Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒಂದು ಕೋಟಿ ಲೀಟರ್ ಹಾಲು ಉತ್ಪಾದಿಸುವ...

ಒಂದು ಕೋಟಿ ಲೀಟರ್ ಹಾಲು ಉತ್ಪಾದಿಸುವ ಗುರಿ: ಎ.ಮಂಜು

ವಾರ್ತಾಭಾರತಿವಾರ್ತಾಭಾರತಿ17 Feb 2017 2:06 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಒಂದು ಕೋಟಿ ಲೀಟರ್ ಹಾಲು ಉತ್ಪಾದಿಸುವ ಗುರಿ: ಎ.ಮಂಜು

ಬೆಂಗಳೂರು, ಫೆ. 17: ಪ್ರತಿದಿನ ರಾಜ್ಯದಲ್ಲಿ ಒಂದು ಕೋಟಿ ಲೀಟರ್ ಹಾಲು ಉತ್ಪಾದಿಸುವ ಗುರಿ ಹೊಂದಲಾಗಿದೆ ಎಂದು ಹೈನುಗಾರಿಕೆ ಹಾಗೂ ರೇಷ್ಮೆ ಖಾತೆ ಸಚಿವ ಎ.ಮಂಜು ಇಂದಿಲ್ಲಿ ತಿಳಿಸಿದ್ದಾರೆ.

ಶುಕ್ರವಾರ ನಗರದ ಹೆಸರುಘಟ್ಟದಲ್ಲಿ ಪಶುಪಾಲನೆ ಮತ್ತು ಪಶು ವೈದ್ಯ ಇಲಾಖೆಯು ಆಯೋಜಿಸಿದ್ದ, ಜಾನುವಾರು ಸಂವರ್ಧನಾ ಕ್ಷೇತ್ರ, ರಾಜ್ಯ ವೀರ್ಯ ಸಂಕಲನಾ ಕೇಂದ್ರ ಹಾಗೂ ರಾಜ್ಯ ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಪ್ರತಿದಿನ 72 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, 9ಲಕ್ಷ ಕುಟುಂಬಗಳು ಹಾಲು ಉತ್ಪಾದನೆಯಲ್ಲಿ ತೊಡಗಿವೆ. ಮುಂಬರುವ ದಿನಗಳಲ್ಲಿ ಒಂದು ಕೋಟಿ ಲೀಟರ್ ಹಾಲು ಉತ್ಪಾದಿಸುವ ಗುರಿ ಹೊಂದಲಾಗಿದೆ. ರಾಜ್ಯದಲ್ಲಿ ಆರೂವರೆ ಕೋಟಿ ಜನರಿಗೆ ಹೈನು ಒದಗಿಸುವ ನಿಟ್ಟಿನಲ್ಲಿ 30 ರಿಂದ 60 ಲೀಟರ್ ಹಾಲು ಕರೆಯುವ ಜಾನುವಾರು ತಳಿಗಳ ಅಭಿವೃದ್ಧಿ ಮಾಡಲಾಗುವುದೆಂದು ಮಂಜು ಭರವಸೆ ನೀಡಿದರು.

  ಹೈನುಗಾರಿಕೆ ನಂಬಿದ ರೈತರು ಆರ್ಥಿಕವಾಗಿ ಸದೃಢರಾಗಲು ಸಾಧ್ಯವಾಗುತ್ತದೆ. ಪಶುಭಾಗ್ಯ ಯೋಜನೆಯಡಿ 22 ಸಾವಿರ ಪಶುಗಳನ್ನು ರೈತರಿಗೆ ನೀಡಲಾಗುತ್ತಿದ್ದು, ಈ ಪೈಕಿ 10 ಸಾವಿರ ವಿಧವಾ ಮಹಿಳೆಯರಿಗೆ ಆದ್ಯತೆ ಮೇಲೆ ನೀಡಲಾಗುವುದು ಎಂದ ಅವರು, ಮಹಿಳೆಯರು ಆರ್ಥಿಕ ಸಬಲರಾಗಿ ಸಮಾಜದ ಮುಖ್ಯವಾಹಿನಿಗೆ ಬರುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಎಚ್.ಎಫ್ ತಳಿಗಳ ವೀರ್ಯದಿಂದ ಒಂದೇ ಬಾರಿಗೆ 200 ಕರುಗಳನ್ನು ಪಡೆಯುವ ಅವಕಾಶವಿದೆ. ಇದುವರೆಗೂ ಹೊರದೇಶದಿಂದ ಆಮದಾಗುತ್ತಿದ್ದ ವೀರ್ಯವನ್ನು ನಿಲ್ಲಿಸಿ, ವೀರ್ಯ ಸಂವರ್ಧನಾ ಕೇಂದ್ರದಲ್ಲಿ ವೀರ್ಯ ಉತ್ಪಾದನೆಯನ್ನು ಹೆಚ್ಚಿಸಿ ಸ್ಥಳೀಯ ರೈತರಿಗೆ ಇದರ ಪ್ರಯೋಜನ ನೀಡಲಾಗುತ್ತಿದೆ ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಮಾಂಸಕ್ಕಾಗಿ ಬೇಡಿಕೆ ಹೆಚ್ಚುತ್ತಿದ್ದು, ಮುಂದಿನ ಬಜೆಟ್‌ನಲ್ಲಿ ರಾಷ್ಟ್ರಮಟ್ಟದಲ್ಲಿ ಮೇಕೆ ಫಾರಂ ಸ್ಥಾಪಿಸುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು. ಅದೇರೀತಿ, 160 ತಾಲೂಕುಗಳು ಬರದಿಂದ ತತ್ತರಿಸಿದ್ದು, ಜಾನುವಾರುಗಳಿಗಾಗಿ ಸರಕಾರವು ಮೇವು ಬ್ಯಾಂಕುಗಳನ್ನು ಹಾಗೂ ಗೋಶಾಲೆಗಳನ್ನು ಆರಂಭಿಸಿ ಜಾನುವಾರುಗಳಿಗೆ ಮೇವಿನ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದರು.

ಪಶುಪಾಲನೆ ಇಲಾಖೆಯ ಅಪರ ನಿರ್ದೇಶಕ ಡಾ.ಚಲುವಯ್ಯ ಮಾತನಾಡಿ, 1930ರಲ್ಲಿ ಬ್ರಿಟಿಷರು ಕುದುರೆಗಳ ಮೇವಿಗಾಗಿ ಹುಲ್ಲು ಬೆಳೆಯುತ್ತಿದ್ದ ಈ 3459 ಎಕರೆ ಪ್ರದೇಶದಲ್ಲಿಂದು ಕೇಂದ್ರ ಹಾಗೂ ರಾಜ್ಯ ಸೇರಿದಂತೆ 11 ಪಶುಪಾಲನಾ ಹಾಗೂ ಮೇವು ಅಭಿವೃದ್ಧಿ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ರಾಜ್ಯ ವೀರ್ಯ ಸಂಕಲನಾ ಕೇಂದ್ರದ ಉಪನಿರ್ದೇಶಕ ಡಾ. ಶಿವಕುಮಾರ್, ಪಶು ಸಂಗೋಪನಾ ಇಲಾಖೆ ಆಯುಕ್ತ ಎಸ್.ಶೇಖರ್ ಸೇರಿ ಪ್ರಮುಖರು ಹಾಜರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X