Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾದಕ ದ್ರವ್ಯದ ವಿರುದ್ಧ ಸಮರ ಸಾರೋಣ:...

ಮಾದಕ ದ್ರವ್ಯದ ವಿರುದ್ಧ ಸಮರ ಸಾರೋಣ: ನೌಶಾದ್ ಬಾಖವಿ

ಸುನ್ನಿ ಸಂದೇಶ ಪತ್ರಿಕೆಯ 15ನೆ ವಾರ್ಷಿಕೋತ್ಸವ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ18 Feb 2017 10:36 PM IST
share
ಮಾದಕ ದ್ರವ್ಯದ ವಿರುದ್ಧ ಸಮರ ಸಾರೋಣ: ನೌಶಾದ್ ಬಾಖವಿ

ಮಂಗಳೂರು, ಫೆ.18: ಕುಟುಂಬ ಮತ್ತು ಸಮಾಜವನ್ನು ಛಿದ್ರಗೊಳಿಸುವ, ಮನುಷ್ಯತ್ವಕ್ಕೆ ಅಪಚಾರ ಎಸಗುವ ಮಾದಕ ದ್ರವ್ಯವು ಯುವ ಜನಾಂಗದ ಸರ್ವನಾಶಕ್ಕೆ ಕಾರಣವಾಗುತ್ತಿವೆ. ಸತ್ಯದ ಪಥದಲ್ಲಿ ಸಾಗಬೇಕಾದ ಯುವಕರು ಮಾದಕ ದ್ರವ್ಯದ ದಾಸರಾಗಿ ಕುಟುಂಬ, ಸಮಾಜ, ಧರ್ಮದ ಅಧಃಪತನಕ್ಕೆ ಕಾರಣವಾಗುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಸಮಾಜದ ಪ್ರಜ್ಞಾವಂತ ನಾಗರಿಕರು ಮಾದಕ ದ್ರವ್ಯದ ವಿರುದ್ಧ ಸಮರ ಸಾರುವ ಅಗತ್ಯವಿದೆ ಎಂದು ಅಂತಾರಾಷ್ಟ್ರೀಯ ಖ್ಯಾತಿಯ ಪ್ರಭಾಷಣಗಾರ, ಯುವ ವಿದ್ವಾಂಸ ಎ.ಎಂ. ನೌಶಾದ್ ಬಾಖವಿ ಹೇಳಿದರು.

ಕರ್ನಾಟಕ ಇಸ್ಲಾಮಿಕ್ ಸಾಹಿತ್ಯ ಅಕಾಡಮಿ (ಕಿಸಾ) ಹೊರತರುವ ಸುನ್ನಿ ಸಂದೇಶ ಮಾಸಪತ್ರಿಕೆಯ 15ನೆ ವಾರ್ಷಿಕೋತ್ಸವದ ಪ್ರಯುಕ್ತ ಮಾದಕ ದ್ರವ್ಯದ ವಿರುದ್ಧ ಜನಾಂದೋಲನ ಕಾರ್ಯಕ್ರಮದ ಅಂಗವಾಗಿ ನಗರದ ನೆಹರು ಮೈದಾನದ ಶೈಖುನಾ ಕೋಟುಮಲ ಬಾಪು ಉಸ್ತಾದ್ ವೇದಿಕೆಯಲ್ಲಿ ಶನಿವಾರ ರಾತ್ರಿ ನಡೆದ ಬೃಹತ್ ಸಮಾವೇಶದಲ್ಲಿ 'ಯುವತ್ವ' ಎಂಬ ವಿಷಯದಲ್ಲಿ ಅವರು ಮುಖ್ಯಪ್ರಭಾಷಣಗೈದರು.

ಮಾದಕ ದ್ರವ್ಯದ ಪ್ರಶ್ನೆ ಬಂದಾಗ 'ಧರ್ಮ'ಗಳು ಚರ್ಚೆಗೊಳಗಾಗಬಾರದು. ಎಳೆಯ ಪ್ರಾಯದಲ್ಲೇ ಮಕ್ಕಳಿಗೆ ಉತ್ತಮ ಸಂಸ್ಕಾರಗಳನ್ನು ಕಲಿಸಿಕೊಡುವ ಮೂಲಕ ಅವರನ್ನು ಲಹರಿ ಮುಕ್ತಗೊಳಿಸಬೇಕಾಗಿದೆ ಎಂದು ನೌಶಾದ್ ಬಾಖವಿ ನುಡಿದರು.

