Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ನಾಯಿ ಹೇಳಿಕೆ ’ವಿರುದ್ಧ ಅರ್ಜಿ:ಸಚಿವ...

‘ನಾಯಿ ಹೇಳಿಕೆ ’ವಿರುದ್ಧ ಅರ್ಜಿ:ಸಚಿವ ಸಿಂಗ್‌ಗೆ ನ್ಯಾಯಾಲಯದ ನೋಟಿಸ್

ವಾರ್ತಾಭಾರತಿವಾರ್ತಾಭಾರತಿ16 Feb 2017 7:32 PM IST
share
‘ನಾಯಿ ಹೇಳಿಕೆ ’ವಿರುದ್ಧ ಅರ್ಜಿ:ಸಚಿವ ಸಿಂಗ್‌ಗೆ ನ್ಯಾಯಾಲಯದ ನೋಟಿಸ್

ಹೊಸದಿಲ್ಲಿ,ಫೆ.16: ಹರ್ಯಾಣದಲ್ಲಿ ಇಬ್ಬರು ದಲಿತ ಮಕ್ಕಳ ಸಜೀವ ದಹನದ ಬಳಿಕ ‘ನಾಯಿ ಹೇಳಿಕೆ ’ ನೀಡಿದ್ದಕ್ಕಾಗಿ ಸಹಾಯಕ ವಿದೇಶಾಂಗ ವ್ಯವಹಾರಗಳ ಸಚಿವ ವಿ.ಕೆ.ಸಿಂಗ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿರುವ ಇಲ್ಲಿಯ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ಸಚಿವರಿಗೆ ನೋಟಿಸ್ ಹೊರಡಿಸಿದೆ.

2015,ಅಕ್ಟೋಬರ್‌ನಲ್ಲಿ ಹರ್ಯಾಣದ ಫರೀದಾಬಾದ್‌ನಲ್ಲಿ ದಲಿತ ಬಾಲಕರಿಬ್ಬರ ಸಜೀವ ದಹನ ಘಟನೆಗೆ ಸಂಬಂಧಿಸಿದಂತೆ ಸಿಂಗ್ ಅವರು, ಯಾರಾದರೂ ನಾಯಿಗೆ ಕಲ್ಲು ಹೊಡೆದರೆ ಸರಕಾರವನ್ನು ದೂರುವಂತಿಲ್ಲ ಎಂದು ಹೇಳುವ ಮೂಲಕ ವಿವಾದವನ್ನು ಸೃಷ್ಟಿಸಿದ್ದರು.

ತನ್ನ ಕ್ರಿಮಿನಲ್ ದೂರನ್ನು ವಜಾಗೊಳಿಸಿದ್ದ ಕೆಳ ನ್ಯಾಯಾಲಯದ ನಿರ್ಧಾರವನ್ನು ಪ್ರಶ್ನಿಸಿರುವ ಪುನರ್‌ಪರೀಶೀಲನಾ ಅರ್ಜಿ ಪ್ರತಿಯೊಂದನ್ನು ಸಚಿವ ಸಿಂಗ್ ಅವರಿಗೆ ಒದಗಿಸುವಂತೆ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಎಸ್.ಕೆ.ಮಲ್ಹೋತ್ರಾ ಅವರು ಅರ್ಜಿದಾರರಾದ ನ್ಯಾಯವಾದಿ ಸತ್ಯಪ್ರಕಾಶ ಗೌತಮ್ ಅವರಿಗೆ ಸೂಚಿಸಿದರು. ಪುನರ್ ಪರಿಶೀಲನಾ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಲಯವು ಈ ಮೊದಲು ಸಿಂಗ್ ಅವರಿಗೆ ನೋಟಿಸ್‌ನ್ನು ಹೊರಡಿಸಿತ್ತು.

  2015,ಅ.21ರಂದು ಸಿಂಗ್ ಅವರು ನೀಡಿದ್ದ ಹೇಳಿಕೆಯಿಂದ ಯಾವುದೇ ಸಂಜ್ಞೇಯ ಅಪರಾಧವನ್ನು ರೂಪಿಸಲು ಸಾಧ್ಯವಿಲ್ಲ ಎಂದು ಹೇಳಿದ್ದ ಪೊಲೀಸರು ಅರ್ಜಿಯನ್ನು ವಿರೋಧಿಸಿದ್ದರು.

ಸಿಂಗ್ ಅವರು ಇಂತಹ ಹೇಳಿಕೆಯನ್ನು ನೀಡುವ ಮೂಲಕ ದಲಿತ ಸಮುದಾಯದ ಭಾವನೆಗಳಿಗೆ ನೋವನ್ನುಂಟು ಮಾಡಿದ್ದಾರೆ ಎಂದು ಅರೋಪಿಸಿ ಗೌತಮ ಅವರು ಸಲ್ಲಿಸಿದ್ದ ದೂರು ಅರ್ಜಿಯನ್ನು ವಿಚಾರಣಾ ನ್ಯಾಯಾಲಯವು 2015,ಡಿ.7ರಂದು ವಜಾಗೊಳಿಸಿತ್ತು. ಸಚಿವರ ವಿರುದ್ಧ ಮೇಲ್ನೋಟಕ್ಕೆ ಯಾವುದೇ ಕ್ರಿಮಿನಲ್ ಅಪರಾಧ ಕಂಡುಬರುತ್ತಿಲ್ಲ ಎಂದು ಅದು ಹೇಳಿತ್ತು.

ಈ ಆದೇಶವನ್ನು ಪ್ರಶ್ನಿಸಿ ಗೌತಮ ಅವರು 2015,ಡಿಸೆಂಬರ್‌ನಲ್ಲಿ ಪುನರ್ ಪರಿಶೀಲನಾ ಅರ್ಜಿಯನ್ನು ಸಲ್ಲಿಸಿದ್ದರು. ಆರೋಪಿಯನ್ನು ರಕ್ಷಿಸಲು ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ಅವರ ವಕೀಲರ ಪಾತ್ರವನ್ನು ನಿರ್ವಹಿಸಲು ಪ್ರಯತ್ನಿಸಿದ್ದು ಸ್ಪಷ್ಟವಾಗಿದೆ. ಈ ಕಾರಣದಿಂದಾಗಿ ಅವರ ಆದೇಶವು ತಳ್ಳಿ ಹಾಕಲು ಅರ್ಹವಾಗಿದೆ ಎಂದು ಸೆಷನ್ಸ್ ನ್ಯಾಯಾಲಯವು ಹೇಳಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X