Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿದಾ್ಯರ್ಥಿಗಳ ‘ಆರ್‌ಟಿಇ’ಗೆ...

ವಿದಾ್ಯರ್ಥಿಗಳ ‘ಆರ್‌ಟಿಇ’ಗೆ ಸಾಫ್ಟ್‌ವೇರ್ ಕಾಟ!

ಹೆತ್ತವರಿಗೆ ಕಾಡಿದ ಆತಂಕ

ವಾರ್ತಾಭಾರತಿವಾರ್ತಾಭಾರತಿ14 Feb 2017 11:57 PM IST
share
ವಿದಾ್ಯರ್ಥಿಗಳ ‘ಆರ್‌ಟಿಇ’ಗೆ ಸಾಫ್ಟ್‌ವೇರ್ ಕಾಟ!

ಮಂಗಳೂರು, ಫೆ.14: ಎಲ್ಲರಿಗೂ ಶಿಕ್ಷಣ ಲಭ್ಯವಾಗಬೇಕು ಎಂಬ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್‌ನ ಆದೇಶದ ಮೇರೆಗೆ ಜಾರಿಗೊಳಿಸಲಾಗುತ್ತಿರುವ ‘ಆರ್‌ಟಿಇ’ಸೀಟುಗಳಿಗೆ ಇದೀಗ ‘ಸಾಫ್ಟ್‌ವೇರ್’ ಕಾಟ ಶುರುವಾಗಿದೆ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.

 2017-18ನೆ ಸಾಲಿನ ಖಾಸಗಿ ಆಂಗ್ಲಮಾಧ್ಯಮ ಶಾಲೆಗಳಲ್ಲಿ ಆರ್‌ಟಿಇ ಕಾಯ್ದೆಯಡಿ ಎಲ್‌ಕೆಜಿ/1ನೆ ತರಗತಿಗೆ ಪ್ರವೇಶ ಪಡೆಯಲು ಜ.20ರಿಂದ ಅರ್ಜಿ ಆಹ್ವಾನಿಸಲಾಗುತ್ತದೆ ಎಂದು ಸುದ್ದಿಯಾಗಿತ್ತು. ಆ ಬಳಿಕ ಫೆ.15ರಿಂದ ಅರ್ಜಿ ಸ್ವೀಕರಿಸಲಾಗುತ್ತಿದೆ ಎಂದು ಹೇಳಲಾಗುತ್ತಿತ್ತು. ಆದರೆ ಈ ಬಗ್ಗೆ ಡಿಡಿಪಿಐ ಕಚೇರಿಯಿಂದ ಈವರೆಗೆ ಯಾವುದೇ ಮಾಹಿತಿ ಪ್ರಕಟಿಸಿಲ್ಲ. ಆದರೆ ಇದೀಗ ತಿಳಿದು ಬಂದ ಮಾಹಿತಿ ಪ್ರಕಾರ ‘ಆರ್‌ಟಿಇ’ಗೆ ಸಾಫ್ಟ್‌ವೇರ್ ಕಾಟ ಶುರುವಾಗಿದೆ. ಆ ಹಿನ್ನೆಲೆಯಲ್ಲಿ ಡಿಡಿಪಿಐ ಕಚೇರಿಯನ್ನು ‘ವಾರ್ತಾಭಾರತಿ’ ಪ್ರಶ್ನಿಸಿದಾಗ ‘ಹೌದು ಸಾಫ್ಟ್‌ವೇರ್ ಸಮಸ್ಯೆ ಕಾಡಿದೆ. ಶಿಕ್ಷಣ ಇಲಾಖೆಯಿಂದ ನಮಗೆ ಯಾವುದೇ ಮಾಹಿತಿ ಬಂದಿಲ್ಲ’ಎಂಬ ಉತ್ತರ ಲಭಿಸಿದೆ.

ಆರ್‌ಟಿಇ ಸೀಟಿಗೆ ಸಂಬಂಧಿಸಿ ಶಿಕ್ಷಣ ಇಲಾಖೆ ವರ್ಷಂಪ್ರತಿ ನಿಯಮಾವಳಿಗಳನ್ನು ಬದಲಾಯಿಸುತ್ತಲೇ ಇದೆ. ಇದರಿಂದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಶಿಕ್ಷಣ ಪಡೆಯಲು ಆರ್ಥಿಕವಾಗಿ ಹಿಂದುಳಿದ ಮಕ್ಕಳ ಹೆತ್ತವರ ಕನಸು ನುಚ್ಚುನೂರಾಗುತ್ತಿವೆ. ಈ ಮಧ್ಯೆ ಶಿಕ್ಷಣ ಇಲಾಖೆಯು ಕೊನೆಯ ಕ್ಷಣದಲ್ಲಿ ಶಾಲೆಗಳಲ್ಲಿ ಲಭ್ಯವಿರುವ ಸೀಟುಗಳ ಪಟ್ಟಿಯನ್ನು ಬಿಡುಗಡೆಗೊಳಿಸುವುದರಿಂದಲೂ ಹೆತ್ತವರು ಅತಂತ್ರರಾಗುತ್ತಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಯ ಜೊತೆ ಇಲಾಖಾಧಿಕಾರಿಗಳು ಕೈ ಜೋಡಿಸುವುದರಿಂದಲೇ ಪಟ್ಟಿಯನ್ನು ಬಿಡುಗಡೆ ಮಾಡಲು ತಡಮಾಡಲಾಗುತ್ತದೆ ಎಂಬ ಮಾತು ಕೇಳಿ ಬರುತ್ತಿದೆ.