ಸಮಸ್ತ ಕೇಂದ್ರ ಮುಶಾವರದ ಉಪಾಧ್ಯಕ್ಷ ಶೈಖುನಾ ಕೆ.ಪಿ. ಅಬ್ದುಲ್ ಜಬ್ಬಾರ್ ಮುಸ್ಲಿಯಾರ್ ಮಿತ್ತಬೈಲು ದುಆಗೈದರು. ಸಮಸ್ತ ದಕ್ಷಿಣ ಕರ್ನಾಟಕ ಮುಶಾವರದ ಪ್ರಧಾನ ಕಾರ್ಯದರ್ಶಿ ಅಲ್‌ಹಾಜ್ ಬಿ.ಕೆ. ಅಬ್ದುಲ್ ಖಾದಿರ್ ಅಲ್ ಖಾಸಿಮಿ ಬಂಬ್ರಾಣ ಕಾರ್ಯಕ್ರಮ ಉದ್ಘಾಟಿಸಿದರು.

ಸಮ್ಮೇಳನ ಸ್ವಾಗತ ಸಮಿತಿಯ ಅಧ್ಯಕ್ಷ ಎ.ಎಚ್. ನೌಶಾದ್ ಹಾಜಿ ಸೂರಲ್ಪಾಡಿ ಅಧ್ಯಕ್ಷತೆ ವಹಿಸಿದ್ದರು. ಸಮಿತಿಯ ಗೌರವಾಧ್ಯಕ್ಷ ಝಕರಿಯಾ ಅಲ್ ಮುಝೈನ್ ಜೋಕಟ್ಟೆ ಸ್ವಾಗತಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಮಾಜಿ ಸಚಿವ ಅಭಯಚಂದ್ರ ಜೈನ್ ಮತ್ತು ಉದ್ಯಮಿ ರಾಜೇಶ್ ನಾಯಕ್ ಉಳೆಪಾಡಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಅತ್ರಾಡಿ ಖಾಝಿ ವಿ.ಕೆ. ಅಬೂಬಕರ್ ಮುಸ್ಲಿಯಾರ್, ಸೈಯದ್ ಹುಸೈನ್ ಬಾಅಲವಿ ತಂಙಳ್ ಕುಕ್ಕಾಜೆ, ಸೈಯದ್ ಅಮೀರ್ ತಂಙಳ್ ಕಿನ್ಯ, ಕೆ.ಎಂ. ಉಸ್ಮಾನ್ ಫೈಝಿ ತೋಡಾರು, ಶಾಸಕ ಬಿ.ಎ.ಮೊಯ್ದಿನ್ ಬಾವಾ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್. ಖಾದರ್, ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಎಸ್.ಎಂ. ರಶೀದ್ ಹಾಜಿ, ಡಾ.ಯು.ಟಿ. ಇಫ್ತಿಕಾರ್, ಹಾಜಿ ಶರೀಫ್ ವೈಟ್‌ಸ್ಟೋನ್ ಜೋಕಟ್ಟೆ, ಹಾಜಿ ಕೆ.ಎಸ್. ಇಸ್ಮಾಯೀಲ್ ಕಲ್ಲಡ್ಕ, ಹಾಜಿ ಜಿ. ಅಬೂಬಕರ್ ಗೋಳ್ತಮಜಲು, ಉದ್ಯಮಿಗಳಾದ ಬಿ.ಎಂ. ಫಾರೂಕ್, ಬಿ.ಎಂ. ಮುಮ್ತಾಝ್ ಅಲಿ,  ಹಾಜಿ ಕೆ.ಎಂ. ಇಬ್ರಾಹೀಂ ಬಾಖವಿ ಕೆ.ಸಿ. ರೋಡು, ಕೆ.ಎಂ. ಶರೀಫ್ ಫೈಝಿ ಕಡಬ, ಹಾಜಿ ಇಬ್ರಾಹೀಂ ಕೋಡಿಜಾಲ್, ಮುಹಮ್ಮದ್ ಹಾಜಿ ಬೆಳ್ಳಾರೆ, ಹಾಜಿ ಐ. ಮೊಯ್ದಿನಬ್ಬ ಮಂಗಳೂರು, ಹುಸೈನ್ ದಾರಿಮಿ ರೆಂಜಲಾಡಿ, ಅಬ್ದುಲ್ ಅಝೀಝ್ ದಾರಿಮಿ ಕಲ್ಲೇಗ, ಅಬ್ದುಲ್ ಹಮೀದ್ ಹಾಜಿ ಗೋಲ್ಡನ್ ಕಲ್ಲಡ್ಕ, ಅಬ್ದುರ್ರವೂಫ್ ಪುತ್ತಿಗೆ, ಮುಸ್ತಫಾ ಕೆಂಪಿ, ಇಬ್ರಾಹೀಂ ಹಾಜಿ ಮದೀನಾ, ಇಕ್ಬಾಲ್ ಬಾಳಿಲ, ಆಸೀಫ್ ಇಕ್ಬಾಲ್ ಮುಲ್ಕಿ, ಎನ್.ಎಸ್. ಅಬ್ಬಾಸ್ ಹಾಜಿ, ಹನೀಫ್ ಹಾಜಿ ಬಂದರ್, ಮದರ್ ಇಂಡಿಯಾ ಲತೀಫ್, ಏರ್ ಇಂಡಿಯಾ ಉಸ್ಮಾನ್, ಇಸಾಕ್ ಹಾಜಿ ತೋಡಾರ್, ಸಿರಾಜ್ ಮೂಡಿಗೆರೆ, ಮುನೀರ್ ಅಹ್ಮದ್ ಶಿರಸಿ ಎಚ್‌ಕೆಎಚ್, ಅಬ್ದುಲ್ ಮಜೀದ್ ಸಿತಾರ್, ಹಾಜಿ ಎಂ.ಎ. ಅಬ್ದುಲ್ಲ ರೆಂಜಾಡಿ, ಹಾಜಿ ಇಬ್ರಾಹೀಂ ಕೊಂಬಕುದಿ, ನೂರುದ್ದೀನ್ ಸಾಲ್ಮರ, ಮುಹಮ್ಮದ್ ಮೋನು, ಮೆಟ್ರೋ ಶಾಹುಲ್ ಹಮೀದ್, ಫಿಶ್‌ಮೋನು ಮೂಡಿಗೆರೆ, ಟಿ.ಎಂ. ಶಹೀದ್, ಇ.ಕೆ. ರಫೀಕ್ ಕಣ್ಣೂರು, ಅಬ್ದುಲ್ ಹಮೀದ್ ಕಣ್ಣೂರು, ಸೈಯದ್ ಬಾಷಾ ತಂಙಳ್ ಮತ್ತಿತರರು ಉಪಸ್ಥಿತರಿದ್ದರು.

