ನಾಳೆ ಶಶಿಕಲಾ ನ್ಯಾಯಾಲಯಕ್ಕೆಶರಣು ?

ಚೆನ್ನೈ, ಫೆ.14: ಸುಪ್ರೀಂ ಕೋರ್ಟ್ನಿಂದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನಾಲ್ಕು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ತಮಿಳುನಾಡಿನ ಎಐಎಡಿಎಂಕೆಯ ಅಧಿನಾಯಕಿ ಶಶಿಕಲಾ ನಟರಾಜನ್ ಅವರು ಬುಧವಾರ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಶರಣಾಗುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ,
ಶಶಿಕಲಾ ಹಾಗೂ ಸಂಬಂಧಿಗಳಾದ ಇಳವರಸಿ ಮತ್ತು ಸುಧಾಕರನ್ ಅವರಿಗೆ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಶರಣಾಗುವಂತೆ ಸುಪ್ರೀಂ ಕೋರ್ಟ್ ಇಂದು ಆದೇಶ ನೀಡಿತ್ತು.
ಶಶಿಕಲಾ ಅವರು ಬುಧವಾರ ಸಂಜೆ ನ್ಯಾಯಾಲಯಕ್ಕೆ ಶರಣಾಗಲಿದ್ದಾರೆ ಎಂದು ಶಶಿಕಲಾ ಅವರ ಆಪ್ತ ಮೂಲಗಳು ತಿಳಿಸಿವೆ.ಅವರ ಆರೋಗ್ಯ ತಪಾಸಣೆ ನಡೆಸಿದ ಬಳಿಕ ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಗುವುದು ಎಂದು ತಿಳಿದು ಬಂದಿದೆ.
Next Story





