Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಾವಿ ವಧು ಆತ್ಮಹತ್ಯೆಯ ಬೆನ್ನಲ್ಲೇ ವರನೂ...

ಭಾವಿ ವಧು ಆತ್ಮಹತ್ಯೆಯ ಬೆನ್ನಲ್ಲೇ ವರನೂ ಆತ್ಮಹತ್ಯೆ

ವಾರ್ತಾಭಾರತಿವಾರ್ತಾಭಾರತಿ15 Feb 2017 7:06 PM IST
share
ಭಾವಿ ವಧು ಆತ್ಮಹತ್ಯೆಯ ಬೆನ್ನಲ್ಲೇ ವರನೂ ಆತ್ಮಹತ್ಯೆ

  ಕಾಸರಗೋಡು/ ಮಂಗಳೂರು, ಫೆ.15: ಭಾವೀ ವಧು ಆತ್ಮಹತ್ಯೆಗೈದ ವಾರದ ಬಳಿಕ ವರನೂ ಜಾಹೀರಾತು ಫಲಕಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡಿನಲ್ಲಿ ಬುಧವಾರ ನಡೆದಿದೆ.

ಮಂಗಳೂರಿನ ನಾಗುರಿ ಸಮೀಪದ ಕೃಷ್ಣ ಎಂಬವರ ಮಗಳು ನಂದಿತಾ (26) ಮತ್ತು ಕಾಸರಗೋಡು ದೇಳಿ ಆರಾಮಂಗಾನದ ಚಂದ್ರಶೇಖರ (37) ಎಂಬವರ ವಿವಾಹವನ್ನು ಫೆ.13ರಂದು ನಡೆಸಲು ನಿರ್ಧರಿಸಲಾಗಿತ್ತು.

ಈ ಮಧ್ಯೆ ಫೆ.8ರಂದು ನಂದಿತಾ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡರೆ, ಚಂದ್ರಶೇಖರ ಫೆ.15ರಂದು ಕಾಸರಗೋಡು ಜಂಕ್ಷನ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಫೆ.8ರಂದು ಮಧ್ಯಾಹ್ನ 1:05ರಿಂದ ಸಂಜೆ 4:10ರ ಮಧ್ಯೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಟೈಲರಿಂಗ್ ವೃತ್ತಿಯಲ್ಲಿದ್ದ ನಂದಿತಾ ಆತ್ಮಹತ್ಯೆಗೈದಿದ್ದರು. ಆತ್ಮಹತ್ಯೆಗೆ ಸ್ಪಷ್ಟಕಾರಣ ತಿಳಿದು ಬಂದಿಲ್ಲವಾದರೂ ಭಾವೀ ವರ ಮತ್ತಾತನ ಮನೆಯವರು ನೀಡಿದ ಮಾನಸಿಕ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದೆ. ಈ ಬಗ್ಗೆ ನಂದಿತಾಳ ತಂದೆ ಕೃಷ್ಣ ಆರೋಪಿ ಚಂದ್ರಶೇಖರ ಮತ್ತಾತನ ಮನೆಯವರ ವಿರುದ್ಧ ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದಾರೆ.

ಈ ಮಧ್ಯೆ ಭಾವೀ ವರ ಚಂದ್ರಶೇಖರನು ಚಳಿಯಂಗೋಡು ಬಳಿ ಜಾಹೀರಾತು ಬೋರ್ಡ್‌ನಲ್ಲಿ ನೇಣುಬಿಗಿದು ಆತ್ಮಹತ್ಯೆಗೈದಿರುವುದು ್ರಕರಣಕ್ಕೆ ವಿಚಿತ್ರ ತಿರುವು ಸಿಕ್ಕಿದೆ.

  ಮಂಗಳವಾರ ರಾತ್ರಿ ಚೆಮ್ನಾಡ್‌ಗೆ ಹೋಗಿ ಬರುವೆ ಎಂದು ಹೇಳಿ ಮನೆಯಿಂದ ಹೊರಟಿದ್ದ ಚಂದ್ರಶೇಖರ ಬಳಿಕ ಮನೆಗೆ ಮರಳಿರಲಿಲ್ಲ. ಮನೆಯವರು ಮೊಬೈಲ್ ಸಂಪರ್ಕಿಸಿದರೂ ಸ್ವಿಚ್ಡ್ಆಫ್ ಆಗಿತ್ತು. ಈ ನಡುವೆ ಬುಧವಾರ ಬೆಳಗ್ಗೆ ಚಲಿಯಂಗೋಡು ಜಂಕ್ಷನ್ ಬಳಿ ಜಾಹೀರಾತು ಫಲಕಕ್ಕೆ ನೇಣುಬಿಗಿದು ಯುವಕನೋರ್ವ ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದ್ದು, ಮನೆಯವರು ಆಗಮಿಸಿ ಗುರುತು ಪತ್ತೆ ಹಚ್ಚಿದರು. ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ನಂದಿತಾ ಆತ್ಮಹತ್ಯೆಯ ಬಳಿಕ ಆಕೆಯ ಹೆತ್ತವರ ಪರವಾಗಿ ಓಡಾಡಿಕೊಂಡಿದ್ದ ಮಾಜಿ ಕಾರ್ಪೊರೇಟರೊಬ್ಬರ ವಿರುದ್ಧ ಚಂದ್ರಶೇಖರನ ಮನೆಯವರು ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X