Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು: ಕೆಮ್ಮಾಯಿ ಪ್ರದೇಶದಲ್ಲಿ...

ಪುತ್ತೂರು: ಕೆಮ್ಮಾಯಿ ಪ್ರದೇಶದಲ್ಲಿ ಸರ್ವಜ್ಞ ವೃತ್ತ ನಿರ್ಮಾಣಕ್ಕೆ ಶಾಸಕಿ ಶಕುಂತಲಾ ಶೆಟ್ಟಿ ಭರವಸೆ

ಕವಿ ಸರ್ವಜ್ಞ ಜಯಂತಿ ಆಚರಣೆ

ವಾರ್ತಾಭಾರತಿವಾರ್ತಾಭಾರತಿ20 Feb 2017 4:45 PM IST
share
ಪುತ್ತೂರು: ಕೆಮ್ಮಾಯಿ ಪ್ರದೇಶದಲ್ಲಿ ಸರ್ವಜ್ಞ ವೃತ್ತ ನಿರ್ಮಾಣಕ್ಕೆ ಶಾಸಕಿ ಶಕುಂತಲಾ ಶೆಟ್ಟಿ ಭರವಸೆ

ಪುತ್ತೂರು, ಫೆ.20: ಪುತ್ತೂರು- ಉಪ್ಪಿನಂಗಡಿ ರಸ್ತೆ ಅಗಲೀಕರಣ ಕಾಮಗಾರಿ ಪೂರ್ಣಗೊಂಡ ಬಳಿಕ ಕೆಮ್ಮಾಯಿ ಅಥವಾ ಇನ್ನಿತರ ಪ್ರದೇಶದಲ್ಲಿ ರಸ್ತೆಯಲ್ಲಿ ಸರ್ವಜ್ಞ ವೃತ್ತ ನಿರ್ಮಾಣಕ್ಕಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕಿ ಹಾಗೂ ರಾಜ್ಯ ಸಂಸದೀಯ ಕಾರ್ಯದರ್ಶಿ ಶಕುಂತಲಾ ಶೆಟ್ಟಿ ಭರವಸೆ ನೀಡಿದರು.

ಅವರು ಸೋಮವಾರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ಕುಲಾಲ ಸಮಾಜ ಸೇವಾ ಸಂಘದ ಜಂಟಿ ಆಶ್ರಯದಲ್ಲಿ ಪುತ್ತೂರು ಪುರಭವನದಲ್ಲಿ ನಡೆದ ಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಡು ಬಡತನದಲ್ಲಿ ಹುಟ್ಟಿ ಶಿಕ್ಷಣ ವಂಚಿತರಾಗಿದ್ದ ಸರ್ವಜ್ಞ ಅವರು ಜಗತ್ತನ್ನು ನೋಡುತ್ತಲೇ ತನ್ನ ಸಂದೇಶಗಳ ಮೂಲಕ ಬದಲಾವಣೆಗಾಗಿ ಶ್ರಮಿಸಿದ್ದಾರೆ. ಸರ್ವಜ್ಞ ತನ್ನ ವಚನದಲ್ಲಿ ಹೇಳಿರುವುದನ್ನು ಬದುಕಿನಲ್ಲಿ ನಾವೆಲ್ಲರೂ ಅಳವಡಿಸಿಕೊಳ್ಳಬೇಕಾಗಿದೆ ಎಂದರು.

ಸರ್ವಜ್ಞ ಸಂಸ್ಮರಣೆ ಮಾಡಿದ ಸಂತಫಿಲೋಮಿನಾ ಕಾಲೇಜ್‌ನ ಉಪನ್ಯಾಸಕ ಚಂದ್ರ ಶೇಖರ್ ಅವರು ಮಾತನಾಡಿ, ಜಾತಿ ಪದ್ದತಿ ಉತ್ತುಂಗ ಸ್ಥಿತಿಯಲ್ಲಿದ್ದಾಗ ಹಾವೇರಿಯಲ್ಲಿ ಜನಿಸಿದ ಸರ್ವಜ್ಞನು ಬಳಿಕ ತನ್ನ ತ್ರಿಪದಿಗಳ ಮೂಲಕ ಜಾತಿ ಧರ್ಮಗಳನ್ನು ಮೀರಿದ ಸಹಬಾಳ್ವೆಯ ಸಂದೇಶಗಳನ್ನು ನೀಡಿದ್ದಾರೆ. ವಿಶ್ವ ಬಂಧುತ್ವವನ್ನು ಜಗತ್ತಿಗೆ ಸಾರಿದ ಸರ್ವಜ್ಞನ ಪ್ರತಿಯೊಂದು ಮಾತುಗಳೂ ವೈಶಿಷ್ಟ್ಯ ಪೂರ್ಣವಾಗಿದ್ದು, ಸರಳವಾಗಿ ಕನ್ನಡ ಪದಪುಂಜಗಳನ್ನು ಪೋಣಿಸುತ್ತಾ, ತ್ರಿಪದಿಗಳ ಮುತ್ತುಗಳನ್ನು ನಮಗೆ ನೀಡಿದ್ದಾರೆ.

ನಮ್ಮ ನಡುವೆ ಜಾತಿ ಧರ್ಮಗಳ ಹೆಸರಿನಲ್ಲಿ ಅನಾರೋಗ್ಯಕರ ಪೈಪೋಟಿ ನಡೆಯುತ್ತಿರುವುದು ಸಮಾಜಕ್ಕೆ ಉತ್ತಮವಲ್ಲ. ಸಹಭಾಳ್ವೆಯ ಜೀವನದಿಂದ ಶಾಂತಿ ಕಂಡುಕೊಳ್ಳಲು ಸಾಧ್ಯ ಎಂಬುದನ್ನು ಸರ್ವಜ್ಞನ ವಚನಗಳು ತಿಳಿಸುತ್ತಿದೆ. ಸರ್ವಜ್ಞ ಯಾವುದೇ ಜಾತಿ ಪಂಗಡಕ್ಕೆ ಸೀಮಿತರಲ್ಲದ ಸರ್ವವ್ಯಾಪಿ ಎಂದರು.

ಪುತ್ತೂರು ಸಹಾಯಕ ಆಯುಕ್ತ ರಘುನಂದನ್ ಮೂರ್ತಿ ಸರ್ವಜ್ಞ ಸಂಸ್ಮರಣಾ ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತಾ.ಪಂ. ಅಧ್ಯಕ್ಷೆ ಭವಾನಿ ಚಿದಾನಂದ, ನ.ಪಂ. ಅಧ್ಯಕ್ಷೆ ಜಯಂತಿ ಬಲ್ನಾಡು, ಪುಡಾ ಅಧ್ಯಕ್ಷ ಕೌಶಲ್ ಪ್ರಸಾದ್ ಶೆಟ್ಟಿ ಶುಭ ಹಾರೈಸಿದರು.

ತಾಲೂಕು ಕುಲಾಲ ಸಮಾಜ ಸೇವಾ ಸಂಘದ ಅಧ್ಯಕ್ಷ ದಿನೇಶ್ ಪಿ.ವಿ, ತಹಸೀಲ್ದಾರ್ ಮತ್ತು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷೆ ಗಾರ್ಗಿ ಜೈನ್, ನಗರಸಭಾ ಪೌರಾಯುಕ್ತೆ ರೂಪಾ ಟಿ.ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಉಪತಹಶೀಲ್ದಾರ್ ಶ್ರೀಧರ್ ಸ್ವಾಗತಿಸಿ, ವಂದಿಸಿದರು. ಕಂದಾಯ ಇಲಾಖೆಯ ನಾಗೇಶ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X