ಕಿಸಾ ಸಂಘಟನಾ ಕಾರ್ಯದರ್ಶಿ ಕೆ.ಐ. ಅಬ್ದುಲ್ ಖಾದಿರ್ ದಾರಿಮಿ ಕುಕ್ಕಿಲ ಕಿರಾಅತ್ ಪಠಿಸಿದರು. ಕಿಸಾ ಪ್ರಧಾನ ಕಾರ್ಯದರ್ಶಿ ಕೆ.ಎಲ್. ಉಮರ್ ದಾರಿಮಿ ಪಟ್ಟೋರಿ ದಿಕ್ಸೂಚಿ ಭಾಷಣಗೈದರು. ಸುನ್ನಿ ಸಂದೇಶ ಮಾಸಪತ್ರಿಕೆಯ ಪ್ರಧಾನ ಸಂಪಾದಕ ಕೆ.ಎಸ್. ಹೈದರ್ ದಾರಿಮಿ ಕಲ್ಲಡ್ಕ ಪ್ರಾಸ್ತಾವಿಕ ಭಾಷಣಗೈದರು. ಸುನ್ನಿ ಸಂದೇಶ ಮಾಸಿಕದ ಸಂಪಾದಕ ಕೆ.ಎಂ.ಸಿದ್ದೀಕ್ ಫೈಝಿ ಕರಾಯ ವಂದಿಸಿದರು. ನೌಫಾಲ್ ಕುಡ್ತಮುಗೇರು, ರಫೀಕ್ ಮಾಸ್ಟರ್, ಕೆ.ಐ.ಮುಸ್ತಫಾ ಫೈಝಿ ಕಿನ್ಯ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X