Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ಕೇರಳದಲ್ಲಿ ಕಲಬೆರಕೆ ಜಾಲದ ಹೆಡೆಮುರಿ...

​ಕೇರಳದಲ್ಲಿ ಕಲಬೆರಕೆ ಜಾಲದ ಹೆಡೆಮುರಿ ಕಟ್ಟಿದ ದಿಟ್ಟೆ

ಐಎಎಸ್ ಅಧಿಕಾರಿಯ ’ಅನುಪಮ’ ಸೇವೆ

ವಾರ್ತಾಭಾರತಿವಾರ್ತಾಭಾರತಿ19 Feb 2017 1:47 PM IST
share
​ಕೇರಳದಲ್ಲಿ ಕಲಬೆರಕೆ ಜಾಲದ ಹೆಡೆಮುರಿ ಕಟ್ಟಿದ ದಿಟ್ಟೆ

ತಿರುವನಂತಪುರ,ಫೆ.19: ಈ ಮಹಿಳಾ ಐಎಎಸ್ ಅಧಿಕಾರಿಯ ಹೆಸರು ಕೇಳಿದರೆ ಅಪರಾಧಿಗಳು ಥರ ಥರ ನಡುಗುತ್ತಾರೆ. 2010ನೇ ಬ್ಯಾಚ್‌ನಲ್ಲಿ ನಾಲ್ಕನೆ ರ್ಯಾಂಕ್ ಪಡೆದು ಆಯ್ಕೆಯಾದ ಇವರು ಎಲ್ಲ ಸರಕಾರಿ ಅಧಿಕಾರಿಗಳಿಗೆ ಮಾದರಿ. ಪ್ರಾಮಾಣಿಕತೆ ಮತ್ತು ದಿಟ್ಟತನದಿಂದ ಪುರುಷ ಅಧಿಕಾರಿಗಳಿಗೆ ತಾವೇನೂ ಕಡಿಮೆಯಲ್ಲ ಎಂದು ತೋರಿಸಿಕೊಟ್ಟಿದ್ದಾರೆ. ಕೇರಳದಲ್ಲಿ ಕಲಬೆರಕೆ ದಂಧೆಯನ್ನು ಮಟ್ಟಹಾಕಿದ್ದು ಮಾತ್ರವಲ್ಲದೇ ಅಪರಾಧಿಗಳನ್ನು ಕಂಬಿ ಎಣಿಸುವಂತೆ ಮಾಡಿದ್ದು ಇವರ ಹೆಗ್ಗಳಿಕೆ.

ಈ ದಿಟ್ಟ ಅಧಿಕಾರಿಯ ಹೆಸರು ಟಿ.ವಿ.ಅನುಪಮ. ಕೇರಳದ ಆಹಾರ ಸುರಕ್ಷೆ ವಿಭಾಗದ ಆಯುಕ್ತೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಟ್ಟುನಿಟ್ಟಿನ ಕಾನೂನು ಕ್ರಮಕ್ಕೆ ಹೆಸರಾದ ಇವರು, ಅಕ್ರಮ ಕಲಬೆರಕೆ ದಂಧೆಯಲ್ಲಿ ತೊಡಗಿದವರಿಗೆ ಸಿಂಹಸ್ವಪ್ನ. ಏಕಕಾಲಕ್ಕೆ ವಿವಿಧೆಡೆ ದಾಳಿ ನಡೆಸಿ ಈ ದಂಧೆಯನ್ನು ಮಟ್ಟಹಾಕಿದ್ದಾರೆ.

ಸಿಕ್ಕಿಬೀಳುವ ಭಯ ಹಾಗೂ ಕಾನೂನು ಕ್ರಮದ ಭೀತಿಯಿಂದಾಗಿ ಕಲಬೆರಕೆ ದಂಧೆಯಲ್ಲಿ ತೊಡಗಿದ್ದವರು ತಮ್ಮ ದಂಧೆಯನ್ನು ಸ್ಥಗಿತಗೊಳಿಸಿದ್ದಾರೆ. ಕಳೆದ 15 ತಿಂಗಳಲ್ಲಿ 6000 ಕಲಬೆರಕೆ ಆಹಾರ ಮಾದರಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿರುವ ಇವರು, 750ಕ್ಕೂ ಹೆಚ್ಚು ಮಂದಿಯ ವಿರುದ್ಧ ಆಹಾರ ಕಲಬೆರಕೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದರಿಂದಾಗಿ ದೇಶದಲ್ಲೇ ಅತ್ಯಂತ ಕಠಿಣ ಹಾಗೂ ದಿಟ್ಟ ಐಎಎಸ್ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.


ಹಲವು ಮಾರುಕಟ್ಟೆಗಳ ಮೇಲೆ ಇವರು ದಾಳಿ ನಡೆಸಿದ ವೇಳೆ, ಶೇಕಡ 300ರಷ್ಟು ಕೀಟನಾಶಕಗಳಿರುವ ಮಾದರಿಯನ್ನೂ ಪತ್ತೆಹಚ್ಚಿದ್ದಾರೆ. ಜನ ತಮಗೆ ಬೇಕಾದ ತರಕಾರಿಗಳನ್ನು ತಾವೇ ಬೆಳೆಸಿಕೊಳ್ಳಲು ಅನುಪಮ ಉತ್ತೇಜನ ನೀಡಿ, ಇದಕ್ಕಾಗಿಯೇ ಪ್ರಚಾರಾಂದೋಲನವನ್ನೂ ಕೈಗೊಂಡಿದ್ದಾರೆ. ಸರಕಾರವೂ ಇದಕ್ಕೆ ಪ್ರೋತ್ಸಾಹ ನೀಡಿ ಆಂದೋಲನ ಯಶಸ್ವಿಯಾಯಿತು. ಈ ಮೊದಲು ಕೇರಳಕ್ಕೆ ಅಗತ್ಯವಾಗಿದ್ದ ಶೇಕಡ 70ರಷ್ಟು ತರಕಾರಿ ಕರ್ನಾಟಕ ಹಾಗೂ ತಮಿಳುನಾಡಿನಿಂದ ಬರುತ್ತಿತ್ತು. ಇದೀಗ ಶೇಕಡ 70ರಷ್ಟನ್ನು ಕೇರಳಿಗರೇ ಬೆಳೆಯುತ್ತಿದ್ದಾರೆ.

ಕೃಪೆ: https://www.kenfolios.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X