ಪ್ರತಿ ವರ್ಷ ಆರ್‌ಟಿಇ ಸೀಟು ಪಡೆಯಲು ‘ಆನ್‌ಲೈನ್’ನ ಮೊರೆ ಹೋಗಲಾಗುತ್ತದೆ. ಗ್ರಾಮಾಂತರ ಪ್ರದೇಶದ ಮಕ್ಕಳಿಗೆ, ಅವರ ಹೆತ್ತವರಿಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ಇರುವುದಿಲ್ಲ. ಆದರೂ ಕೂಡ ಹೆತ್ತವರ ಮತ್ತು ಮಕ್ಕಳ ಆಧಾರ ಕಾರ್ಡ್, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಮಕ್ಕಳ ಜನನ ಪ್ರಮಾಣ ಪತ್ರ, ಮಕ್ಕಳ ಫೊಟೋ ಇತ್ಯಾದಿ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ಬಕಪಕ್ಷಿಯಂತೆ ಕಾದ ಹೆತ್ತವರಿಗೆ ಇದೀಗ ‘ಸಾಫ್ಟ್‌ವೇರ್’ ಕಾಟ ಸಮಸ್ಯೆಯಾಗಿ ಪರಿಣಮಿಸಿದೆ. ಅಲ್ಲದೆ ಆತಂಕವೂ ಕಾಡಿದೆ.

ಸಾಮಾನ್ಯವಾಗಿ ಮಕ್ಕಳ ಹೆತ್ತವರು ಎರಡ್ಮೂರು ಶಾಲೆಗಳಲ್ಲಿ ಪ್ರವೇಶ ಪಡೆಯಲು ಅರ್ಜಿ ಸಲ್ಲಿಸಿರುತ್ತಾರೆ. ಆದರೆ ನಿರ್ದಿಷ್ಟ ಶಾಲೆಗೆ ಪ್ರವೇಶ ಪಡೆಯಲು ಆಯ್ಕೆಯಾದರೂ ಕೂಡ ನಾನಾ ಕಾರಣ ನೀಡಿ ಸೀಟು ನೀಡಲು ಹಿಂದೇಟು ಹಾಕುತ್ತಿವೆ. ಕಳೆದ ಶೈಕ್ಷಣಿಕ ವರ್ಷದಲ್ಲಿ ಇಂತಹ ಹಲವು ಪ್ರಕರಣಗಳು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ವರ್ಷ ದ.ಕ.ಜಿಲ್ಲೆಗೆ 2,274 ಸೀಟುಗಳು ಲಭ್ಯವಾಗಿತ್ತು. ಅದಕ್ಕಾಗಿ 3,300ಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿತ್ತು. ಆದರೆ ಪರಿಶೀಲನೆಯ ಬಳಿಕ ಕೇವಲ 1,840 ಮಂದಿಗೆ ಆರ್‌ಟಿಇ ಸೀಟು ಸಿಕ್ಕಿತ್ತು. ಅಂದರೆ, ಸುಮಾರು 434 ಮಂದಿಯ ಆರ್‌ಟಿಇ ಸೀಟು ಖಾಲಿ ಬಿದ್ದಿತ್ತು. ಜನವರಿ ತಿಂಗಳಲ್ಲೇ ಯಾವ ಶಾಲೆಗೆ ಎಷ್ಟು ಸೀಟುಗಳನ್ನು ಕಾಯ್ದಿರಿಸಲಾಗಿದೆ ಎಂಬುದನ್ನು ಬಹಿರಂಗಪಡಿಸಿದರೆ ಖಾಲಿಯಿರುವ ಸೀಟುಗಳನ್ನು ತುಂಬಲು ಸಮಯವಕಾಶವಿರುತ್ತದೆ. ಆದರೆ ಶಿಕ್ಷಣ ಇಲಾಖೆ ಉದ್ದೇಶಪೂರ್ವಕವಾಗಿ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಹೇಳಲಾಗುತ್ತದೆ.

ಒಟ್ಟಿನಲ್ಲಿ ಫೆ.15ರಿಂದ ಆರ್‌ಟಿಇ ಸೀಟಿಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದ ವಿದ್ಯಾರ್ಥಿಗಳ ಹೆತ್ತವರಿಗೆ ಇದೀಗ ಆತಂಕ ಕಾಡಿದೆ.

**ಶಿಕ್ಷಣ ಇಲಾಖೆಯು ಕೊನೆಯ ಕ್ಷಣದಲ್ಲಿ ಆರ್‌ಟಿಇ ಸೀಟುಗಳನ್ನು ಘೋಷಣೆ ಮಾಡುವುದರಿಂದ ಇಂತಹ ಸಮಸ್ಯೆಯನ್ನು ಸಕಾಲಕ್ಕೆ ಪರಿಹರಿಸಲು ವಿಫಲವಾಗುತ್ತದೆ. ಇದರ ಲಾಭವನ್ನು ಖಾಸಗಿ ಶಿಕ್ಷಣ ಸಂಸ್ಥೆ ಪಡೆಯುತ್ತದೆ.

              ಇಸ್ಮಾಯೀಲ್ ಶಾಫಿ ಬಬ್ಬುಕಟ್ಟೆ, ಆರ್‌ಟಿಇ ಕಾರ್ಯಕರ್ತ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X