Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳದಲ್ಲಿ ಹೆಣ್ಣುಮಕ್ಕಳ ಸಂಖ್ಯೆಯಲ್ಲಿ...

ಕೇರಳದಲ್ಲಿ ಹೆಣ್ಣುಮಕ್ಕಳ ಸಂಖ್ಯೆಯಲ್ಲಿ ಇಳಿಕೆ

ವಾರ್ತಾಭಾರತಿವಾರ್ತಾಭಾರತಿ15 Feb 2017 12:04 PM IST
share
ಕೇರಳದಲ್ಲಿ ಹೆಣ್ಣುಮಕ್ಕಳ ಸಂಖ್ಯೆಯಲ್ಲಿ ಇಳಿಕೆ

ತೃಶೂರ್,ಫೆ. 15: ಕೇರಳದಲ್ಲಿ ಹೆಣ್ಣುಮಕ್ಕಳ ಸಂಖ್ಯೆ ಇಳಿಮುಖವಾಗುತ್ತಿದೆ. ಭ್ರೂಣಹತ್ಯೆ ಮತ್ತು ಲಿಂಗ ನಿರ್ಣಯಗಳು ಹೆಚ್ಚಳಗೊಳ್ಳುತ್ತಿರುವುದು ಇದಕ್ಕೆ ಕಾರಣವೆಂದು ಹೇಳಲಾಗಿದೆ. ಆರುವರ್ಷದ ಲೆಕ್ಕ ಪರಿಶೀಲಿಸಿದಾಗ ಗಂಡು-ಹೆಣ್ಣು ಲಿಂಗಾನುಪಾತದಲ್ಲಿ ಇಳಿಕೆ ಕಂಡು ಬಂದಿದೆ. ಸ್ವಯಂಸೇವಾ ಸಂಘಟನೆಗಳು ಮತ್ತು ಸರಕಾರಿ ಏಜೆನ್ಸಿಗಳು ನಡೆಸಿದ ಅಧ್ಯಯನದಲ್ಲಿ ಈ ವಿಷಯ ಬೆಳಕಿಗೆ ಬಂದಿದೆ.

ಸ್ಕಾನಿಂಗ್ ಸೆಂಟರ್‌ಗಳು, ಆಸ್ಪತ್ರೆಗಳು ಮುಂತಾದೆಡೆ ಲಿಂಗನಿರ್ಣಯ ಮಾಡುವುದು ಮತ್ತು ಗರ್ಭಪಾತ ಮಾಡಿಸುವುದು ಹೆಣ್ಣುಮಕ್ಕಳ ಜನನ ಸಂಖ್ಯೆ ಕಡಿಮೆಗೊಳ್ಳಲು ಕಾರಣವೆಂದು ಅಧ್ಯಯನ ನಡೆಸಿದ ಏಜೆನ್ಸಿಗಳು ಬಹಿರಂಗಪಡಿಸಿವೆ.

ರಾಜ್ಯದಲ್ಲಿ ತೃಶೂರಿನಲ್ಲಿ ಹೆಣ್ಣುಮಕ್ಕಳ ಜನನ ಅನುಪಾತದಲ್ಲಿ ಗಂಭೀರ ಇಳಿಕೆಯಾಗಿದೆ. 2001ರ ಜನಗಣತಿ  ಪ್ರಕಾರ ಸಾವಿರ ಗಂಡು ಮಕ್ಕಳಿಗೆ 958 ಹೆಣ್ಣುಮಕ್ಕಳಂತೆ ಇದ್ದರು. 2011ರಲ್ಲಿ ಇದು 950ಕ್ಕೆ ಇಳಿಕೆಯಾಗಿದೆ. ಈಗ ಅದಕ್ಕಿಂತಲೂ ಕಡಿಮೆಯಾಗಿದೆ ಎಂದು ಅನಧಿಕೃತ ಲೆಕ್ಕಗಳು ತಿಳಿಸಿವೆ. ಆದ್ದರಿಂದ ಕೇಂದ್ರಸರಕಾರದ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯನ್ನು ತೃಶೂರಿನಲ್ಲಿ ಜಾರಿಗೊಳಿಸಲಾಗುತ್ತದೆ ಎಂದು ಸಂಬಂಧಪಟ್ಟವರು ಹೇಳುತ್ತಿದ್ದಾರೆ.

ವಾರ್ಷಿಕ ಸಮೀಕ್ಷೆಗಳಿಂದ ಸಂಗ್ರಹಿಸುವ ವಿವರಗಳ ಆಧಾರದಲ್ಲಿ ಗಂಡು-ಹೆಣ್ಣು ಅನುಪಾತಗಳನ್ನು ಅಧಿಕೃತವಾಗಿ ಲೆಕ್ಕಮಾಡಲಾಗುತ್ತಿದೆ. ಜನಗಣತಿ ಮತ್ತು ಐಸಿಡಿಎಸ್ ವಾರ್ಷಿಕ ಸಮೀಕ್ಷೆಯನ್ನು ಹೋಲಿಸಿ ನೋಡಿದಾಗ ಹೆಣ್ಣುಮಕ್ಕಳ ಜನನದಲ್ಲಿ ಇಳಿಕೆ ಗೊತ್ತಾಗುತ್ತದೆ. ಜನಗಣತಿ ಪ್ರಕಾರ ರಾಜ್ಯದಲ್ಲಿ ಲಿಂಗಾನುಪಾತ 964 ಆಗಿದ್ದರೆ. ಐಸಿಡಿಎಸ್ ಸಮೀಕ್ಷೆ ಪ್ರಕಾರ 961 ಆಗಿದೆ. ಅನಧಿಕೃತ ಸಮೀಕ್ಷೆಗಳಲ್ಲಿ ಈ ಅನುಪಾತ ಇನ್ನಷ್ಟು ಕಡಿಮೆಯಾಗಿದೆ.

ತೃಶೂರ್ ಜಿಲ್ಲೆಯ ಕೆಲವು ಆಸ್ಪತ್ರೆಗಳಲ್ಲಿ ಸ್ಕಾನಿಂಗ್ ಕೇಂದ್ರಗಳಲ್ಲಿ ಲಿಂಗನಿರ್ಣಯ ಗರ್ಭಪಾತ ವ್ಯಾಪಕವಾಗಿ ನಡೆಯುತ್ತಿದೆ ಎನ್ನುವ ಆಕ್ಷೇಪಗಳಿವೆ. ತಿಂಗಳ ಹಿಂದೆಯಷ್ಟೇ ಇಲ್ಲಿನ ಇಂತಹದೊಂದು ಸಂಸ್ಥೆಯ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗಿದೆ.

ಸಮೀಕ್ಷೆಯ ವರದಿಗಳ ಆಧಾರದಲ್ಲಿ ಸ್ಕಾನಿಂಗ್ ಸೆಂಟರ್‌ಗಳು, ಬಂಜೆತನಕ್ಕೆ ಚಿಕಿತ್ಸೆ ಕೇಂದ್ರಗಳನ್ನು ನಿಯಂತ್ರಿಸಲು ಮತ್ತು ಕ್ರಮಕೈಗೊಳ್ಳಲು ಕೇರಳ ಆರೋಗ್ಯಸಚಿವಾಲಯ ತೀರ್ಮಾನಿಸಿದೆ. ಈ ಕಾರಣಗಳಿಂದಾಗಿ ಸ್ಕಾನಿಂಗ್ ಸೆಂಟರ್‌ಗಳ ಮೇಲೆ ಕಠಿಣ ನಿಗಾವಿರಿಸಲಾಗುತ್ತಿದೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X