Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದುಬಾರಿ ವಾಚು, ವಿಲಾಸಿ ಪೆನ್ ನಿಂದ...

ದುಬಾರಿ ವಾಚು, ವಿಲಾಸಿ ಪೆನ್ ನಿಂದ ಪೇಚಿಗೆ ಸಿಲುಕಿದ ಸಿಪಿಎಂ ಸಂಸದ !

ವಾರ್ತಾಭಾರತಿವಾರ್ತಾಭಾರತಿ20 Feb 2017 9:55 PM IST
share
ದುಬಾರಿ ವಾಚು, ವಿಲಾಸಿ ಪೆನ್ ನಿಂದ ಪೇಚಿಗೆ ಸಿಲುಕಿದ ಸಿಪಿಎಂ ಸಂಸದ !

ಕೊಲ್ಕತ್ತಾ: ಭಾರತೀಯ ಕಮ್ಯುನಿಸ್ಟ್ ಪಾರ್ಟಿ (ಮಾರ್ಕ್ಸಿಸ್ಟ್) ಸಂಸದರೊಬ್ಬರು ಮೌಂಟ್ ಬ್ಲಾಂಕ್ ಪೆನ್ ಹಾಗೂ ಆಪಲ್ ವಾಚ್ ಹೊಂದಿರುವ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಪೇಚಿಗೆ ಸಿಲುಕಿದ್ದಾರೆ.

ಸಿಪಿಐ (ಎಂ) ಸಂಸದ ರಿತಬ್ರತ ಬ್ಯಾನರ್ಜಿ ಅವರು ಮೋಹನ್ ಬಾಗನ್ ಹಾಗೂ ಈಸ್ಟ್ ಬೆಂಗಾಲ್ ತಂಡಗಳ ನಡುವಿನ ಫುಟ್‌ಬಾಲ್ ಪಂದ್ಯವನ್ನು ಫೆಬ್ರವರಿ 12ರಂದು ವೀಕ್ಷಿಸುತ್ತಿದ್ದ ವೇಳೆ, ಈ ದುಬಾರಿ ಪೆನ್ ಮತ್ತು ವಾಚ್ ಹೊಂದಿರುವ ಛಾಯಾಚಿತ್ರವನ್ನು ಸೆರೆಹಿಡಿಯಲಾಗಿತ್ತು. ಈ ಛಾಯಾಚಿತ್ರ ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಆಗುತ್ತಿದ್ದಂತೆ, ಸಿಪಿಎಂ ಸಂಸದರೊಬ್ಬರು ಇಷ್ಟು ದುಬಾರಿ ವಸ್ತುಗಳನ್ನು ಹೊಂದಿರಲು ಹೇಗೆ ಸಾಧ್ಯ ಎಂಬ ಚರ್ಚೆಗಳು ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದವು.

ಈ ಬಗ್ಗೆ ಚರ್ಚೆ ವ್ಯಾಪಕವಾಗುತ್ತಿದ್ದಂತೆ, ಆ ಪೋಸ್ಟ್ ಮಾಡಿದ ವ್ಯಕ್ತಿಯ ಜಾಡುಹಿಡಿದು, ಆತನ ಉದ್ಯೋಗದಾತರಿಗೆ ಇ-ಮೇಲ್ ಸಂದೇಶ ಕಳುಹಿಸಿದ್ದರಿಂದ ವಿವಾದ ಸಂಕೀರ್ಣವಾಯಿತು. "ನಿಮ್ಮ ಕಂಪನಿಯ ಉದ್ಯೋಗಿಯೊಬ್ಬ ನನ್ನ ವಿರುದ್ಧ ದ್ವೇಷಸಾಧಿಸುವ ಬರಹಗಳನ್ನು ಪ್ರಚುರಪಡಿಸುತ್ತಿದ್ದಾರೆ" ಎಂದು ಹೇಳಿದ್ದಲ್ಲದೇ, ಆತನ ವಿರುದ್ಧ ಪೊಲೀಸರಿಗೆ ದೂರು ನೀಡುವುದಾಗಿಯೂ ಬೆದರಿಕೆ ಹಾಕಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಸಂಸದರ ಈ ನಡೆ, ಸಾಮಾಜಿಕ ಜಾಲತಾಣಗಳಲ್ಲಿ ಮತ್ತಷ್ಟು ಟೀಕೆಗೆ ಗುರಿಯಾಯಿತು. ತಮ್ಮ ಬಗ್ಗೆ ಕಾರ್ಟೂನ್ ರಚಿಸಿದ ಪ್ರೊಫೆಸರ್ ಹಾಗೂ ಕಲಾವಿದರೊಬ್ಬರನ್ನು ಮಮತಾ ಬ್ಯಾನರ್ಜಿ ಜೈಲಿಗೆ ಕಳುಹಿಸಿದ ಘಟನೆಗೆ ಇದನ್ನು ಹೋಲಿಸಲಾಯಿತು. ಈ ಬಗ್ಗೆ ಪಕ್ಷ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಆದರೆ ಪಕ್ಷದ ಸಂಸದ ಹಾಗೂ ಪಾಲಿಟ್‌ಬ್ಯೂರೊ ಸದಸ್ಯ ಎಂ.ಡಿ.ಸಲೀಂ ಅವರು, "ಸಾಮಾಜಿಕ ಜಾಲತಾಣವು ಸಾರ್ವಜನಿಕ ವೇದಿಕೆಯಾಗಿದ್ದು, ಯಾರು ಬೇಕಾದರೂ ತಮ್ಮ ಅಭಿಪ್ರಾಯಗಳನ್ನು ಅಭಿವ್ಯಕ್ತಗೊಳಿಸಬಹುದು. ಆದರೆ ಯಾರಿಗೂ ಬೆದರಿಕೆ ಹಾಕುವುದು ಸ್ವೀಕಾರಾರ್ಹವಲ್ಲ. ಅದೂ ಎಡಪಕ್ಷದ ಸಂಸದರೊಬ್ಬರಿಂದ ಯಾರೂ ಇದನ್ನು ನಿರೀಕ್ಷಿಸುವುದಿಲ್ಲ" ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X