Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಿಯೋ ಪ್ರೈಮ್ ಆಫರ್ ಘೋಷಿಸಿದ ಮುಖೇಶ್...

ಜಿಯೋ ಪ್ರೈಮ್ ಆಫರ್ ಘೋಷಿಸಿದ ಮುಖೇಶ್ ಅಂಬಾನಿ

ವಾರ್ತಾಭಾರತಿವಾರ್ತಾಭಾರತಿ21 Feb 2017 3:07 PM IST
share
ಜಿಯೋ ಪ್ರೈಮ್ ಆಫರ್ ಘೋಷಿಸಿದ ಮುಖೇಶ್ ಅಂಬಾನಿ

ಮುಂಬೈ, ಫೆ.21: ರಿಲಯನ್ಸ್ ಜಿಯೊದ ಉಚಿತ ಹ್ಯಾಪಿ ನ್ಯೂ ಇಯರ್ ಆಫರ್ ಮಾರ್ಚ್ 31ರಂದು ಕೊನೆಗೊಳ್ಳುತ್ತಿದ್ದಂತೆಯೇ ಜಿಯೊ ಪ್ರೈಮ್ ಆಫರ್ ಜಾರಿಗೆ ಬರುವುದೆಂದು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಮಂಗಳವಾರ ಘೋಷಿಸಿದ್ದಾರೆ. ಈ ಹೊಸ ಸದಸ್ಯತ್ವ ಆಫರ್‌ ಜಿಯೊದ ಆರಂಭಿಕ ಗ್ರಾಹಕರನ್ನು ಗುರಿಯಾಗಿಸಿದ್ದು ಅವರು ಒಂದು ಸಲದ ಶುಲ್ಕವಾಗಿ ರೂ.99 ಪಾವತಿಸಿದಲ್ಲಿ ಮುಂದಿನ 12 ತಿಂಗಳುಗಳ ಕಾಲ ಉಚಿತ ಸೇವೆಗಳನ್ನು ಉಪಯೋಗಿಸಬಹುದಾಗಿದೆ.
ಜಿಯೊಗೆ 170 ದಿನಗಳಲ್ಲಿ 100 ಮಿಲಿಯಕ್ಕೂ ಅಧಿಕ ಗ್ರಾಹಕರು ದೊರೆತಿದ್ದಾರೆಂದು ಹೇಳಿದ ಅಂಬಾನಿ ಇದು ಭಾರತ ಹಾಗೂ ಭಾರತೀಯರ ಸಾಧನೆ ಎಂದು ಹೇಳಿಕೊಂಡರು.

170 ದಿನಗಳ ಪರ್ಯಂತ ಪ್ರತಿ ಸೆಕೆಂಡಿಗೆ ಏಳು ಗ್ರಾಹಕರಂತೆ ಹೊಸ ಗ್ರಾಹಕರ ಸೇರ್ಪಡೆಯಾಗಿದೆ ಎಂದರು. ಯಾವುದೇ ತಾಂತ್ರಿಕ ಕಂಪೆನಿಗೆ ಇಷ್ಟೊಂದು ಬೆಂಬಲ ಸಿಕ್ಕಿದ ಉದಾಹರಣೆಗಳಿಲ್ಲ ಎಂದು ಅವರು ಹೇಳಿಕೊಂಡರು.

ಜನವರಿ 2017ರಲ್ಲಿ ಜಿಯೊ ಗ್ರಾಹಕರು 100 ಕೋಟಿ ಜಿಬಿಗೂ ಅಧಿಕ ಡಾಟಾ ಉಪಯೋಗಿಸಿದ್ದಾರೆ. ಇದನ್ನು ಪರಿಗಣಿಸಿದರೆ ಪ್ರತಿ ದಿನಕ್ಕೆ 3.3 ಕೋಟಿಗೂ ಅಧಿಕ ಜಿಬಿ ಉಪಯೋಗವಾಗಿದೆ. ಮೊಬೈಲ್ ಡಾಟಾ ಉಪಯೋಗದಲ್ಲಿ ಭಾರತ ನಂಬರ್ 1 ದೇಶವಾಗಿ ಹೊರಹೊಮ್ಮಿದೆ ಎಂದು ಅವರು ಹೇಳಿದರು.

ಹೆಚ್ಚಿನ ಡಾಟಾ ವೀಡಿಯೊ ಆಗಿದ್ದು ಎಂದು ಹೇಳಿದ ಅವರು ಇತರ ದೇಶಗಳಂತೆಯೇ ಭಾರತ ಕೂಡ ಡಾಟಾ ಉಪಯೋಗಿಸಬಲ್ಲುದೆಂದು ಕಳೆದ ಆರು ತಿಂಗಳಲ್ಲಿ ವಿಶ್ವಕ್ಕೆ ತೋರಿಸಿದೆಯೆಂದರು.

ಜಿಯೊ ಟ್ಯಾರಿಫ್ ಪ್ಲಾನುಗಳು ಎಪ್ರಿಲ್ 1ರಿಂದ ಜಾರಿಗೆ ಬರುವುದು ಹಾಗೂ ಯಾವುದೇ ಹಿಡ್ಡನ್ ಚಾರ್ಜಸ್ ಇರುವುದಿಲ್ಲವೆಂದು ಅವರು ತಿಳಿಸಿದರು.

ಮಾರ್ಚ್ 31ರ ಮೊದಲು ಸೇರುವ ಸದಸ್ಯರಿಗೆ ಒಂದು ಸಲದ ಸದಸ್ಯತ್ವ ಶುಲ್ಕವಾಗಿ ರೂ.99 ವಿಧಿಸಲಾಗುವುದು ಇದು ಜಿಯೊ ಪ್ರೈಮ್ ಸದಸ್ಯತ್ವವಾಗುವುದು ಎಂದುಅವರು ಹೇಳಿದರು. ಒಂದು ವರ್ಷದ ನಂತರ ಜಿಯೊ ಪ್ರೈಮ್ ಸದಸ್ಯರು ತಮ್ಮ ಸದಸ್ಯತ್ವವನ್ನು ದಿನಕ್ಕೆ ರೂ. 10 ಅಥವಾ ತಿಂಗಳಿಗೆ ರೂ. 300 ನೀಡಿ ಉಳಿಸಿಕೊಳ್ಳಬಹುದಾಗಿದೆ ಎಂದು ಅಂಬಾನಿ ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X