Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾನು ಅದೃಷ್ಟಶಾಲಿ: ದಿಲ್ಲಿ ಸರಣಿ ಸ್ಫೋಟ...

ನಾನು ಅದೃಷ್ಟಶಾಲಿ: ದಿಲ್ಲಿ ಸರಣಿ ಸ್ಫೋಟ ಪ್ರಕರಣದಲ್ಲಿ ಅನ್ಯಾಯವಾಗಿ 12 ವರ್ಷ ಜೈಲಿನಲ್ಲಿ ಕಳೆದ ರಫೀಕ್ ಶಾ ಉದ್ಗಾರ

ವಾರ್ತಾಭಾರತಿವಾರ್ತಾಭಾರತಿ17 Feb 2017 8:12 PM IST
share
ನಾನು ಅದೃಷ್ಟಶಾಲಿ: ದಿಲ್ಲಿ ಸರಣಿ ಸ್ಫೋಟ ಪ್ರಕರಣದಲ್ಲಿ ಅನ್ಯಾಯವಾಗಿ 12 ವರ್ಷ ಜೈಲಿನಲ್ಲಿ ಕಳೆದ ರಫೀಕ್ ಶಾ ಉದ್ಗಾರ

ಹೊಸದಿಲ್ಲಿ,ಫೆ.17: ನ್ಯಾಯ ಇನ್ನೂ ಉಳಿದುಕೊಂಡಿದೆ: ಇವು 2005ರ ದಿಲ್ಲಿ ಸರಣಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 12 ವರ್ಷಗಳ ಕಾಲ ಜೈಲಿನಲ್ಲಿ ಕೊಳೆತು ಗುರುವಾರ ನ್ಯಾಯಾಲಯದಿಂದ ಖುಲಾಸೆಗೊಂಡ ಬಳಿಕ ಕಾಶ್ಮೀರದ ಶ್ರೀನಗರ ನಿವಾಸಿ ಮೊಹಮ್ಮದ್ ರಫೀಕ್ ಶಾ ನ್ಯಾಯಾಧೀಶರೆದುರು ಉಸುರಿದ್ದ ಮೂರೇ ಮೂರು ಶಬ್ದಗಳು.

ಸಾಕ್ಷಾಧಾರಗಳ ಕೊರತೆಯಿಂದ ಪ್ರಕರಣದಿಂದ ಖುಲಾಸೆಗೊಂಡಿರುವ ಇಬ್ಬರು ಆರೋಪಿಗಳಲ್ಲಿ ಶಾ ಕೂಡ ಒಬ್ಬ. ಮೂರನೇ ಆರೋಪಿ ತಾರಿಕ್ ಅಹಮದ್ ದಾರ್‌ನನ್ನು ತಪಿತಸ್ಥನೆಂದು ನ್ಯಾಯಾಲಯವು ಘೊಷಿಸಿದೆ. ಅದು ಆತ ಸರಣಿ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದ ಎನ್ನುವುದಕ್ಕಲ್ಲ.....ನಿಷೇಧಿತ ಭಯೋತ್ಪಾದಕ ಗುಂಪಿನೊಂದಿಗೆ ನಂಟನ್ನು ಹೊಂದಿದ್ದಕ್ಕಾಗಿ.

ಈ ಮೂವರ ವಿರುದ್ಧ ದಿಲ್ಲಿ ಪೊಲೀಸರು 2008ರಲ್ಲಿ ರಾಷ್ಟ್ರದ ವಿರುದ್ಧ ಯುದ್ಧ, ಒಳಸಂಚು, ಶಸ್ತ್ರಾಸ್ತ್ರ ಸಂಗ್ರಹ, ಕೊಲೆ ಮತ್ತು ಕೊಲೆ ಯತ್ನ ಇತ್ಯಾದಿಗಳ ಆರೋಪ ಪಟ್ಟಿಯನ್ನು ಸಲ್ಲಿಸಿದ್ದರು.

 ಪ್ರಾಸಿಕ್ಯೂಷನ್ ಪರ 325 ಸಾಕ್ಷಿಗಳಿದ್ದರು. ಪ್ರಕರಣದ ವಿಚಾರಣೆ ಸುದೀರ್ಘ ಸಮಯ ತೆಗೆದುಕೊಳ್ಳಲಿದೆ ಎನ್ನುವುದು ಅಂದೇ ತನಗೆ ಗೊತ್ತಾಗಿತ್ತು, ಆದರೆ ತಾನು ಬಿಡುಗಡೆಗೊಳ್ಳುತ್ತೇನೆ ಎನ್ನುವುದು ತನಗೆ ಮನದಟ್ಟಾಗಿತ್ತು ಎಂದು ಆಂಗ್ಲ ಸುದ್ದಿವಾಹಿನಿಯೊಂದಿಗೆ ಮಾತನಾಡಿದ ಶಾ ಹೇಳಿದ. ಆತ ಜೈಲಿನಲ್ಲಿದ್ದಾಗ ಧನಾತ್ಮಕವಾಗಿರಲು ಕುರ್ ಆನ್ ಪಠಣ, ಬ್ಯಾಡ್ಮಿಂಟನ್ ಆಟ ಮತ್ತು ಓದುವಿಕೆಯಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದ.

