Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಪರಾಧ ಸಾಬೀತಾದ ಭಯೋತ್ಪಾದಕರಿಗೆ ಜಾಮೀನು,...

ಅಪರಾಧ ಸಾಬೀತಾದ ಭಯೋತ್ಪಾದಕರಿಗೆ ಜಾಮೀನು, ಪೆರೋಲ್ ಇಲ್ಲ: ಸುಪ್ರೀಂಕೋರ್ಟ್

ವಾರ್ತಾಭಾರತಿವಾರ್ತಾಭಾರತಿ21 Feb 2017 4:02 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಅಪರಾಧ ಸಾಬೀತಾದ ಭಯೋತ್ಪಾದಕರಿಗೆ ಜಾಮೀನು, ಪೆರೋಲ್ ಇಲ್ಲ: ಸುಪ್ರೀಂಕೋರ್ಟ್

ಹೊಸದಿಲ್ಲಿ, ಫೆ.21: ಅಪರಾಧ ಸಾಬೀತಾಗಿರುವ ಭಯೋತ್ಫಾದಕರ ವಿರುದ್ಧ ಕಠಿಣ ನಿಲುವು ಕೈಗೊಂಡಿರುವ ಸುಪ್ರೀಂಕೋರ್ಟ್, ಜನರನ್ನು ವಧಿಸಿ, ಹಲವು ವರ್ಷಗಳಿಂದ ಜೈಲುಗಳಲ್ಲಿ ಬಂಧಿಗಳಾಗಿರುವ ಇವರಿಗೆ ಕೌಟುಂಬಿಕ ಅಗತ್ಯತೆಗಳಿಗಾಗಿ ಪೆರೋಲ್ ಅಥವಾ ಮಧ್ಯಾಂತರ ಜಾಮೀನು ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದೆ.

"ಅಮಾಯಕರನ್ನು ನಿರ್ದಾಕ್ಷಿಣ್ಯವಾಗಿ ಹತ್ಯೆ ಮಾಡುವಂಥ ಹೇಯ ಕೃತ್ಯಗಳಲ್ಲಿ ನೀವು ತೊಡಗಿದ್ದರೆ, ನಿಮಗೆ ಕುಟುಂಬ ಹಾಗೂ ಜವಾಬ್ದಾರಿಗಳಿವೆ ಎಂದು ನೀವು ಸಮರ್ಥಿಸಿಕೊಳ್ಳಲಾಗದು. ಅಂಥ ಅಪರಾಧಗಳಲ್ಲಿ ಶಿಕ್ಷೆಗೆ ಒಳಗಾದ ಕ್ಷಣದಲ್ಲೇ, ನಿಮ್ಮ ಕುಟುಂಬ ಹಾಗೂ ಕುಟುಂಬ ಜೀವನದ ಜತೆಗಿನ ಎಲ್ಲ ಸಂಬಂಧಗಳೂ ಕಳಚಿಕೊಳ್ಳುತ್ತವೆ" ಎಂದು ನ್ಯಾಯಾಲಯ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ಹಾಗೂ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಹಾಗೂ ಸಂಜಯ್ ಕೃಷ್ಣ ಕೌಲ್ ಅವರನ್ನೊಳಗೊಂಡ ನ್ಯಾಯಪೀಠ, ಮಹ್ಮದ್ ನೌಶಾದ್ ಎಂಬ ಅಪರಾಧಿ ಮಧ್ಯಾಂತರ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿ ಈ ಅಭಿಪ್ರಾಯ ವ್ಯಕ್ತಪಡಿಸಿತು. 13 ಮಂದಿಯ ಸಾವು ಹಾಗೂ 38 ಮಂದಿ ಗಾಯಗೊಳ್ಳಲು ಕಾರಣವಾದ 1996ರ ಲಜಪತ್‌ನಗರ ಬಾಂಬ್ ಸ್ಫೋಟದಲ್ಲಿ ವಿಚಾರಣಾ ನ್ಯಾಯಾಲಯ ಹಾಗೂ ದಿಲ್ಲಿ ಹೈಕೋರ್ಟ್ ಮಹ್ಮದ್ ನೌಶಾದ್‌ಗೆ ಶಿಕ್ಷೆ ವಿಧಿಸಿತ್ತು. ವಿಚಾರಣಾ ನ್ಯಾಯಾಲಯ, ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದ್ದರೆ, ಆತ ಸಂಚುಕೋರರ ಪೈಕಿ ಒಬ್ಬ ಎಂಬ ಕಾರಣಕ್ಕೆ ದಿಲ್ಲಿ ಹೈಕೋರ್ಟ್ ಇದನ್ನು, ಜೀವಾವಧಿ ಶಿಕ್ಷೆಗೆ ಇಳಿಸಿತ್ತು.

"ನೀವು ಮಗ ಅಥವಾ ಮಗಳು ಇದ್ದಾರೆ ಎಂದು ಹೇಳುವಂತಿಲ್ಲ. ನೀವು ಜಾಮೀನಿಗೆ ಮನವಿ ಮಾಡಿಕೊಳ್ಳಲು ಸಾಧ್ಯವೇ ಇಲ್ಲ. ಕೆಳಹಂತದ ನ್ಯಾಯಾಲಯ ದಾಖಲಿಸಿದ ಶಿಕ್ಷೆಯನ್ನು ಪ್ರಶ್ನಿಸಿ, ನಿರಪರಾಧಿ ಎಂದು ಪ್ರತಿಪಾದಿಸುತ್ತಿದ್ದೀರಿ. ಅದನ್ನು ನಾವು ವಿಚಾರಣೆ ನಡೆಸಿ ನಿರ್ಧರಿಸುತ್ತೇವೆ. ಆದರೆ ಮಧ್ಯಾಂತರ ಜಾಮೀನು ಪಡೆಯಲು ನಿಮಗೆ ಅವಕಾಶ ನೀಡುವುದಿಲ್ಲ. ಏಕೆಂದರೆ ಕೆಳಹಂತದ ನ್ಯಾಯಾಲಯ ನಿಮ್ಮನ್ನು ಅಪರಾಧಿ ಎಂದು ಪರಿಗಣಿಸಿದ್ದು, ಹೈಕೋರ್ಟ್ ಕೂಡಾ ಇದನ್ನು ಎತ್ತಿಹಿಡಿದಿದೆ" ಎಂದು ಅರ್ಜಿ ವಜಾ ಮಾಡುವ ಮುನ್ನ ಸಿಜೆಐ ಹೇಳಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X