Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ​ಕಡಂಗ ಕೊಕ್ಕಂಡಬಾಣೆ ಉರೂಸ್‌ಗೆ ಇಂದು...

​ಕಡಂಗ ಕೊಕ್ಕಂಡಬಾಣೆ ಉರೂಸ್‌ಗೆ ಇಂದು ಚಾಲನೆ

ವಾರ್ತಾಭಾರತಿವಾರ್ತಾಭಾರತಿ16 Feb 2017 10:52 PM IST
share

ಮಡಿಕೇರಿ, ಫೆ.16: ವೀರಾಜಪೇಟೆ ತಾಲೂಕಿನ ಕಡಂಗ ಕೊಕ್ಕಂಡಬಾಣೆ ದರ್ಗಾ ಶರೀಫ್‌ನ ವಲಿಯುಲ್ಲಾಹಿರವರ ಹೆಸರಿನಲ್ಲಿ ಪ್ರತೀ ವರ್ಷ ಆಚರಿಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಈ ಬಾರಿ ಫೆ.17 ರಿಂದ 21 ರವರೆಗೆ ನಡೆಯಲಿದೆ.


  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉರೂಸ್ ಸಮಿತಿಯ ಸಹಕಾರ್ಯದರ್ಶಿ ಸಿ.ಎ. ಸುಬೈರ್, ಕಡಂಗ ಕೊಕ್ಕಂಡ ಬಾಣೆಯಲ್ಲಿ 5 ದಿನಗಳ ಕಾಲ ನಡೆಯುವ ಉರೂಸ್ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಫೆ.17ರಂದು ಮಧ್ಯಾಹ್ನ 3 ಗಂಟೆಗೆ ಕಡಂಗ ಮುಸ್ಲಿಮ್ ಜಮಾಅತ್ ಅಧ್ಯಕ್ಷ ಕೆ.ಎ. ಇಬ್ರಾಹೀಂ ಅವರು ಧ್ವಜಾರೋಹಣ ಮಾಡುವ ಮೂಲಕ ಉರೂಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ರಾತ್ರಿ 8:30 ಕ್ಕೆ ಉರೂಸ್‌ಗೆ ಚಾಲನೆ ನೀಡಲಾಗುವುದು. ಫೆ.18 ರಂದು ರಾತ್ರಿ ವಯನಾಡಿನ ಜಾಫರ್ ವಾಫಿ ಅವರು ಮುಖ್ಯ ಭಾಷಣ ಮಾಡಲಿದ್ದು, ಸಂಶುಲ್ ಉಲಮಾ ಇಸ್ಲಾಮಿಕ್ ಅಕಾಡಮಿ ವತಿಯಿಂದ ಬುರ್ದಾ ಮಜ್‌ಲಿಸ್ ಕಾರ್ಯಕ್ರಮ ನಡೆಯಲಿದೆ.


 ಫೆೆ.19 ಮತ್ತು 20ರಂದು ಪ್ರೌಢೋಜ್ವಲ ಪ್ರಭಾಷಕ ಇ.ಪಿ. ಅಬೂಬಕರ್ ಅಲ್ ಖಾಸಿಮಿ ಪತ್ತರಾನಪುರಂ ಅವರು ಕೌಟುಂಬಿಕ ಜೀವನ ಎಂಬ ವಿಷಯದ ಕುರಿತು ಮುಖ್ಯ ಭಾಷಣ ಮಾಡಲಿದ್ದಾರೆ. ಫೆ.21 ರಂದು ಸಂಜೆ ದಫ್ ಸಂಘದ ವತಿಯಿಂದ ದಫ್ ರಾತೀಬ್ ಕಾರ್ಯಕ್ರಮ ನಡೆಯಲಿದ್ದು, ಪ್ರಾರ್ಥನೆಯ ನಂತರ ಸಂಜೆ 4:30ಕ್ಕೆ ಸಾರ್ವಜನಿಕ ಅನ್ನದಾನ ವ್ಯವಸ್ಥೆಯನ್ನು ಕಲ್ಪಿಸಲಾಗಿದೆಯೆಂದು ಸಿ.ಎ. ಸುಬೈರ್ ತಿಳಿಸಿದ್ದಾರೆ.


 ಸೌಹಾರ್ದ ಕೇಂದ್ರವಾಗಿರುವ ಕಡಂಗ ಕೊಕ್ಕಂಡಬಾಣೆ ದರ್ಗಾ ಶರೀಫ್‌ನಲ್ಲಿ ಪ್ರತಿದಿನ ಪಾಲಚಂಡ ಕುಟುಂಬಸ್ಥರು ದೀಪ ಹಚ್ಚುವ ಸಂಪ್ರದಾಯವಿದೆ. ಎಲ್ಲ ರೀತಿಯಲ್ಲೂ ಶಾಂತಿ ಸೌಹಾರ್ದ ಹಾಗೂ ಒಗ್ಗಟ್ಟಿನ ಸಂದೇಶ ಸಾರುವ ಕಡಂಗ ಉರೂಸ್‌ನಲ್ಲಿ ಸರ್ವ ಧರ್ಮೀಯರು ಪಾಲ್ಗ್ಗೊಳ್ಳುವಂತೆ ಅವರು ಮನವಿ ಮಾಡಿದರು.


  ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಪಿ.ಎಂ. ಕುಂಞಿ ಅಬ್ದುಲ್ಲಾ, ಕಾರ್ಯದರ್ಶಿ ಪಿ.ಎ. ಅಬ್ದುರ್ರಹಮಾನ್, ಸದಸ್ಯ ಕೆ.ಎ.ಸಿದ್ದಿಖ್, ಮುಖ್ಯೋಪಾಧ್ಯಾಯ ವೈ.ಯು. ನೌಶಾದ್ ಫೈಝಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X