ್ಚಾಟಿತ ನಾಯಕರಲ್ಲಿ ಸೇರಿದ್ದಾರೆ.

ಇದರ ಜೊತೆಗೆ ಮಾಜಿ ಶಾಸಕರಾದ ಕೆ. ಥಾವಸಿ, ಕೆ.ಎ. ಜಯಪಾಲ್, ಎಸ್.ಕೆ.ಸೆಲ್ವಂ, ವಿ.ನೀಲಕಂಡನ್ ಹಾಗೂ ಕೆ. ಅಯ್ಯಪ್ಪನ ಕೂಡಾ ಉಚ್ಚಾಟಿಸಲ್ಪಟ್ಟಿದ್ದಾರೆ. ಆದಾಗ್ಯೂ ಪನ್ನೀರ್‌ಸೆಲ್ವಂ ಅವರನ್ನು ಬೆಂಬಲಿಸುತ್ತಿರುವ ಸಂಸದರು ಹಾಗೂ ಶಾಸಕರ ವಿರುದ್ಧ ಶಶಿಕಲಾ ಯಾವುದೇ ಶಿಸ್ತುಕ್ರಮವನ್ನು ಕೈಗೊಂಡಿಲ್ಲ.

ಈ ಮಧ್ಯೆ ಎಡಿಎಂಕೆ ಶಾಸಕಾಂಗ ಪಕ್ಷದ ನಾಯಕರಾಗಿ ಕೆ. ಪಳನಿಸ್ವಾಮಿ ಅವರನ್ನು ನೇಮಕವನ್ನು ಹಂಗಾಮಿ ಓ.ಪನ್ನೀರ್‌ಸೆಲ್ವಂ ನೇತೃತ್ವದ ಬಣವು ತಿರಸ್ಕರಿಸಿದೆ. ಯಾರನ್ನು ಕೂಡಾ ಆಯ್ಕೆ ಮಾಡುವ ಅಧಿಕಾರ ಯಾರಿಗೂ ಇಲ್ಲ ಎಂದು ಪನ್ನೀರ್‌ಸೆಲ್ವಂ ಅವರ ಪ್ರಬಲ ಬೆಂಬಲಿಗರಾದ ಶಿಕ್ಷಣ ಸಚಿವ ಪಾಂಡ್ಯರಾಜನ್ ಗುಡುಗಿದ್ದಾರೆ.

ಸುಪ್ರೀಂಕೋರ್ಟ್ ತೀರ್ಪಿನ ಕೆಲವೇ ನಿಮಿಷಗಳಲ್ಲಿ ಶಶಿಕಲಾರನ್ನು ಸಮರ್ಥಿಸಿರುವ ಎಡಿಎಂಕೆ ನಾಯಕತ್ವವು, ದಿವಂಗತ ಜಯಲಲಿತಾ ಅವರ ಮೇಲಿನ ಹೊರೆಯನ್ನು ಶಶಿಕಲಾ ಸದಾಕಾಲ ಹೊತ್ತುಕೊಂಡೇ ಸಾಗಿದ್ದರು. ಈಗಲೂ ಅದನ್ನೇ ಮಾಡುತ್ತಿದ್ದಾರೆಂದು ಪಕ್ಷದ ಅಧಿಕೃತ ಟ್ವೀಟರ್ ಹೇಳಿಕೆಯೊಂದು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X