Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಲಾಸಿ ಮದುವೆಗಳಿಗೆ ಕರಡಿ ಬಿಡಲು...

ವಿಲಾಸಿ ಮದುವೆಗಳಿಗೆ ಕರಡಿ ಬಿಡಲು ಬರುತ್ತಿದ್ದಾರೆ ಹಾರ್ಲೆ ಡೇವಿಡ್ಸನ್ ಬಿಡುವ ಮಹಿಳಾ ಸಂಸದೆ !

ಏನು ಮಾಡಲಿದ್ದಾರೆ ಈಕೆ ?

ವಾರ್ತಾಭಾರತಿವಾರ್ತಾಭಾರತಿ16 Feb 2017 12:36 PM IST
share
ವಿಲಾಸಿ ಮದುವೆಗಳಿಗೆ ಕರಡಿ ಬಿಡಲು ಬರುತ್ತಿದ್ದಾರೆ  ಹಾರ್ಲೆ ಡೇವಿಡ್ಸನ್ ಬಿಡುವ ಮಹಿಳಾ ಸಂಸದೆ !

ಹೊಸದಿಲ್ಲಿ,ಫೆ.14 : ಸಂಸತ್ತಿಗೆ ತಮ್ಮ ಹಾರ್ಲೆ ಡೇವಿಡ್ಸನ್ ಮೋಟಾರ್ ಸೈಕಲ್ ನಲ್ಲಿ ಬರುತ್ತಿರುವ ಹಾಗೂ ಇದೇ ಕಾರಣಕ್ಕೆ ಎಲ್ಲರ ಗಮನ ಸೆಳೆಯುತ್ತಿರುವ ಕಾಂಗ್ರೆಸ್ ಪಕ್ಷದ ಬಿಹಾರದ ಸುಪೌಲ್ ಕ್ಷೇತ್ರದ ಸಂಸದೆ ರಂಜಿತ್ ರಾಜನ್ ಇದೀಗ ಮತ್ತೊಂದು ವಿಷಯಕ್ಕೆ ಸುದ್ದಿಯಾಗುತ್ತಿದ್ದಾರೆ. ವಿಲಾಸಿ ಮದುವೆಗಳಿಗೆ ಕಡಿವಾಣ ಹಾಕುವ ಮಸೂದೆಯೊಂದನ್ನು ಅವರು ಲೋಕಸಭೆಯ ಮುಂದೆ ಮಂಡಿಸಿದ್ದಾರೆ.

ವಿವಾಹವೊಂದಕ್ಕೆ ಆಗಮಿಸುವ ಅತಿಥಿಗಳ ಸಂಖ್ಯೆ ಹಾಗೂ ಅಲ್ಲಿ ಅತಿಥಿ ಸತ್ಕಾರದ ಭಾಗವಾಗಿ ಅವರಿಗೆ ಉಣಬಡಿಸಲಾಗುವ ಭಕ್ಷ್ಯಗಳ ಸಂಖ್ಯೆಗೆ ಕಡಿವಾಣ ಹಾಕಲು ಈ ಮಸೂದೆ ಉದ್ದೇಶಿಸಿದೆಯಲ್ಲದೆ ತಮ್ಮ ಮಕ್ಕಳ ವಿವಾಹಕ್ಕಾಗಿ ರೂ 5 ಲಕ್ಷಕ್ಕಿಂತ ಹೆಚ್ಚು ಖರ್ಚು ಮಾಡುವವರು ಅದರ ಶೇ 10ರಷ್ಟು ಮೊತ್ತವನ್ನು ಬಡ ಹೆಣ್ಣು ಮಕ್ಕಳ ವಿವಾಹಕ್ಕೂ ಒದಗಿಸಬೇಕೆಂದು ಈ ಮಸೂದೆ ತಿಳಿಸುತ್ತದೆ.

ಸಂಸದ ಪಪ್ಪು ಯಾದವ್ ಅವರ ಪತ್ನಿಯಾಗಿರುವ ರಂಜಿತ್ ರಾಜನ್ ಅವರು ಮಂಡಿಸಿದ ದಿ ಮ್ಯಾರೇಜಸ್ (ಕಂಪಲ್ಸರಿ ರಿಜಿಸ್ಟ್ರೇಶನ್ ಎಂಡ್ ಪ್ರಿವೆನ್ಶನ್ ಆಫ್ ವೇಸ್ಟ್ ಫುಲ್ ಎಕ್ಸ್ ಪೆಂಡಿಚರ್ )ಬಿಲ್ 2016 ಇದನ್ನು ಮುಂದಿನ ಲೋಕಸಭಾ ಅಧಿವೇಶನದಲ್ಲಿ ಖಾಸಗಿ ಸದಸ್ಯರ ಮಸೂದೆಯೆಂದು ಪರಿಗಣಿಸಲ್ಪಟ್ಟು ಚರ್ಚೆಗೆ ಬರಲಿದೆ.

ವಿವಾಹಗಳನ್ನು ಸರಳವಾಗಿಸುವ ನಿಟ್ಟಿನಲ್ಲಿ ಈ ಮಸೂದೆ ಮಹತ್ವದ ಹೆಜ್ಜೆಯಾಗಬಹುದು, ಎಂದು ಹೇಳುವ ರಂಜೀತ್ ರಾಜನ್ ರೂ. 5 ಲಕ್ಷಕ್ಕಿಂತ ಹೆಚ್ಚಿನ ಮೊತ್ತವನ್ನು ಮದುವೆಗೆ ವಿನಿಯೋಗಿಸುವವರು ಅದರ ಶೇ 10ರಷ್ಟನ್ನು ಸರಕಾರ ರಚಿಸುವ ಕಲ್ಯಾಣ ನಿಧಿಗೆ ಈ ಪ್ರಸ್ತಾವಿತ ಮಸೂದೆಯನ್ವಯ ನೀಡಬೇಕಾಗುತ್ತದೆ.

ಈ ಮಸೂದೆ ಜಾರಿಯಾಗಿದ್ದೇ ಆದಲ್ಲಿ ಎಲ್ಲಾ ವಿವಾಹಗಳು ನಡೆದ 60 ದಿನಗಳೊಳಗಾಗಿ ಅವುಗಳನ್ನು ನೋಂದಣಿಗೊಳಿಸಬೇಕಾಗುತ್ತದೆ ಹಾಗೂ ಸರಕಾರ ವಿವಾಹವೊಂದಕ್ಕೆ ಆಗಮಿಸುವ ಅತಿಥಿಗಳ ಸಂಖ್ಯೆ ಹಾಗೂ ಅಲ್ಲಿ ಅತಿಥಿಗಳಿಗೆ ನೀಡಲಾಗುವ ಭಕ್ಷ್ಯಗಳ ಸಂಖ್ಯೆಗೆ ಒಂದು ಮಿತಿಯನ್ನು ನಿಗದಿ ಪಡಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X