ಸರಣಿ ಸ್ಫೋಟ ಪ್ರಕರಣದ ನಿಜವಾದ ತಪ್ಪಿತಸ್ಥರನ್ನು ಬಂಧಿಸಲೇಬೇಕು. ನನ್ನಂತೆ ಪ್ರಕರಣದ ಸಂತ್ರಸ್ತರಿಗೂ ನ್ಯಾಯ ಸಿಗಬೇಕು ಎಂದು ಶಾ ಹೇಳಿದ.

ಬಂಧನದ ಸಂದರ್ಭ ಶಾ ಕಾಶ್ಮೀರ ವಿವಿಯಲ್ಲಿ ಇಸ್ಲಾಮಿಕ್ ಅಧ್ಯಯನದ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದ. ದಿಲ್ಲಿಯಲ್ಲಿ ಸರಣಿ ಸ್ಫೋಟಗಳು ಸಂಭವಿಸಿದಾಗ ತಾನು ತರಗತಿ ಯಲ್ಲಿದ್ದೆ ಮತ್ತು ಹಾಜರಿ ಪುಸ್ತಕ ಇದಕ್ಕೆ ಸಾಕ್ಷಿಯಾಗಿತ್ತು. ಆದರೆ ಪೊಲೀಸರು ಅದನ್ನು ಕಿವಿಗೇ ಹಾಕಿಕೊಳ್ಳದೆ ಮನೆಯಿಂದ ತನ್ನನ್ನು ಎಳೆದೊಯ್ದಿದ್ದರು ಎಂದ ಆತ, ತಾನು ಚಿಕ್ಕಮಗುವಾಗಿದ್ದಾಗ ಒಮ್ಮೆ ಮಾತ್ರ ದಿಲ್ಲಿಗೆ ಭೇಟಿ ನೀಡಿದ್ದೆ ಮತ್ತು ಜೈಲಿಗೆ ಸೇರುವ ಮುನ್ನ ತನ್ನ ಸಹ ಆರೋಪಿಯ ಪರಿಚಯವೇ ತನಗಿರಲಿಲ್ಲ ಎಂದು ಹೇಳಿದ.

 ತಾವು ಮೊದಲು ಮನುಷ್ಯರು, ಬಳಿಕ ಪೊಲೀಸರು ಎನ್ನುವುದನ್ನು ಅವರು ಅರ್ಥ ಮಾಡಿಕೊಳ್ಳಬೇಕು ಎಂಬ ಒಂದೇ ಮಾತನ್ನು ಪೊಲೀಸರಿಗೆ ಹೇಳಲು ಬಯಸುತ್ತೇನೆ. ಅವರು ಹೆಚ್ಚು ಮಾನವೀಯವಾಗಿ ವರ್ತಿಸಬೇಕು ಎಂದು ಶಾ ನುಡಿದ.

ಜೈಲಿನಲ್ಲಿದ್ದೇ ಸ್ನಾತಕೋತ್ತರ ಪದವಿಯನ್ನು ಮುಗಿಸಿರುವ ಶಾ, ಭಯೋತ್ಪಾದನೆ ಆರೋಪದಲ್ಲಿ ತನ್ನಂತೆ ಜೈಲಿನಲ್ಲಿ ಕೊಳೆಯುತ್ತಿರುವ ಅಮಾಯಕ ಹುಡುಗರಿಗಾಗಿ ಕೆಲಸ ಮಾಡಲು ಬಯಸಿದ್ದೇನೆ ಎಂದು ಹೇಳಿದ. ತಾನು ನಿಜಕ್ಕೂ ಅದೃಷ್ಟಶಾಲಿ,ಜೈಲಿನಿಂದ ಮುಕ್ತನಾದೆ ಎಂದು ಆತ ನುಡಿದ.

ಸದ್ಯಕ್ಕೆ ಹೆತ್ತವರ ಜೊತೆ ಹೆಚ್ಚಿನ ಸಮಯವನ್ನು ಕಳೆಯುವುದು ಶಾ ಬಯಕೆ. ತಾನು ಅವರ ಸೇವೆ ಮಾಡಬೇಕಾಗಿದ್ದ ಕಾಲದಲ್ಲಿ ಅವರು ತನಗಾಗಿ ನ್ಯಾಯಾಲಯಗಳನ್ನು ಸುತ್ತಬೇಕಾಯಿತು ಎಂದು ನೋವಿನಿಂದ ಆತ ನುಡಿದ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X