Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಇನ್ಫೋಸಿಸ್ ಆಡಳಿತದ ವಿರುದ್ಧ ಸರ್ಕಾರಿ...

ಇನ್ಫೋಸಿಸ್ ಆಡಳಿತದ ವಿರುದ್ಧ ಸರ್ಕಾರಿ ಸಂಸ್ಥೆಗಳಿಗೆ ಅನಾಮಧೇಯ ದೂರು

ವಾರ್ತಾಭಾರತಿವಾರ್ತಾಭಾರತಿ20 Feb 2017 3:34 PM IST
share
ಇನ್ಫೋಸಿಸ್ ಆಡಳಿತದ ವಿರುದ್ಧ ಸರ್ಕಾರಿ ಸಂಸ್ಥೆಗಳಿಗೆ ಅನಾಮಧೇಯ ದೂರು

ಬೆಂಗಳೂರು, ಫೆ.20: ಇನ್ಫೋಸಿಸ್ ಆಡಳಿತ ಮಂಡಳಿಯು ಗಂಭೀರ ಕಾರ್ಪೊರೇಟ್ ವಿಷಯಗಳನ್ನು ಮತ್ತು ಸಿಇಒ ವಿಶಾಲ್ ಸಿಕ್ಕಾ ಅವರಿಗೆ ಸಂಬಂಧಿಸಿದ ಹಿತಾಸಕ್ತಿಗಳ ಸಂಘರ್ಷದ ವಿಷಯಗಳನ್ನು ಬಗೆಹರಿಸಿಲ್ಲ ಎಂದು ಆರೋಪಿಸಿ ಸೆಬಿ ಮತ್ತು ಅಮೆರಿಕದ ಸೆಕ್ಯೂರಿಟಿಸ್ ಎಕ್ಸಚೇಂಜ್ ಕಮಿಷನ್(ಎಸ್‌ಇಸಿ)ಗಳಿಗೆ ಇ-ಮೇಲ್ ಮೂಲಕ ಅನಾಮಿಕ ದೂರೊಂದು ಸಲ್ಲಿಕೆಯಾಗಿದೆ.

ದೇಶದ ಎರಡನೇ ಅತಿ ದೊಡ್ಡ ಐಟಿ ಕಂಪನಿಯಾಗಿರುವ ಇನ್ಫೋಸಿಸ್‌ನ ಶೇರುಗಳು ಭಾರತೀಯ ಮತ್ತು ಅಮೆರಿಕನ್ ಶೇರು ವಿನಿಮಯ ಕೇಂದ್ರಗಳಲ್ಲಿ ವಹಿವಾಟಾಗುತ್ತಿವೆ.

ತಾನು ಕಂಪನಿಯ ಓರ್ವ ಉದ್ಯೋಗಿ ಎಂದು ಹೇಳಿಕೊಂಡಿರುವ ದೂರುದಾರರು, ತಾನು ಸೆಬಿ ಮತ್ತು ಎಸ್‌ಇಸಿ ಜೊತೆ ಮಾತನಾಡಲು ಮತ್ತು ಮಾಹಿತಿಯನ್ನು ಬಹಿರಂಗಗೊಳಿಸಲು ಸಿದ್ಧ, ಆದರೆ ತನಗೆ ರಕ್ಷಣೆ ಒದಗಿಸಬೇಕು ಎಂದು ಹೇಳಿದ್ದಾರೆ.

ಈ ಆರೋಪಗಳನ್ನು ನಿರಾಕರಿಸಿರುವ ಇನ್ಫೋಸಿಸ್ ಇವೆಲ್ಲ ಸುಳ್ಳು, ದುರುದ್ದೇಶಪೂರಿತ ಮತ್ತು ಮಾನಹಾನಿಕರ ಆರೋಪಗಳು ಎಂದು ಹೇಳಿದೆ. ದೂರುಗಳನ್ನು ತಾನು ಗಂಭೀರವಾಗಿ ಪರಿಗಣಿಸುತ್ತೇನೆ ಮತ್ತು ತನಗೆ ಬರುವ ದೂರುಗಳ ತನಿಖೆಗಾಗಿ ಸೂಕ್ತ ಪ್ರಕ್ರಿಯೆ ಇದೆ. ದೂರು ತನಗೆ ನೇರವಾಗಿ ಅಥವಾ ನಿಯಂತ್ರಣ ಪ್ರಾಧಿಕಾರಗಳ ಮೂಲಕ ಬಂದರೆ ತಾನು ಅದಕ್ಕೆ ಉತ್ತರಿಸುತ್ತೇನೆ ಎಂದು ಅದು ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.

ಪನಾಯಾ ಕಂಪನಿಯನ್ನು 200 ಮಿ.ಡಾ.ಗಳಿಗೆ ಖರೀದಿಸಿರುವುದು ಹಿತಾಸಕ್ತಿಗಳ ಸಂಘರ್ಷದ ವಿಷಯವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮಾಜಿ ಮುಖ್ಯ ಹಣಕಾಸು ಅಧಿಕಾರಿ ರಾಜೀವ್ ಬನ್ಸಲ್ ಅವರು ತನ್ನ ನಿರ್ಗಮನ ಪೂರ್ವ ಅವಧಿಯಲ್ಲಿ ನಡೆದಿದ್ದ ಈ ಖರೀದಿಯ ಬಗ್ಗೆ ಅಸಮಾಧಾನಗೊಂಡಿದ್ದರು ಎಂದು ಆಂಗ್ಲ ದೈನಿಕವೊಂದು ಇತ್ತೀಚಿಗೆ ವರದಿ ಮಾಡಿತ್ತು.

 ಸೆಬಿಗೆ ಬಂದಿರುವ ದೂರಿಗೆ ಸಂಬಂಧಿಸಿದಂತೆ ನಾವು ಕಂಪನಿಯ ಉತ್ತರವನ್ನು ಕೇಳಿದ್ದೇವೆ ಮತ್ತು ಅದು ಶೇರುಗಳಿಗೆ ಸಂಬಂಧಿತ ಕಾನೂನುಗಳನ್ನು ಉಲ್ಲಂಘಿಸಿದೆಯೇ ಎನ್ನುವುದನ್ನು ಪರಿಶೀಲಿಸಲಿದ್ದೇವೆ ಎಂದು ಹಿರಿಯ ಸೆಬಿ ಅಧಿಕಾರಿಯೋರ್ವರು ತಿಳಿಸಿದರು.

ಪನಾಯಾ ಖರೀದಿಯಲ್ಲಿ ತಾನು ಯಾವುದೇ ತಪ್ಪು ಮಾಡಿಲ್ಲ ಎಂದು ಇನ್ಫೋಸಿಸ್ ಹೇಳಿಕೊಂಡಿದೆ. ಫೆ.13ರಂದು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಪನಾಯಾ ಖರೀದಿಯಲ್ಲಿ ಸಿಇಒ ಸಿಕ್ಕಾ ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳುವ ಮೂಲಕ ಆಡಳಿತ ಮಂಡಳಿಯು ಅವರಿಗೆ ಬೆಂಬಲವಾಗಿ ನಿಂತಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X